ಬ್ರೇಕಿಂಗ್ ನ್ಯೂಸ್
14-10-21 09:58 pm Headline Karnataka News Network ಕ್ರೈಂ
ಕಾರವಾರ, ಅ.14: ಸಾಂಬಾರ್ ರುಚಿಯಾಗಿಲ್ಲ ಎಂದು ಹೇಳಿ 24 ವರ್ಷದ ಯುವಕನೊಬ್ಬ ತನ್ನ ತಾಯಿ ಮತ್ತು ತಂಗಿಯನ್ನು ಗುಂಡು ಹಾರಿಸಿ ಕೊಲೆಗೈದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕೂಡುಗೋಡು ಎಂಬಲ್ಲಿ ನಡೆದಿದೆ.
ಬುಧವಾರ ಸಂಜೆ ಘಟನೆ ನಡೆದಿದ್ದು ಆರೋಪಿಯನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ತಾಯಿ ಪಾರ್ವತಿ ಹಸ್ಲಾರ್ (42) ಮತ್ತು ರಮ್ಯಾ ಹಸ್ಲಾರ್ (19) ಮೃತರು.
ಮಂಜುನಾಥ್ ಕುಡಿತದ ಚಟ ಹೊಂದಿದ್ದು ಕುಡಿದ ಮತ್ತಿನಲ್ಲಿ ಮನೆಗೆ ಬಂದು ಸಾಂಬಾರ್ ವಿಷಯದಲ್ಲಿ ತಾಯಿ ಜೊತೆ ರಂಪ ನಡೆಸಿದ್ದಾನೆ. ಸಾಂಬಾರ್ ರುಚಿಯಾಗಿಲ್ಲ ಎಂದು ವಾಗ್ವಾದ ನಡೆಸಿದ್ದು ಬಳಿಕ ತಾಯಿ, ತಂಗಿಗೆ ಲೋನ್ ಮಾಡಿ ಮೊಬೈಲ್ ತೆಗೆಸಿಕೊಡುವ ವಿಚಾರದಲ್ಲಿ ರಂಪ ಮಾಡಿದ್ದಾನೆ.
ಆದರೆ, ತಾಯಿ ಪಾರ್ವತಿ ತಾನು ಮೊಬೈಲ್ ತೆಗೆಸಿಕೊಡುತ್ತೇನೆಂದು ಯಾರಿಗೂ ಹೇಳಿಲ್ಲ. ನಿನಗೆ ಯಾರು ಹೇಳಿದ್ದು ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದರಿಂದ ಸಿಟ್ಟಿಗೆದ್ದ ಮಂಜುನಾಥ್ ಮನೆಯಲ್ಲಿದ್ದ ನಾಡ ಕೋವಿಯನ್ನು ಎತ್ತಿಕೊಂಡು ತಾಯಿ ತಲೆಗೆ ಗುಂಡಿಟ್ಟಿದ್ದಾನೆ. ಆನಂತರ ತಂಗಿಯ ಮೇಲೂ ಗುಂಡು ಹಾರಿಸಿದ್ದು ಇಬ್ಬರೂ ಮನೆಯಲ್ಲೇ ಸಾವು ಕಂಡಿದ್ದಾರೆ.
ಕೊಲೆ ಕೃತ್ಯ ನಡೆದ ಬಳಿಕ ಮಂಜುನಾಥ್ ತಂದೆ ಮನೆಗೆ ಆಗಮಿಸಿದ್ದು ವಿಷಯ ಬೆಳಕಿಗೆ ಬಂದಿದೆ. ತಂದೆ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಜುನಾಥ್ ಸ್ಥಳದಿಂದ ಪರಾರಿಯಾಗಿದ್ದ. ಇಂದು ಆತನನ್ನು ಬಂಧಿಸಲಾಗಿದೆ.
A youth shot his mother and sister dead on Thursday apparently for not cooking tasty sambar at Kodagodu in Karnataka's Uttara Kannada district. The incident took place on Wednesday and the accused, Manjunath Haslar (24), was arrested on Thursday. The deceased have been identified as Manjunath's mother Parvathi Narayana Haslar (42) and sister Ramya Narayana Haslar (19).
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm