ಬ್ರೇಕಿಂಗ್ ನ್ಯೂಸ್
10-09-20 12:52 pm Headline Karnataka News Network ಕ್ರೈಂ
ಅಯೋಧ್ಯೆ, ಸೆಪ್ಟೆಂಬರ್ 10: ರಾಮನ ಜನ್ಮಸ್ಥಾನ ಅಯೋಧ್ಯೆಯಲ್ಲಿ ರಾಮನ ಮಂದಿರಕ್ಕೆ ಅಡಿಗಲ್ಲು ಹಾಕಲಾಗಿದೆ. ದೇಶಾದ್ಯಂತ ರಾಮನ ಭಕ್ತರು ಬಹುಕಾಲದ ಬೇಡಿಕೆ ಬಹುಬೇಗ ಈಡೇರಲೆಂದು ಹಣದ ನೆರವನ್ನೂ ನೀಡುತ್ತಿದ್ದಾರೆ. ಆದರೆ, ಇದೇ ವೇಳೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಖಾತೆಗೇ ಕಿಡಿಗೇಡಿಗಳು ಕನ್ನ ಹಾಕಿದ್ದಾರೆ. ನಕಲಿ ಚೆಕ್ ಬಳಸಿ ಬ್ಯಾಂಕಿನಿಂದ ಹಣ ವಿತ್ಡ್ರಾ ಮಾಡಿಕೊಳ್ಳಲಾಗಿದೆ.
ಲಕ್ನೋದ ಬ್ಯಾಂಕ್ನಲ್ಲಿ ಇರುವ ಟ್ರಸ್ಟ್ ಖಾತೆಗಳಿಂದ ಹಣವನ್ನು ಲಪಟಾಯಿಸಲಾಗಿದೆ. ಎರಡು ಖಾತೆಗಳಿಂದ ಈ ಹಣವನ್ನು ವಿತ್ಡ್ರಾ ಮಾಡಲಾಗಿದೆ. ಎರಡು ಬಾರಿ ವಿತ್ಡ್ರಾ ಮಾಡಿದ ಬಳಿಕ ಮೂರನೇ ಬಾರಿಗೆ ಪ್ರಯತ್ನಿಸಿದಾಗ, ಬ್ಯಾಂಕ್ನವರಿಗೆ ಸಂದೇಹ ಬಂದಿದೆ. ಅವರು ಕೂಡಲೇ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಮಾಹಿತಿ ನೀಡಿದ್ದಾರೆ. ಆಗಲೇ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲು ಸೆಪ್ಟೆಂಬರ್ 1ರಂದು ಹಣ ವಿತ್ಡ್ರಾ ಮಾಡಿಕೊಳ್ಳಲಾಗಿತ್ತು. ನಂತರ 3ನೇ ತಾರೀಕಿನಂದು ಮತ್ತೆ ಹಣವನ್ನು ವಿತ್ಡ್ರಾ ಮಾಡಿಕೊಳ್ಳಲಾಗಿದೆ. ಮೂರನೇ ಬಾರಿಗೆ ಲಕ್ನೋದ ಬ್ಯಾಂಕ್ ಆಫ್ ಬರೋಡಾದಲ್ಲಿ 9.86 ಲಕ್ಷ ಚೆಕ್ ವಿತ್ ಡ್ರಾ ಮಾಡುವ ಯತ್ನದಲ್ಲಿ ಬ್ಯಾಂಕ್ ಅಧಿಕಾರಿಗಳಿಗೆ ಸಂಶಯ ಬಂದಿದ್ದು ಚಂಪತ್ ರಾಯ್ ಕರೆ ಮಾಡಿದ್ದಾರೆ.
ಸದ್ಯ ಅಪರಿಚಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ. ಈಗಾಗ್ಲೇ ನಕಲಿ ಚೆಕ್ ಬಳಸಿ ಸುಮಾರು 6 ಲಕ್ಷ ರೂಪಾಯಿ ವಿತ್ ಡ್ರಾ ಮಾಡಿರುವ ಬಗ್ಗೆ ಹೇಳಲಾಗುತ್ತಿದೆ. ಅತ್ತ ರಾಮನ ಮಂದಿರದ ಕೆಲಸ ಆಗುತ್ತಿದ್ದರೆ ಇತ್ತ ರಾಮನ ಹೆಸರಿನ ಹಣವನ್ನು ಕಿಡಿಗೇಡಿಗಳು ನುಂಗಲು ಯತ್ನಿಸಿದ್ದಾರೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm