ಬ್ರೇಕಿಂಗ್ ನ್ಯೂಸ್
02-10-21 10:51 pm Mangaluru Correspondent ಕ್ರೈಂ
ಮಂಗಳೂರು, ಅ.2: ಪಿಎಚ್ಡಿ ಮಾಡುತ್ತಿದ್ದ ವಿದ್ಯಾರ್ಥಿನಿಯ ಫೋಟೊ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಲ್ಲದೆ ಆಕೆಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಆಂಧ್ರಪ್ರದೇಶ ಮೂಲದ ಪ್ರಾಧ್ಯಾಪಕನನ್ನು ಮಂಗಳೂರಿನ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ಕೊಂಡೂರು ಸುಧೀರ್ ಕುಮಾರ್ ಬಂಧಿತ ಆರೋಪಿ.
ವಿದ್ಯಾರ್ಥಿನಿ 2019ರಿಂದ ಮಂಗಳೂರಿನ ಪ್ರಾಧ್ಯಾಪಕಿಯೊಬ್ಬರ ಮಾರ್ಗದರ್ಶನದಲ್ಲಿ ಪಿಎಚ್ಡಿ ಮಾಡುತ್ತಿದ್ದರು. ಇದಕ್ಕೂ ಮುನ್ನ 2018ರಲ್ಲಿ ಪರಿಚಯವಾಗಿದ್ದ ಆರೋಪಿ ಡಾ.ಕೊಂಡೂರು, ತನ್ನನ್ನು ಮಾರ್ಗದರ್ಶಕನನ್ನಾಗಿ ಮಾಡಿಕೊಳ್ಳುವಂತೆ ವಿದ್ಯಾರ್ಥಿನಿಯಲ್ಲಿ ಒತ್ತಾಯಿಸಿದ್ದ. ಅದಕ್ಕೆ ಒಪ್ಪಿ ವಿಶ್ವವಿದ್ಯಾನಿಲಯಕ್ಕೆ ಅನುಮತಿಗಾಗಿ ಕಳುಹಿಸಿದ್ದು ಆ ವ್ಯಕ್ತಿಗೆ ಅರ್ಹತೆಯಿಲ್ಲ ಎನ್ನುವ ಕಾರಣಕ್ಕೆ ಕೋರಿಕೆಯನ್ನು ನಿರಾಕರಿಸಲಾಗಿತ್ತು. ಇದಾದ ಬಳಿಕ ಪ್ರಾಧ್ಯಾಪಕ ವಿದ್ಯಾರ್ಥಿನಿಗೆ ಮತ್ತು ಆಕೆಯ ಮನೆಯವರಿಗೆ ಕಿರುಕುಳ ನೀಡಲು ಆರಂಭಿಸಿದ್ದ.
ಈ ನಡುವೆ, ವಿದ್ಯಾರ್ಥಿನಿಗೆ ತಿಳಿಯದಂತೆ ಆಕೆಯ ಭಾವಚಿತ್ರವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಮನೆಯವರು ಮಂಗಳೂರಿನ ಸೈಬರ್ ಠಾಣೆಗೆ 2021ರ ಮಾರ್ಚ್ 10ರಂದು ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಆಂಧ್ರಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಷರತ್ತು ಬದ್ಧ ಜಾಮೀನಿನಲ್ಲಿ ಬಿಡುಗಡೆಗೊಳಿಸಿದೆ.
Mangalore Sexual Harassment to girl over Phone Calls Andhra Pradesh Professor arrested by Cyber police. The arrested has been idemtoef as Dr Kondoor Sudheer Kumar from Guntur who claims to be a professor at Acharya Nagarjuna University in Andhra.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm