ಬ್ರೇಕಿಂಗ್ ನ್ಯೂಸ್
13-10-21 08:37 pm Bengaluru Correspondent ಕ್ರೈಂ
ಬೆಂಗಳೂರು, ಅ.13: ಫೇಸ್ಬುಕ್ ಮೂಲಕ ಯುವತಿಯರ ಜೊತೆ ಸಂಪರ್ಕ ಬೆಳೆಸಿ, ನಗ್ನ ವಿಡಿಯೋ ಪಡೆದುಕೊಂಡು ಬ್ಲಾಕ್ಮೇಲ್ ನಡೆಸುತ್ತಿದ್ದ ಪ್ರಕರಣದಲ್ಲಿ ರಾಜಸ್ಥಾನ ಮೂಲದ ನಾಲ್ವರನ್ನು ಬೆಂಗಳೂರು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸಾಕಿರ್, ಪಹರಿ, ಕಸಮ್ ಖಾನ್, ಜಾಮಿಲ್ ಖಾನ್ ಎಂದು ಗುರುತಿಸಲಾಗಿದೆ. ದೂರಿಗೆ ಸಂಬಂಧಿಸಿ, ಇನ್ ಸ್ಪೆಕ್ಟರ್ ನಯಾಜ್ ಅಹ್ಮದ್ ನೇತೃತ್ವದ ಬೆಂಗಳೂರು ಪೊಲೀಸರು ರಾಜಸ್ಥಾನದ ಭರತ್ ಪುರ, ಆಲ್ವಾರ್ ಮತ್ತಿತರ ಪ್ರದೇಶಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದ್ದರು. ಆಲ್ವಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಮತ್ತು ಬೈತಕೂಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತಿಬ್ಬರನ್ನು ಬಂಧಿಸಿದ್ದಾರೆ.
ಕಳೆದ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಯುವತಿಯರನ್ನು ಲೈಂಗಿಕ ಶೋಷಣೆ ನಡೆಸುತ್ತಿದ್ದ ಆರೋಪದಲ್ಲಿ ಸೈಬರ್ ಕ್ರೈಮ್
ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ರಾಜಸ್ಥಾನ ಮತ್ತು ಹರ್ಯಾಣದಲ್ಲಿ ಹಲವರನ್ನು ಬಂಧಿಸಿದ್ದಾರೆ. ತನಿಖೆಯಲ್ಲಿ ಆರೋಪಿಗಳು ಫೇಸ್ಬುಕ್ ಮತ್ತು ಇನ್ ಸ್ಟಾ ಗ್ರಾಮ್ ಬಳಕೆದಾರರನ್ನು ಗುರಿಯಾಗಿಸಿ ಖಾಸಗಿ ಮಾಹಿತಿ ಪಡೆದು ಗಾಳ ಹಾಕುತ್ತಿದ್ದರು ಅನ್ನೋದು ಬೆಳಕಿಗೆ ಬಂದಿದೆ.
ಯುವತಿ ಹೆಸರಿನಲ್ಲೇ ಫ್ರೆಂಡ್ ರಿಕ್ವೆಸ್ಟ್ ಕಳಿಸಿ, ಗೆಳೆತನ ಮಾಡುತ್ತಿದ್ದ ಇವರು ಚಾಟಿಂಗ್ ಮಾಡಿ ನಂಟು ಬೆಳೆಸುತ್ತಿದ್ದರು. ಆನಂತರ ವಾಟ್ಸಪ್, ವಿಡಿಯೋ ಕರೆ ಮಾಡಿ, ನಗ್ನ ವಿಡಿಯೋ ತೋರಿಸಲು ಹೇಳಿ ಅದನ್ನು ಅವರಿಗೆ ತಿಳಿಯದಂತೆ ರೆಕಾರ್ಡ್ ಮಾಡುತ್ತಿದ್ದರು. ಆನಂತರ ಸಂತ್ರಸ್ತ ಯುವತಿಯರನ್ನು ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಹರಿಯಬಿಡುವುದಾಗಿ ಹೇಳಿ, ಬೆದರಿಸಿ ಹಣ ಕೀಳುತ್ತಿದ್ದರು. ಈ ರೀತಿಯ ಯಾವುದೇ ದೂರುಗಳಿದ್ದವಲ್ಲಿ ಅಥವಾ ಸಂತ್ರಸ್ತರು ಶೋಷಣೆಗೆ ಒಳಗಾಗಿದ್ದಲ್ಲಿ ಸೈಬರ್ ಕ್ರೈಮ್ ಗೆ ದೂರು ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
The Karnataka Cyber Crime Division has arrested four persons involved in extortion after recording nude videos of the victims by becoming friends on social media platforms, an official statement said on Tuesday. The arrested persons were identified as Sakir, Pahari, Kasam Khan, Jamil Khan.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm