ಬ್ರೇಕಿಂಗ್ ನ್ಯೂಸ್
10-09-20 04:30 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 10: ಡಾಕ್ಟರ್ ಅಜೀಜ್ ಪಾಷಾ ಜತೆ ನಟಿ ಸಂಜನಾ ಗಲ್ರಾನಿ ಮದುವೆ ಆಗಿದ್ದಾರಾ ಎಂಬ ಪ್ರಶ್ನೆ ಎಲ್ಲೆಡೆ ಚರ್ಚೆಯಾಗುತ್ತಿದ್ದು, ಅದಕ್ಕೆ ಪುಷ್ಟಿ ನೀಡುವಂತೆ ಫೋಟೋವೊಂದು ವೈರಲ್ ಆಗಿದೆ.
ನನಗಿನ್ನೂ ಮದುವೆ ಆಗಿಲ್ಲ ಎಂದು ಸಂಜನಾ ಹೇಳುತ್ತಿದ್ದರು. ಡ್ರಗ್ಸ್ ಕೇಸ್ನಲ್ಲಿ ಸಂಜನಾ, ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಪಡುತ್ತಿದ್ದಂತೆ ಅವರ ಮದುವೆ ಕುರಿತಾಗಿ ತರಹೇವಾರಿ ಬಿಸಿಬಿಸಿ ಸುದ್ದಿಗಳು ಹರಿದಾಡಿತ್ತು. ಸಂಜನಾ ಮತ್ತು ಅಜೀಜ್ ಪಾಷಾ ಇಬ್ಬರೂ ಲಿವ್ ಇನ್ ರಿಲೇಷನ್ಶಿಪ್ನಲ್ಲಿ ಇದ್ದರು ಎಂಬ ಸುದ್ದಿಯೂ ಹಬ್ಬಿತ್ತು. ಇದೀಗ ಅವರಿಬ್ಬರೂ ಮದುಮಕ್ಕಳ ಉಡುಗೆತೊಟ್ಟು ಅಕ್ಕಪಕ್ಕದಲ್ಲೇ ಕುಳಿತಿರುವ ಫೋಟೋ ವೈರಲ್ ಆಗಿದೆ.
ಡ್ರಗ್ಸ್ ಮಾಫಿಯಾದಲ್ಲಿ ಸಂಜನಾ ಇರುವುದಾಗಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಕಿಡಿಕಾರಿದ್ದರು. ತನ್ನ ಹೆಸರನ್ನು ಡ್ರಗ್ಸ್ ಪ್ರಕರಣದಲ್ಲಿ ಪ್ರಸ್ತಾಪಿಸಿದ್ದಕ್ಕೆ ಮೂರು ದಿನಗಳ ಹಿಂದಷ್ಟೇ ಪ್ರಶಾಂತ್ ಸಂಬರಗಿ ವಿರುದ್ಧ ಮಾಧ್ಯಮಗಳ ಮುಂದೆ ಕೆಂಡಾಮಂಡಲವಾದ ನಟಿ ಸಂಜನಾ, ‘ನಾನಿನ್ನೂ ಮದುವೆ ಆಗಿಲ್ಲ. ಮದುವೆ ಆಗದ ಹೆಣ್ಣುಮಗಳ ಬಗ್ಗೆ ಹೀಗೆಲ್ಲ ಮಾತಾಡೋದು ಎಷ್ಟು ಸರಿ’ ಎಂದು ಪ್ರಶ್ನಿಸಿದ್ದರು. ಬಳಿಕ ಸಂಜನಾ ಅರೆಸ್ಟ್ ಆಗುತ್ತಿದ್ದಂತೆ ಡಾ.ಅಜೀಜ್ ಪಾಷಾ ಜತೆ ಸಂಜನಾ ಆಪ್ತತೆ, ಸಂಜನಾ ಪಾಲ್ಗೊಳ್ಳುತ್ತಿದ್ದ ಎಲ್ಲ ಪಾರ್ಟಿಯಲ್ಲೂ ಆ ವೈದ್ಯ ಪಾಲ್ಗೊಳ್ಳುತ್ತಿದ್ದರು ಎಂಬುದರ ಬಗ್ಗೆಯೂ ಸುದ್ದಿಯಾಗಿತ್ತು. ಇದೀಗ ಅವರಿಬ್ಬರೂ ಮದುವೆ ಆಗಿದ್ದಾರೆ ಎನ್ನಲಾದ ಫೋಟೋವೊಂದು ವೈರಲ್ ಆಗಿದ್ದು, ಹಲವು ಪ್ರಶ್ನೆಯನ್ನು ಹುಟ್ಟು ಹಾಕಿದೆ.

ಬಹುಭಾಷಾ ನಟಿ ಸಂಜನಾ ಗಲ್ರಾನಿ ವೈದ್ಯ ಅಜೀಜ್ ಪಾಷಾರನ್ನು ಗುಪ್ತವಾಗಿ ಮದುವೆ ಆಗಿದ್ದಾರಾ? ಎಂಬ ಚರ್ಚೆ ಎಲ್ಲೆಡೆ ಆಗುತ್ತಿದೆ. ಗಂಡನ ಬಗ್ಗೆ ಸಂಜನಾ ಯಾಕೆ ವಿಷಯ ಮುಚ್ಚಿಟ್ಟಿದ್ರು, ತಾನು ಇನ್ನೂ ಮದುವೆಯನ್ನೇ ಆಗಿಲ್ಲ ಎಂದಿದ್ದೇಕೆ? ಇದರ ಹಿಂದಿನ ಉದ್ದೇಶವೇನು? ರಿಯಲ್ ಗಂಡನ ಬಗ್ಗೆ ರೀಲ್ ಬಿಟ್ಟಿದ್ಯಾಕೆ? ಎಂದು ಅಭಿಮಾನಿಗಳು, ನೆಟ್ಟಿಗರು ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಈ ಫೋಟೋ ಅಸಲಿಯತ್ತಿನ ಬಗ್ಗೆ ಸ್ವತಃ ನಟಿಯೇ ಉತ್ತರಿಸಬೇಕಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm