ಬ್ರೇಕಿಂಗ್ ನ್ಯೂಸ್
10-09-20 12:52 pm Headline Karnataka News Network ಕ್ರೈಂ
ಅಯೋಧ್ಯೆ, ಸೆಪ್ಟೆಂಬರ್ 10: ರಾಮನ ಜನ್ಮಸ್ಥಾನ ಅಯೋಧ್ಯೆಯಲ್ಲಿ ರಾಮನ ಮಂದಿರಕ್ಕೆ ಅಡಿಗಲ್ಲು ಹಾಕಲಾಗಿದೆ. ದೇಶಾದ್ಯಂತ ರಾಮನ ಭಕ್ತರು ಬಹುಕಾಲದ ಬೇಡಿಕೆ ಬಹುಬೇಗ ಈಡೇರಲೆಂದು ಹಣದ ನೆರವನ್ನೂ ನೀಡುತ್ತಿದ್ದಾರೆ. ಆದರೆ, ಇದೇ ವೇಳೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಖಾತೆಗೇ ಕಿಡಿಗೇಡಿಗಳು ಕನ್ನ ಹಾಕಿದ್ದಾರೆ. ನಕಲಿ ಚೆಕ್ ಬಳಸಿ ಬ್ಯಾಂಕಿನಿಂದ ಹಣ ವಿತ್ಡ್ರಾ ಮಾಡಿಕೊಳ್ಳಲಾಗಿದೆ.
ಲಕ್ನೋದ ಬ್ಯಾಂಕ್ನಲ್ಲಿ ಇರುವ ಟ್ರಸ್ಟ್ ಖಾತೆಗಳಿಂದ ಹಣವನ್ನು ಲಪಟಾಯಿಸಲಾಗಿದೆ. ಎರಡು ಖಾತೆಗಳಿಂದ ಈ ಹಣವನ್ನು ವಿತ್ಡ್ರಾ ಮಾಡಲಾಗಿದೆ. ಎರಡು ಬಾರಿ ವಿತ್ಡ್ರಾ ಮಾಡಿದ ಬಳಿಕ ಮೂರನೇ ಬಾರಿಗೆ ಪ್ರಯತ್ನಿಸಿದಾಗ, ಬ್ಯಾಂಕ್ನವರಿಗೆ ಸಂದೇಹ ಬಂದಿದೆ. ಅವರು ಕೂಡಲೇ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಮಾಹಿತಿ ನೀಡಿದ್ದಾರೆ. ಆಗಲೇ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲು ಸೆಪ್ಟೆಂಬರ್ 1ರಂದು ಹಣ ವಿತ್ಡ್ರಾ ಮಾಡಿಕೊಳ್ಳಲಾಗಿತ್ತು. ನಂತರ 3ನೇ ತಾರೀಕಿನಂದು ಮತ್ತೆ ಹಣವನ್ನು ವಿತ್ಡ್ರಾ ಮಾಡಿಕೊಳ್ಳಲಾಗಿದೆ. ಮೂರನೇ ಬಾರಿಗೆ ಲಕ್ನೋದ ಬ್ಯಾಂಕ್ ಆಫ್ ಬರೋಡಾದಲ್ಲಿ 9.86 ಲಕ್ಷ ಚೆಕ್ ವಿತ್ ಡ್ರಾ ಮಾಡುವ ಯತ್ನದಲ್ಲಿ ಬ್ಯಾಂಕ್ ಅಧಿಕಾರಿಗಳಿಗೆ ಸಂಶಯ ಬಂದಿದ್ದು ಚಂಪತ್ ರಾಯ್ ಕರೆ ಮಾಡಿದ್ದಾರೆ.
ಸದ್ಯ ಅಪರಿಚಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ. ಈಗಾಗ್ಲೇ ನಕಲಿ ಚೆಕ್ ಬಳಸಿ ಸುಮಾರು 6 ಲಕ್ಷ ರೂಪಾಯಿ ವಿತ್ ಡ್ರಾ ಮಾಡಿರುವ ಬಗ್ಗೆ ಹೇಳಲಾಗುತ್ತಿದೆ. ಅತ್ತ ರಾಮನ ಮಂದಿರದ ಕೆಲಸ ಆಗುತ್ತಿದ್ದರೆ ಇತ್ತ ರಾಮನ ಹೆಸರಿನ ಹಣವನ್ನು ಕಿಡಿಗೇಡಿಗಳು ನುಂಗಲು ಯತ್ನಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm