ಬ್ರೇಕಿಂಗ್ ನ್ಯೂಸ್
10-09-20 04:30 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 10: ಡಾಕ್ಟರ್ ಅಜೀಜ್ ಪಾಷಾ ಜತೆ ನಟಿ ಸಂಜನಾ ಗಲ್ರಾನಿ ಮದುವೆ ಆಗಿದ್ದಾರಾ ಎಂಬ ಪ್ರಶ್ನೆ ಎಲ್ಲೆಡೆ ಚರ್ಚೆಯಾಗುತ್ತಿದ್ದು, ಅದಕ್ಕೆ ಪುಷ್ಟಿ ನೀಡುವಂತೆ ಫೋಟೋವೊಂದು ವೈರಲ್ ಆಗಿದೆ.
ನನಗಿನ್ನೂ ಮದುವೆ ಆಗಿಲ್ಲ ಎಂದು ಸಂಜನಾ ಹೇಳುತ್ತಿದ್ದರು. ಡ್ರಗ್ಸ್ ಕೇಸ್ನಲ್ಲಿ ಸಂಜನಾ, ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಪಡುತ್ತಿದ್ದಂತೆ ಅವರ ಮದುವೆ ಕುರಿತಾಗಿ ತರಹೇವಾರಿ ಬಿಸಿಬಿಸಿ ಸುದ್ದಿಗಳು ಹರಿದಾಡಿತ್ತು. ಸಂಜನಾ ಮತ್ತು ಅಜೀಜ್ ಪಾಷಾ ಇಬ್ಬರೂ ಲಿವ್ ಇನ್ ರಿಲೇಷನ್ಶಿಪ್ನಲ್ಲಿ ಇದ್ದರು ಎಂಬ ಸುದ್ದಿಯೂ ಹಬ್ಬಿತ್ತು. ಇದೀಗ ಅವರಿಬ್ಬರೂ ಮದುಮಕ್ಕಳ ಉಡುಗೆತೊಟ್ಟು ಅಕ್ಕಪಕ್ಕದಲ್ಲೇ ಕುಳಿತಿರುವ ಫೋಟೋ ವೈರಲ್ ಆಗಿದೆ.
ಡ್ರಗ್ಸ್ ಮಾಫಿಯಾದಲ್ಲಿ ಸಂಜನಾ ಇರುವುದಾಗಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಕಿಡಿಕಾರಿದ್ದರು. ತನ್ನ ಹೆಸರನ್ನು ಡ್ರಗ್ಸ್ ಪ್ರಕರಣದಲ್ಲಿ ಪ್ರಸ್ತಾಪಿಸಿದ್ದಕ್ಕೆ ಮೂರು ದಿನಗಳ ಹಿಂದಷ್ಟೇ ಪ್ರಶಾಂತ್ ಸಂಬರಗಿ ವಿರುದ್ಧ ಮಾಧ್ಯಮಗಳ ಮುಂದೆ ಕೆಂಡಾಮಂಡಲವಾದ ನಟಿ ಸಂಜನಾ, ‘ನಾನಿನ್ನೂ ಮದುವೆ ಆಗಿಲ್ಲ. ಮದುವೆ ಆಗದ ಹೆಣ್ಣುಮಗಳ ಬಗ್ಗೆ ಹೀಗೆಲ್ಲ ಮಾತಾಡೋದು ಎಷ್ಟು ಸರಿ’ ಎಂದು ಪ್ರಶ್ನಿಸಿದ್ದರು. ಬಳಿಕ ಸಂಜನಾ ಅರೆಸ್ಟ್ ಆಗುತ್ತಿದ್ದಂತೆ ಡಾ.ಅಜೀಜ್ ಪಾಷಾ ಜತೆ ಸಂಜನಾ ಆಪ್ತತೆ, ಸಂಜನಾ ಪಾಲ್ಗೊಳ್ಳುತ್ತಿದ್ದ ಎಲ್ಲ ಪಾರ್ಟಿಯಲ್ಲೂ ಆ ವೈದ್ಯ ಪಾಲ್ಗೊಳ್ಳುತ್ತಿದ್ದರು ಎಂಬುದರ ಬಗ್ಗೆಯೂ ಸುದ್ದಿಯಾಗಿತ್ತು. ಇದೀಗ ಅವರಿಬ್ಬರೂ ಮದುವೆ ಆಗಿದ್ದಾರೆ ಎನ್ನಲಾದ ಫೋಟೋವೊಂದು ವೈರಲ್ ಆಗಿದ್ದು, ಹಲವು ಪ್ರಶ್ನೆಯನ್ನು ಹುಟ್ಟು ಹಾಕಿದೆ.

ಬಹುಭಾಷಾ ನಟಿ ಸಂಜನಾ ಗಲ್ರಾನಿ ವೈದ್ಯ ಅಜೀಜ್ ಪಾಷಾರನ್ನು ಗುಪ್ತವಾಗಿ ಮದುವೆ ಆಗಿದ್ದಾರಾ? ಎಂಬ ಚರ್ಚೆ ಎಲ್ಲೆಡೆ ಆಗುತ್ತಿದೆ. ಗಂಡನ ಬಗ್ಗೆ ಸಂಜನಾ ಯಾಕೆ ವಿಷಯ ಮುಚ್ಚಿಟ್ಟಿದ್ರು, ತಾನು ಇನ್ನೂ ಮದುವೆಯನ್ನೇ ಆಗಿಲ್ಲ ಎಂದಿದ್ದೇಕೆ? ಇದರ ಹಿಂದಿನ ಉದ್ದೇಶವೇನು? ರಿಯಲ್ ಗಂಡನ ಬಗ್ಗೆ ರೀಲ್ ಬಿಟ್ಟಿದ್ಯಾಕೆ? ಎಂದು ಅಭಿಮಾನಿಗಳು, ನೆಟ್ಟಿಗರು ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಈ ಫೋಟೋ ಅಸಲಿಯತ್ತಿನ ಬಗ್ಗೆ ಸ್ವತಃ ನಟಿಯೇ ಉತ್ತರಿಸಬೇಕಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm