ಬ್ರೇಕಿಂಗ್ ನ್ಯೂಸ್
10-09-20 04:30 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 10: ಡಾಕ್ಟರ್ ಅಜೀಜ್ ಪಾಷಾ ಜತೆ ನಟಿ ಸಂಜನಾ ಗಲ್ರಾನಿ ಮದುವೆ ಆಗಿದ್ದಾರಾ ಎಂಬ ಪ್ರಶ್ನೆ ಎಲ್ಲೆಡೆ ಚರ್ಚೆಯಾಗುತ್ತಿದ್ದು, ಅದಕ್ಕೆ ಪುಷ್ಟಿ ನೀಡುವಂತೆ ಫೋಟೋವೊಂದು ವೈರಲ್ ಆಗಿದೆ.
ನನಗಿನ್ನೂ ಮದುವೆ ಆಗಿಲ್ಲ ಎಂದು ಸಂಜನಾ ಹೇಳುತ್ತಿದ್ದರು. ಡ್ರಗ್ಸ್ ಕೇಸ್ನಲ್ಲಿ ಸಂಜನಾ, ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಪಡುತ್ತಿದ್ದಂತೆ ಅವರ ಮದುವೆ ಕುರಿತಾಗಿ ತರಹೇವಾರಿ ಬಿಸಿಬಿಸಿ ಸುದ್ದಿಗಳು ಹರಿದಾಡಿತ್ತು. ಸಂಜನಾ ಮತ್ತು ಅಜೀಜ್ ಪಾಷಾ ಇಬ್ಬರೂ ಲಿವ್ ಇನ್ ರಿಲೇಷನ್ಶಿಪ್ನಲ್ಲಿ ಇದ್ದರು ಎಂಬ ಸುದ್ದಿಯೂ ಹಬ್ಬಿತ್ತು. ಇದೀಗ ಅವರಿಬ್ಬರೂ ಮದುಮಕ್ಕಳ ಉಡುಗೆತೊಟ್ಟು ಅಕ್ಕಪಕ್ಕದಲ್ಲೇ ಕುಳಿತಿರುವ ಫೋಟೋ ವೈರಲ್ ಆಗಿದೆ.
ಡ್ರಗ್ಸ್ ಮಾಫಿಯಾದಲ್ಲಿ ಸಂಜನಾ ಇರುವುದಾಗಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಕಿಡಿಕಾರಿದ್ದರು. ತನ್ನ ಹೆಸರನ್ನು ಡ್ರಗ್ಸ್ ಪ್ರಕರಣದಲ್ಲಿ ಪ್ರಸ್ತಾಪಿಸಿದ್ದಕ್ಕೆ ಮೂರು ದಿನಗಳ ಹಿಂದಷ್ಟೇ ಪ್ರಶಾಂತ್ ಸಂಬರಗಿ ವಿರುದ್ಧ ಮಾಧ್ಯಮಗಳ ಮುಂದೆ ಕೆಂಡಾಮಂಡಲವಾದ ನಟಿ ಸಂಜನಾ, ‘ನಾನಿನ್ನೂ ಮದುವೆ ಆಗಿಲ್ಲ. ಮದುವೆ ಆಗದ ಹೆಣ್ಣುಮಗಳ ಬಗ್ಗೆ ಹೀಗೆಲ್ಲ ಮಾತಾಡೋದು ಎಷ್ಟು ಸರಿ’ ಎಂದು ಪ್ರಶ್ನಿಸಿದ್ದರು. ಬಳಿಕ ಸಂಜನಾ ಅರೆಸ್ಟ್ ಆಗುತ್ತಿದ್ದಂತೆ ಡಾ.ಅಜೀಜ್ ಪಾಷಾ ಜತೆ ಸಂಜನಾ ಆಪ್ತತೆ, ಸಂಜನಾ ಪಾಲ್ಗೊಳ್ಳುತ್ತಿದ್ದ ಎಲ್ಲ ಪಾರ್ಟಿಯಲ್ಲೂ ಆ ವೈದ್ಯ ಪಾಲ್ಗೊಳ್ಳುತ್ತಿದ್ದರು ಎಂಬುದರ ಬಗ್ಗೆಯೂ ಸುದ್ದಿಯಾಗಿತ್ತು. ಇದೀಗ ಅವರಿಬ್ಬರೂ ಮದುವೆ ಆಗಿದ್ದಾರೆ ಎನ್ನಲಾದ ಫೋಟೋವೊಂದು ವೈರಲ್ ಆಗಿದ್ದು, ಹಲವು ಪ್ರಶ್ನೆಯನ್ನು ಹುಟ್ಟು ಹಾಕಿದೆ.

ಬಹುಭಾಷಾ ನಟಿ ಸಂಜನಾ ಗಲ್ರಾನಿ ವೈದ್ಯ ಅಜೀಜ್ ಪಾಷಾರನ್ನು ಗುಪ್ತವಾಗಿ ಮದುವೆ ಆಗಿದ್ದಾರಾ? ಎಂಬ ಚರ್ಚೆ ಎಲ್ಲೆಡೆ ಆಗುತ್ತಿದೆ. ಗಂಡನ ಬಗ್ಗೆ ಸಂಜನಾ ಯಾಕೆ ವಿಷಯ ಮುಚ್ಚಿಟ್ಟಿದ್ರು, ತಾನು ಇನ್ನೂ ಮದುವೆಯನ್ನೇ ಆಗಿಲ್ಲ ಎಂದಿದ್ದೇಕೆ? ಇದರ ಹಿಂದಿನ ಉದ್ದೇಶವೇನು? ರಿಯಲ್ ಗಂಡನ ಬಗ್ಗೆ ರೀಲ್ ಬಿಟ್ಟಿದ್ಯಾಕೆ? ಎಂದು ಅಭಿಮಾನಿಗಳು, ನೆಟ್ಟಿಗರು ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಈ ಫೋಟೋ ಅಸಲಿಯತ್ತಿನ ಬಗ್ಗೆ ಸ್ವತಃ ನಟಿಯೇ ಉತ್ತರಿಸಬೇಕಿದೆ.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm