ಬ್ರೇಕಿಂಗ್ ನ್ಯೂಸ್
29-09-21 05:50 pm Headline Karnataka News Network ಕ್ರೈಂ
ಬೆಂಗಳೂರು, ಸೆ. 29: ಹಣಕ್ಕಾಗಿ ವಕೀಲರೊಬ್ಬರನ್ನು ಅಪಹರಿಸಿ 30 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಬಿಲ್ಡರ್, ಫೈನಾನ್ಷಿಯರ್, ಐಟಿ ಕಂಪನಿ ಮಾಲೀಕ, ಗ್ಯಾಂಗ್ ಆರ್ಟಿಸ್ಟ್ ಮತ್ತು ಬೌನ್ಸರ್ಗಳು ಸೇರಿದಂತೆ 9 ಮಂದಿಯ ಗ್ಯಾಂಗ್ ಅನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಿಗಳರ ಪಾಳ್ಯ ಕರಿಹೋಬನಹಳ್ಳಿ ವಾಸಿ ಸಿದ್ದೇಶ್ (31), ಡಾಲರ್ಸ್ ಕಾಲೋನಿ 2ನೆ ಮೈನ್ ವಾಸಿ ವಿಜಯ್ಕುಮಾರ್.ಜಿ (33), ಬೊಮ್ಮನಹಳ್ಳಿ ನಿವಾಸಿ ಸಂಜಯ್.ಎಸ್ ಅಲಿಯಾಸ್ ಸಂಜು (27), ಶಾಂತಿಪ್ರಿಯ ಲೇಔಟ್ನ ನೆಲ್ಸನ್ಕುಮಾರ್.ಎಫ್ ಅಲಿಯಾಸ್ ನೆಲ್ಸನ್ (23), ಕತ್ರಿಗುಪ್ಪೆಯ ಯುಗಾನಂದ್.ಜಿ (22), ಬೆಟ್ಟಹಳ್ಳಿ ಲೇಔಟ್ ವಾಸಿ ನರೇಶ್ (30), ಜಗಜೀವನರಾಂ ನಗರದ ಅರುಣ್ಕುಮಾರ್.ಎಲ್ ಅಲಿಯಾಸ್ ಅರುಣ (29), ನ್ಯೂ ಗುಡ್ಡದಹಳ್ಳಿಯ ಯುವರಾಜ್.ಆರ್ (31), ಚಿಕ್ಕಮಧುರೆ ಗ್ರಾಮದ ಅಶೋಕ.ಕೆ(31) ಬಂತ ಆರೋಪಿಗಳು.

ನಾಗರಬಾವಿ ಮುಖ್ಯರಸ್ತೆ ಸ್ವಾತಿ ಹೊಟೇಲ್ ಬಳಿ ಸೆಪ್ಟೆಂಬರ್ 20 ರಂದು ಬೆಳಗ್ಗೆ 11.30ರ ಸಮಯದಲ್ಲಿ ವಕೀಲರಾದ ಅಭಯ್ ಆರ್. ಕುಲಕರ್ಣಿ ಎಂಬುವವರನ್ನು ಹಣಕಾಸಿನ ವಿಚಾರಕ್ಕೆ ಈ ಆರೋಪಿಗಳು 2 ಫಾಚ್ರ್ಯೂನರ್ ಕಾರುಗಳಲ್ಲಿ ಬಂದು ಅಪಹರಿಸಿ ಅಕ್ರಮ ಬಂಧನದಲ್ಲಿಟ್ಟಿದ್ದರು.
ನಂತರ ಮೊಬೈಲ್ ಮೂಲಕ ಅಭಯ್ ಆರ್.ಕುಲಕರ್ಣಿ ಅವರ ತಮ್ಮ ವರುಣ್ ಆರ್.ಕುಲಕರ್ಣಿ ಎಂಬುವವರಿಗೆ ಕರೆ ಮಾಡಿ 30 ಲಕ್ಷ ರೂ. ಹಣ ಕೊಡುವಂತೆ ಒತ್ತಾಯಿಸಿದ್ದರು. ಅಲ್ಲದೆ ಬಂಧನದಲ್ಲಿಟ್ಟಿದ್ದ ವ್ಯಕ್ತಿಗೆ ಹಾಕಿ ಸ್ಟಿಕ್ ಹಾಗೂ ಕೈಮುಷ್ಠಿಯಿಂದ ಗುದ್ದಿ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಹಾಕಿದ್ದರು.

ಈ ಸಂಬಂಧ ವರುಣ್ ಆರ್.ಕುಲಕರ್ಣಿ ಅವರು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ್ದ 2 ಬಿಳಿ ಬಣ್ಣದ ಫಾಚ್ರ್ಯೂನರ್ ಕಾರು, 1 ಹಾಕಿ ಸ್ಟಿಕ್, 9 ವಿವಿಧ ಕಂಪೆನಿಗಳ ಮೊಬೈಲ್ ಫೆಪೊನ್ಗಳನ್ನು ವಶಪಡಿಸಿಕೊಂಡು ಅಪಹರಣಕ್ಕೊಳಕಾಗಿದ್ದ ವಕೀಲರನ್ನು ಪೊಲೀಸರು ರಕ್ಷಿಸಿದ್ದಾರೆ.
ಬೆಂಗಳೂರು ಪಶ್ಚಿಮ ವಿಭಾಗದ ಉಪ ಪೊಲೀಸ್ ಕಮೀಷನರ್ ಡಾ.ಸಂಜೀವ್ ಎಂ.ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಕೆಂಗೇರಿ ಗೇಟ್ ಉಪ ವಿಭಾಗದ ಸಹಾಯಕಪೊಲೀಸ್ ಕಮೀಷನರ್ ಯು.ಡಿ.ಕೃಷ್ಣಕುಮಾರ್ ನಿರ್ದೇಶನದಲ್ಲಿ ಅನ್ನಪೂರ್ಣೇಶ್ವರಿ ಠಾಣೆ ಇನ್ಸ್ಪೆಕ್ಟರ್ ಲೋಹಿತ್ ಅವರ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
Bengaluru Kidnap Lawyer Kidnap Bengaluru Police Stunt Actors Sandalwood
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm