ಬ್ರೇಕಿಂಗ್ ನ್ಯೂಸ್
28-09-21 05:58 pm Mangaluru Correspondent ಕ್ರೈಂ
ಮಂಗಳೂರು, ಸೆ.28: ಬ್ಯಾಂಕಿಗೆ ಹಣ ಕಟ್ಟಲು ತೆರಳುತ್ತಿದ್ದ ಪೆಟ್ರೋಲ್ ಪಂಪ್ ಮ್ಯಾನೇಜರ್ ಮೇಲೆ ಹಲ್ಲೆಗೈದು 4.20 ಲಕ್ಷ ರೂಪಾಯಿ ಹಣವನ್ನು ಸುಲಿಗೆ ಮಾಡಿಕೊಂಡು ಹೋದ ಘಟನೆ ನಗರದ ಚಿಲಿಂಬಿಯಲ್ಲಿ ನಡೆದಿದೆ.
ನಗರದ ಗಾಂಧಿ ನಗರದ ಆಶೀರ್ವಾದ್ ಪೆಟ್ರೋಲ್ ಪಂಪ್ ಮ್ಯಾನೇಜರ್ ಭೋಜಪ್ಪ (57) ಮಧ್ಯಾಹ್ನ 12.30ರ ಸುಮಾರಿಗೆ ಚಿಲಿಂಬಿಯ ಸಾರಸ್ವತ್ ಬ್ಯಾಂಕ್ ಶಾಖೆಗೆ ನಗದು ಕಟ್ಟಲೆಂದು 4.20 ಲಕ್ಷ ಹಣವನ್ನು ಬ್ಯಾಗಿನಲ್ಲಿ ಇಟ್ಟು ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ, ಭೋಜಪ್ಪ ಚಿಲಿಂಬಿಯಲ್ಲಿ ಬೈಕನ್ನು ಯು ಟರ್ನ್ ಮಾಡಿ ಬರುತ್ತಿದ್ದಾಗ ಅಲ್ಲಿ ಸ್ವಿಗ್ಗಿ ಟೀ ಶರ್ಟ್ ಹಾಕ್ಕೊಂಡು ಬೈಕಿನಲ್ಲಿ ನಿಂತಿದ್ದ ಇಬ್ಬರು ಕ್ರಿಕೆಟ್ ಬ್ಯಾಟಿನಲ್ಲಿ ಹಲ್ಲೆ ನಡೆಸಿದ್ದಾರೆ.

ಭೋಜಪ್ಪ ಅವರ ತಲೆ, ಭುಜಕ್ಕೆ ಬ್ಯಾಟಿನಲ್ಲಿ ಪೆಟ್ಟು ನೀಡಿದ್ದು, ಅವರಲ್ಲಿದ್ದ ಹಣದ ಗಂಟನ್ನು ಕಿತ್ತುಕೊಂಡು ಬೈಕಿನಲ್ಲಿ ಪರಾರಿಯಾಗಿದ್ದಾರೆ. ಭೋಜಪ್ಪ ತಲೆಗೆ ಹೆಲ್ಮೆಟ್ ಹಾಕಿದ್ದರಿಂದ ಅಪಾಯದಿಂದ ಬಚಾವ್ ಆಗಿದ್ದಾರೆ. ಇಲ್ಲದಿದ್ದರೆ ತಲೆಗೆ ಪೆಟ್ಟು ಬಿದ್ದು ಅಪಾಯಕ್ಕೀಡಾಗುತ್ತಿದ್ದರು. ಭೋಜಪ್ಪ ಅವರು ಸೋಮವಾರ ಪೆಟ್ರೋಲ್ ಪಂಪಿನಲ್ಲಿ ಕಲೆಕ್ಷನ್ ಆಗಿದ್ದ 7.50 ಲಕ್ಷ ನಗದನ್ನು ಬ್ಯಾಂಕಿಗೆ ತೆರಳಿ ಕಟ್ಟಿದ್ದರು. ಇಂದು ಮಧ್ಯಾಹ್ನ ಅದೇ ರೀತಿ ಹಣ ಕಟ್ಟುವುದಕ್ಕಾಗಿ ಬ್ಯಾಂಕಿಗೆ ತೆರಳುತ್ತಿದ್ದಾಗ ಆಗಂತುಕರು ಮೊದಲೇ ಹೊಂಚು ಹಾಕಿದ್ದು ಹಲ್ಲೆಗೈದು ಹಣವನ್ನು ದರೋಡೆ ನಡೆಸಿದ್ದಾರೆ.
ಪೆಟ್ರೋಲ್ ಪಂಪ್ ಅಥವಾ ಬ್ಯಾಂಕ್ ಶಾಖೆಯಿಂದ ಈ ಬಗ್ಗೆ ಮಾಹಿತಿ ಸೋರಿಕೆಯಾಗಿದ್ದರಿಂದಲೇ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ.
Mangalore Robbers snatch 4.20 lakhs cash from two after assaulting them with cricket bat near Chilimbi. The two were attacked by two persons who came on bike. Robbers had worn swiggy t-shirt. A case has been registered at the Urwa Police station.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm