ಬ್ರೇಕಿಂಗ್ ನ್ಯೂಸ್
07-10-21 11:41 am Mangaluru Correspondent ಕ್ರೈಂ
ಮಂಗಳೂರು, ಅ.7: ನಿನ್ನೆ ರಾತ್ರಿ ನಗರದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಕದ್ರಿ ಪಾರ್ಕ್ ಬಳಿ ನಿಂತುಕೊಂಡಿದ್ದ ಕಾಲೇಜು ವಿದ್ಯಾರ್ಥಿಗಳಿಗೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ಅಲೋಶಿಯಸ್ ಕಾಲೇಜಿನಲ್ಲಿ ಕಲಿಯುತ್ತಿರುವ ಕೇರಳ ಮೂಲದ ನಾಲ್ವರು ವಿದ್ಯಾರ್ಥಿಗಳು ಕದ್ರಿ ಪಾರ್ಕ್ ಬಳಿ ನಿಂತುಕೊಂಡಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ಇಬ್ಬರು ಹುಡುಗರು, ಇಬ್ಬರು ಹುಡುಗಿಯರು ನಿಂತಿದ್ದನ್ನು ನೋಡಿದ ಬಜರಂಗದಳ ಕಾರ್ಯಕರ್ತರು ಎನ್ನಲಾದ ಯುವಕರು ಪ್ರಶ್ನೆ ಮಾಡಿದ್ದಾರೆ. ಅದರಲ್ಲಿ ಒಬ್ಬಾತ ಅನ್ಯಧರ್ಮದ ಯುವಕ ಎನ್ನುವುದನ್ನು ಅರಿತು ಹೊಡೆದಿದ್ದಾರೆ. ಬಳಿಕ ಅವರ ನಡುವೆ ಜಟಾಪಟಿ ನಡೆದಿದ್ದು ಪೊಲೀಸರಿಗೆ ಕರೆ ಮಾಡಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಎರಡೂ ಕಡೆಯ ತಂಡವನ್ನು ಠಾಣೆಗೆ ಒಯ್ದಿದ್ದಾರೆ. ವಿದ್ಯಾರ್ಥಿಗಳು ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಇಬ್ಬರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ವಾರದ ಹಿಂದೆ ಸುರತ್ಕಲ್ ನಲ್ಲಿ ಬೊಲೆರೋ ಜೀಪಿನಲ್ಲಿ ತೆರಳುತ್ತಿದ್ದ ಮೆಡಿಕಲ್ ವಿದ್ಯಾರ್ಥಿಗಳ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದರು. ಈ ಬಗ್ಗೆ ಭಾರೀ ಆಕ್ರೋಶವೂ ಕೇಳಿಬಂದಿತ್ತು. ಇದೇ ವಿಚಾರದಲ್ಲಿ ಬಜರಂಗದಳ ಸುರತ್ಕಲ್ ಪೇಟೆಯಲ್ಲಿ ಪ್ರತಿಭಟನಾ ಕಾರ್ಯಕ್ರಮ ನಡೆಸಿ, ಅನ್ಯಧರ್ಮೀಯರ ವಿರುದ್ಧ ಪ್ರಚೋದನಾತ್ಮಕ ಹೇಳಿಕೆ ನೀಡಿದ ಘಟನೆಯೂ ನಡೆದಿತ್ತು.
Two Bajarang dal members were arrested for Moral policing at Kadri in Mangalore. Four college students who were near Kadri Park were questioned by Bajarang dal members and assaulted a boy who was other interfaith.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
11-08-26 12:38 pm
HK News Staffer
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm