ಬ್ರೇಕಿಂಗ್ ನ್ಯೂಸ್
10-09-20 01:28 pm Headline Karnataka News Network ಕ್ರೈಂ
ಚೆನ್ನೈ, ಸೆಪ್ಟೆಂಬರ್ 10: ಭಾರತೀಯ ಕ್ರಿಕೆಟ್ ತಂಡದ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬಿಸಿನೆಸ್ ಮ್ಯಾನ್ ಒಬ್ಬ ತನಗೆ ನಾಲ್ಕು ಕೋಟಿ ರೂಪಾಯಿ ವಂಚನೆ ಎಸಗಿದ್ದಾಗಿ ಚೆನ್ನೈ ಸಿಟಿ ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿರುವ ಹರ್ಭಜನ್ ಸಿಂಗ್ ಸದ್ಯಕ್ಕೆ ಚೆನ್ನೈನಲ್ಲಿ ತಂಡದ ಪರವಾಗಿ ಅಭ್ಯಾಸ ನಿರತರಾಗಿದ್ದಾರೆ. 2015ರಲ್ಲಿ ಚೆನ್ನೈನ ಜುಹು ಬೀಚ್ ನಲ್ಲಿ ವಿಹಾರ ಸಂದರ್ಭ ಪರಿಚಯ ಆಗಿದ್ದ ಜಿ. ಮಹೇಶ್ ಎನ್ನುವಾತ ಅನಂತರ ಗೆಳೆತನ ಸಂಪಾದಿಸಿದ್ದ. ಆಬಳಿಕ ಸಾಲದ ರೂಪದಲ್ಲಿ ಹಣ ಪಡೆದಿದ್ದು ಮತ್ತೆ ಹಿಂತಿರುಗಿಸಿಲ್ಲ. ಮಹೇಶ್ ನನ್ನು ಆಬಳಿಕ ಸಂಪರ್ಕಿಸಲು ಯತ್ನಿಸಿದಾಗ ತಪ್ಪಿಸುತ್ತಿದ್ದಾನೆ. ಕಳೆದ ಆಗಸ್ಟ್ 18ರಂದು 25 ಲಕ್ಷ ರೂಪಾಯಿ ಚೆಕ್ ನೀಡಿದ್ದ. ಆದರೆ ಚೆಕ್ ಖಾತೆಯಲ್ಲಿ ಹಣ ಇಲ್ಲದೆ ಬೌನ್ಸ್ ಆಗಿದೆ ಎಂದು ದೂರಿನಲ್ಲಿ ಹರ್ಭಜನ್ ತಿಳಿಸಿದ್ದಾರೆ.

ಇತ್ತೀಚೆಗೆ ಚೆನ್ನೈ ಪೊಲೀಸ್ ಕಮಿಷನರ್ ಅವರನ್ನು ಭೇಟಿಯಾಗಿದ್ದ ಹರ್ಭಜನ್ ಸಿಂಗ್, ಮಹೇಶ್ ಮತ್ತು ಕೆಲವರ ವಿರುದ್ಧ ದೂರು ನೀಡಿದ್ದರು. ಅದರಂತೆ ಪೊಲೀಸರು ತನಿಖೆ ಆರಂಭಿಸಿದ್ದು ಮಹೇಶ್ ನನ್ನು ವಿಚಾರಣೆಗೆ ಬರುವಂತೆ ಸಮನ್ಸ್ ನೀಡಿದ್ದರು. ಸಮನ್ಸ್ ಹಾಜರಾಗುವ ಬದಲು ಮಹೇಶ್ ಮದ್ರಾಸ್ ಹೈಕೋರ್ಟ್ ಕದ ತಟ್ಟಿದ್ದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ.
ಮಹೇಶ್ ಕೋರ್ಟಿಗೆ ಸಲ್ಲಿಕೆ ಮಾಡಿದ ಅಫಿಡವಿಟಲ್ಲಿ ಹರ್ಭಜನ್ ಸಿಂಗ್ ಬಳಿ ಹಣ ಸಾಲ ತೆಗೆದುಕೊಳ್ಳುವ ಸಂದರ್ಭ ತಾಲಂಬೂರಿನಲ್ಲಿರುವ ಜಾಗವನ್ನು ಅಡವು ಇಟ್ಟಿದ್ದೆ. ಆನಂತರ ಪವರ್ ಆಫ್ ಅಟಾರ್ನಿ ಡೀಡ್ ಕೂಡ ಹರ್ಭಜನ್ ಪರವಾಗಿ ನೀಡಿದ್ದೇನೆ. ತಿರುಪೂರ್ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಈ ಬಗ್ಗೆ ರಿಜಿಸ್ಟರ್ ಮಾಡಿಕೊಂಡಿರುವ ದಾಖಲೆ ಹೊಂದಿದ್ದೇನೆ. ಅಲ್ಲದೆ ಉಳಿದ ಹಣವನ್ನೂ ಪೂರ್ತಿಯಾಗಿ ಹಿಂತಿರುಗಿಸಿದ್ದೇನೆ ಎಂದು ಮಹೇಶ್ ತಿಳಿಸಿದ್ದಾನೆ.
Join our WhatsApp group for latest news updates
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm