ಬ್ರೇಕಿಂಗ್ ನ್ಯೂಸ್
07-10-21 12:23 pm Mangaluru Correspondent ಕ್ರೈಂ
ಉಳ್ಳಾಲ, ಅ.7: ರಬ್ಬರ್ ತೋಟದ ನಡುವಲ್ಲಿರುವ ಒಂಟಿ ಬಂಗಲೆಗೆ ನುಗ್ಗಿದ ಕಳ್ಳರು ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ 5 ಹಿತ್ತಾಳೆಯ ದೀಪಗಳನ್ನ ಕದ್ದೊಯ್ದ ಘಟನೆ ಬಬ್ಬುಕಟ್ಟೆ ಸಮೀಪದ ಚಂದಪ್ಪ ಎಸ್ಟೇಟ್ ನಲ್ಲಿ ನಡೆದಿದೆ.
ದುಬೈನಲ್ಲಿ ವಾಸವಿರುವ ಸುಜಾತ ಎಂಬವರಿಗೆ ಸೇರಿದ ಯಾರೂ ವಾಸವಿಲ್ಲದ ಒಂಟಿ ಬಂಗಲೆ ಮನೆಯ ಹಿಂಬಾಗಿಲನ್ನ ಪಿಕ್ಕಾಸಲ್ಲಿ ಮುರಿದು ಕಳ್ಳತನ ನಡೆಸಲಾಗಿದೆ. ಮೊನ್ನೆ ರಾತ್ರಿ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ. ನಿನ್ನೆ ರಾತ್ರಿ ಬಂಗಲೆಯ ಕೋಣೆಯ ದೀಪ ಉರಿಯುವುದನ್ನ ಹತ್ತಿರದ ನಿವಾಸಿಯಾಗಿರುವ ಸುಜಾತ ಅವರ ಅಣ್ಣ ವಕೀಲ ಗಂಗಾಧರ್ ಉಳ್ಳಾಲ್ ಅವರು ಗಮಿನಿಸಿದ್ದು ಬಂಗಲೆಯೊಳಗೆ ಹೋದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.









ಬಂಗಲೆಯ ಹಿಂಬಾಗಿಲಿನ ಬಳಿಯಲ್ಲೇ ಇದ್ದ ಪಿಕ್ಕಾಸಿನಲ್ಲಿ ಕಬ್ಬಿಣದ ಸಲಾಕೆಯ ಗೇಟನ್ನು ಮುರಿದು ಕಳ್ಳರು ಒಳ ಹೊಕ್ಕಿದ್ದಾರೆ. ಮನೆಯ ಹಾಲಲ್ಲಿದ್ದ ಎತ್ತರದ ಮೂರು ಹಿತ್ತಾಳೆಯ ದೀಪ ಮತ್ತು ದೇವರ ಕೋಣೆಯಲ್ಲಿದ್ದ ಎರಡು ಸಣ್ಣ ಹಿತ್ತಾಳೆಯ ದೀಪಗಳನ್ನ ಕದ್ದೊಯ್ದಿದ್ದಾರೆ. ಮನೆಯ ಕಪಾಟುಗಳನ್ನ ಕಳ್ಳರು ತಡಕಾಡಿದ್ದು ಮನೆಯೊಳಗೆ ಯಾವುದೇ ನಗ, ನಗದು ಸಿಗದೆ ದೀಪಗಳನ್ನ ಎಗರಿಸಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.
ನಿರ್ಜನ ಎಸ್ಟೇಟಲ್ಲಿ ಸಿಸಿ ಕ್ಯಾಮೆರಾ ವರ್ಕಿಂಗ್ ಇಲ್ಲ
ಬಬ್ಬಕಟ್ಟೆಯಿಂದ-ರಾಣಿಪುರ ಸಂಪರ್ಕದ ಒಳ ನಿರ್ಜನ ರಸ್ತೆಯ ನಡುವಲ್ಲಿ ಚಂದಪ್ಪ ಎಸ್ಟೇಟ್ ಇದ್ದು ಇಲ್ಲಿ ಉಳ್ಳಾಲ ನಗರಸಭೆ ಆಡಳಿತ ಹಾಕಿಸಿದ್ದ ಸಿಸಿ ಕ್ಯಾಮೆರಾಗಳು ಕೆಲಸ ಮಾಡುತ್ತಿಲ್ಲ ಎನ್ನಲಾಗುತ್ತಿದೆ. ಇಂತಹ ನಿರ್ಜನ ಪ್ರದೇಶದಲ್ಲಿ ಕೂಡಲೇ ಸಿಸಿ ಕ್ಯಾಮೆರಾ ಅಳವಡಿಸಬೇಕೆಂದು ಕಳ್ಳತನ ನಡೆದ ಮನೆ ಮಾಲಕಿ ಸುಜಾತ ಅವರ ಸಹೋದರ ನಗರ ಸದಸ್ಯರಾದ ದಿನಕರ ಉಳ್ಳಾಲ್ ಆಗ್ರಹಿಸಿದ್ದಾರೆ.
Thokottu Burglars enter bungalow, FIve steal brass lamps worth lakhs have been stolen. Ullal police have visited the spot and are now investigating the case.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm