ಬ್ರೇಕಿಂಗ್ ನ್ಯೂಸ್
07-10-21 12:23 pm Mangaluru Correspondent ಕ್ರೈಂ
ಉಳ್ಳಾಲ, ಅ.7: ರಬ್ಬರ್ ತೋಟದ ನಡುವಲ್ಲಿರುವ ಒಂಟಿ ಬಂಗಲೆಗೆ ನುಗ್ಗಿದ ಕಳ್ಳರು ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ 5 ಹಿತ್ತಾಳೆಯ ದೀಪಗಳನ್ನ ಕದ್ದೊಯ್ದ ಘಟನೆ ಬಬ್ಬುಕಟ್ಟೆ ಸಮೀಪದ ಚಂದಪ್ಪ ಎಸ್ಟೇಟ್ ನಲ್ಲಿ ನಡೆದಿದೆ.
ದುಬೈನಲ್ಲಿ ವಾಸವಿರುವ ಸುಜಾತ ಎಂಬವರಿಗೆ ಸೇರಿದ ಯಾರೂ ವಾಸವಿಲ್ಲದ ಒಂಟಿ ಬಂಗಲೆ ಮನೆಯ ಹಿಂಬಾಗಿಲನ್ನ ಪಿಕ್ಕಾಸಲ್ಲಿ ಮುರಿದು ಕಳ್ಳತನ ನಡೆಸಲಾಗಿದೆ. ಮೊನ್ನೆ ರಾತ್ರಿ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ. ನಿನ್ನೆ ರಾತ್ರಿ ಬಂಗಲೆಯ ಕೋಣೆಯ ದೀಪ ಉರಿಯುವುದನ್ನ ಹತ್ತಿರದ ನಿವಾಸಿಯಾಗಿರುವ ಸುಜಾತ ಅವರ ಅಣ್ಣ ವಕೀಲ ಗಂಗಾಧರ್ ಉಳ್ಳಾಲ್ ಅವರು ಗಮಿನಿಸಿದ್ದು ಬಂಗಲೆಯೊಳಗೆ ಹೋದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.









ಬಂಗಲೆಯ ಹಿಂಬಾಗಿಲಿನ ಬಳಿಯಲ್ಲೇ ಇದ್ದ ಪಿಕ್ಕಾಸಿನಲ್ಲಿ ಕಬ್ಬಿಣದ ಸಲಾಕೆಯ ಗೇಟನ್ನು ಮುರಿದು ಕಳ್ಳರು ಒಳ ಹೊಕ್ಕಿದ್ದಾರೆ. ಮನೆಯ ಹಾಲಲ್ಲಿದ್ದ ಎತ್ತರದ ಮೂರು ಹಿತ್ತಾಳೆಯ ದೀಪ ಮತ್ತು ದೇವರ ಕೋಣೆಯಲ್ಲಿದ್ದ ಎರಡು ಸಣ್ಣ ಹಿತ್ತಾಳೆಯ ದೀಪಗಳನ್ನ ಕದ್ದೊಯ್ದಿದ್ದಾರೆ. ಮನೆಯ ಕಪಾಟುಗಳನ್ನ ಕಳ್ಳರು ತಡಕಾಡಿದ್ದು ಮನೆಯೊಳಗೆ ಯಾವುದೇ ನಗ, ನಗದು ಸಿಗದೆ ದೀಪಗಳನ್ನ ಎಗರಿಸಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.
ನಿರ್ಜನ ಎಸ್ಟೇಟಲ್ಲಿ ಸಿಸಿ ಕ್ಯಾಮೆರಾ ವರ್ಕಿಂಗ್ ಇಲ್ಲ
ಬಬ್ಬಕಟ್ಟೆಯಿಂದ-ರಾಣಿಪುರ ಸಂಪರ್ಕದ ಒಳ ನಿರ್ಜನ ರಸ್ತೆಯ ನಡುವಲ್ಲಿ ಚಂದಪ್ಪ ಎಸ್ಟೇಟ್ ಇದ್ದು ಇಲ್ಲಿ ಉಳ್ಳಾಲ ನಗರಸಭೆ ಆಡಳಿತ ಹಾಕಿಸಿದ್ದ ಸಿಸಿ ಕ್ಯಾಮೆರಾಗಳು ಕೆಲಸ ಮಾಡುತ್ತಿಲ್ಲ ಎನ್ನಲಾಗುತ್ತಿದೆ. ಇಂತಹ ನಿರ್ಜನ ಪ್ರದೇಶದಲ್ಲಿ ಕೂಡಲೇ ಸಿಸಿ ಕ್ಯಾಮೆರಾ ಅಳವಡಿಸಬೇಕೆಂದು ಕಳ್ಳತನ ನಡೆದ ಮನೆ ಮಾಲಕಿ ಸುಜಾತ ಅವರ ಸಹೋದರ ನಗರ ಸದಸ್ಯರಾದ ದಿನಕರ ಉಳ್ಳಾಲ್ ಆಗ್ರಹಿಸಿದ್ದಾರೆ.
Thokottu Burglars enter bungalow, FIve steal brass lamps worth lakhs have been stolen. Ullal police have visited the spot and are now investigating the case.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm