ಬ್ರೇಕಿಂಗ್ ನ್ಯೂಸ್
17-10-21 11:51 am Headline Karnataka News Network ಕ್ರೈಂ
ಬೆಂಗಳೂರು, ಅ.17: ಬೆಂಗಳೂರಿಗೆ ಹೊರಟಿದ್ದ ಟ್ರಕ್ನಿಂದ 7 ಕೋಟಿ ರೂಪಾಯಿ ಮೌಲ್ಯದ ಸುಮಾರು 9,000 ಮೊಬೈಲ್ ಫೋನ್ಗಳನ್ನು ಲೂಟಿ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ದುಷ್ಕರ್ಮಿಗಳು ಚಾಲಕನನ್ನು ಥಳಿಸಿ ವಾಹನದಿಂದ ಹೊರಕ್ಕೆ ಎಸೆದು ಮೊಬೈಲ್ ಲೂಟಿ ಮಾಡಿದ್ದಾರೆ.
ಒಪ್ಪೋ ಮೊಬೈಲ್ ಕಂಪನಿಯ ಮ್ಯಾನೇಜರ್ ಸಚಿನ್ ಮಾನವ್ ಈ ಬಗ್ಗೆ ದೂರು ಸಲ್ಲಿಸಿದ್ದಾರೆ. ಫರೂಖಾಬಾದ್ ಜಿಲ್ಲೆಯ ಚಾಲಕ ಮುನೀಶ್ ಯಾದವ್ ಅವರು ಅಕ್ಟೋಬರ್ 5 ರಂದು ಬೆಳಗ್ಗೆ ಗ್ರೇಟರ್ ನೋಯ್ಡಾದಿಂದ ಮೊಬೈಲ್ಗಳನ್ನು ತುಂಬಿದ್ದ ಟ್ರಕ್ ಅನ್ನು ತೆಗೆದುಕೊಂಡು ಬೆಂಗಳೂರಿಗೆ ಹೊರಟಿದ್ದರು. ಗ್ವಾಲಿಯರ್ ಬೈಪಾಸ್ನಲ್ಲಿ ಇಬ್ಬರು ಪ್ರಯಾಣಿಕರ ಸೋಗಿನಲ್ಲಿ ವಾಹನವನ್ನು ಹತ್ತಿದ್ದಾರೆ.
ಟ್ರಕ್ ಝಾನ್ಸಿಯ ಬಬಿನಾ ಟೋಲ್ ಅನ್ನು ದಾಟಿದ ತಕ್ಷಣ, ದುಷ್ಕರ್ಮಿಗಳು ಚಾಲಕನನ್ನು ಥಳಿಸಿ ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯಲ್ಲಿ ವಾಹನದಿಂದ ಹೊರಗೆ ಎಸೆದು ಟ್ರಕ್ನೊಂದಿಗೆ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಬಳಿಕ ಶಿಯೋಪುರ್ ಜಿಲ್ಲೆಯ ಮಾನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ಖಾಲಿ ಟ್ರಕ್ ಅನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ದೂರು ನೀಡಲು ಮಧ್ಯಪ್ರದೇಶ ಪೊಲೀಸರನ್ನು ಸಂಪರ್ಕಿಸಿದ್ದು, ದೂರು ದಾಖಲಿಸಿಕೊಳ್ಳಲು ಅವರು ನಿರಾಕರಿಸಿದರು ಎಂದು ದೂರುದಾರರು ಆರೋಪಿಸಿದ್ದಾರೆ. ಬಳಿಕ, ಆಗ್ರಾದಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಲಾಗಿದ್ದು, ನಂತರ ಪ್ರಕರಣ ದಾಖಲಿಸಲಾಗಿದೆ ಎಂದವರು ಹೇಳಿದ್ದಾರೆ.
ಸದ್ಯ, ಮಧ್ಯಪ್ರದೇಶದ ಮಾನ್ಪುರ್ ಪೊಲೀಸರ ವಶದಲ್ಲಿ ಟ್ರಕ್ ಇದೆ. ಟ್ರಕ್ನಲ್ಲಿ ರಿಯಾಲಿಟಿ ಮತ್ತು ಒಪ್ಪೊ ಕಂಪನಿಯ 8,990 ಮೊಬೈಲ್ ಫೋನ್ಗಳಿದ್ದವು. ಅವುಗಳ ಮೌಲ್ಯ ಸುಮಾರು ₹7 ಕೋಟಿ ಎಂದು ಎಸ್ಪಿ ತಿಳಿಸಿದ್ದಾರೆ.
Unidentified people looted nearly 9,000 mobile phones worth ₹ 7 crore from a Bengaluru-bound truck and allegedly attacked the driver by beating him up and throwing him out of the vehicle, police in Uttar Pradesh's Mathura said on Saturday. The incident took place on October 5 in Madhya Pradesh's Sheopur district but a case was registered in Uttar Pradesh's Mathura.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm