ಬ್ರೇಕಿಂಗ್ ನ್ಯೂಸ್
30-09-21 04:44 pm Mangaluru Correspondent ಕ್ರೈಂ
ಪುತ್ತೂರು, ಸೆ.30: ಹಿಂದು ಅಪ್ರಾಪ್ತ ಯುವತಿಯನ್ನು ಮುಸ್ಲಿಂ ಯುವಕನೊಬ್ಬ ತನ್ನ ಮನೆಯಲ್ಲಿ ಕೂಡಿಹಾಕಿದ್ದಾನೆ ಎಂಬ ಸುದ್ದಿ ತಿಳಿದ ಹಿಂದು ಸಂಘಟನೆಯ ಯುವಕರು ಆತನ ಮನೆ ಮುಂದೆ ಜಮಾಯಿಸಿ ಹೈಡ್ರಾಮಾ ನಡೆಸಿದ ಘಟನೆ ನಡೆದಿದೆ.
ಸೆ.29ರಂದು ಸಂಜೆ ಈಶ್ವರಮಂಗಲದ ಬಳಿಯ ಕೊಳ್ತಿಗೆ ಎಂಬಲ್ಲಿ ಘಟನೆ ನಡೆದಿದ್ದು, ಅಬುಬಕ್ಕರ್ ಸಿದ್ದಿಕ್ (26) ಎಂಬಾತ ಕೇರಳ – ಕರ್ನಾಟಕ ಗಡಿಭಾಗ ಕಾಸರಗೋಡು ಜಿಲ್ಲೆಯ ಆದೂರು ಠಾಣೆ ವ್ಯಾಪ್ತಿಯ ದಲಿತ ಬಾಲಕಿಯನ್ನು ಅಪಹರಿಸಿ ತಂದಿರಿಸಿದ್ದಾನೆಂದು ವದಂತಿ ಹರಡಿತ್ತು. ಅತ್ತ ಬಾಲಕಿಯ ಮನೆಯವರು ಕೂಡ 16 ವರ್ಷದ ಪುತ್ರಿ ನಾಪತ್ತೆಯಾಗಿದ್ದಾಗಿ ಆದೂರು ಠಾಣೆಯಲ್ಲಿ ದೂರು ನೀಡಿದ್ದರು.

ಮುಸ್ಲಿಂ ಮನೆಯಲ್ಲಿ ಹಿಂದು ಸಂಘಟನೆ ಕಾರ್ಯಕರ್ತರು ಜಮಾಯಿಸಿ, ಕೋಮು ದ್ವೇಷಕ್ಕೆ ಕಾರಣವಾಗುತ್ತಿರುವುದನ್ನು ಅರಿತ ಪೊಲೀಸರು ಮನೆಗೆ ಧಾವಿಸಿದ್ದಾರೆ. ಆದರೆ, ಪೊಲೀಸರು ಬಂದು ಮನೆಯ ಬಾಗಿಲು ತೆರೆಯುವಂತೆ ಹೇಳಿದರೂ, ಬಾಗಿಲು ತೆರೆಯಲಿಲ್ಲ. ಬಳಿಕ ಪೊಲೀಸರು ಮನೆಯವರಿಗೆ ಬಲವಂತಪಡಿಸಿ, ಬಾಗಿಲನ್ನು ತೆರೆಸಿದ್ದು, ಒಳಗೆ ಶೋಧ ಕಾರ್ಯ ನಡೆಸಿದ್ದಾರೆ. ಆದರೆ, ಮನೆಯೊಳಗೆ ಬಾಲಕಿ ಇಲ್ಲದಿರುವುದನ್ನು ಖಚಿತಪಡಿಸಿ, ಆರೋಪಿ ಅಬುಬಕ್ಕರ್ ಸಿದ್ದಿಕ್ ನನ್ನು ವಶಕ್ಕೆ ಪಡೆದು ಠಾಣೆಗೆ ತೆರಳಿದ್ದಾರೆ.
ಆನಂತರ, ಸಿದ್ದಿಕ್ ನಿಜ ವಿಚಾರವನ್ನು ಹೇಳಿದ್ದಾನೆ. ಒಂದು ವರ್ಷದಿಂದ ಬಾಲಕಿಯ ಜೊತೆ ಸ್ನೇಹದಲ್ಲಿದ್ದು, ಆಕೆಯೇ ಮದುವೆಯಾಗುವಂತೆ ಹೇಳಿದ್ದರಿಂದ ಕಾರಿನಲ್ಲಿ ತನ್ನ ಮನೆಗೆ ಕರೆತಂದಿದ್ದೆ. ಆದರೆ, ಮನೆಯಲ್ಲಿರಿಸಿದರೆ ತೊಂದರೆ ಆಗುತ್ತದೆ ಎಂದು ಪುತ್ತೂರಿನಲ್ಲಿ ಆಕೆಯನ್ನು ಇರಿಸಿದ್ದಾಗಿ ಹೇಳಿಕೆ ನೀಡಿದ್ದಾನೆ. ಆತನ ಮಾಹಿತಿಯಂತೆ, ಬೆಳ್ಳಾರೆ ಪೊಲೀಸರು ಬಾಲಕಿಯನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ವಿಚಾರಣೆ ನಡೆಸಿದ ಬಳಿಕ ಯುವಕ ಮತ್ತು ಬಾಲಕಿಯನ್ನು ಕಾಸರಗೋಡಿನ ಆದೂರು ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ. ಅಲ್ಲಿ ನಾಪತ್ತೆ ಕೇಸು ದಾಖಲಾಗಿದ್ದು, ಹುಡುಗಿ ಕೂಡ ಅಲ್ಲಿನ ನಿವಾಸಿಯಾಗಿರುವುದರಿಂದ ಅಲ್ಲಿನ ಪೊಲೀಸರೇ ವಿಲೇವಾರಿ ಮಾಡಲಿ ಎಂದು ಅವರ ವಶಕ್ಕೆ ಒಪ್ಪಿಸಿದ್ದಾರೆ.
After getting information that a minor Hindu girl had been abducted by Siddique from Koltige Kuntikan in the taluk and kept her in his home, the locals got together in large numbers in front of his house on Wednesday September 29. This development gave rise to a tense situation in the area.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm