ಬ್ರೇಕಿಂಗ್ ನ್ಯೂಸ್
17-10-21 11:51 am Headline Karnataka News Network ಕ್ರೈಂ
ಬೆಂಗಳೂರು, ಅ.17: ಬೆಂಗಳೂರಿಗೆ ಹೊರಟಿದ್ದ ಟ್ರಕ್ನಿಂದ 7 ಕೋಟಿ ರೂಪಾಯಿ ಮೌಲ್ಯದ ಸುಮಾರು 9,000 ಮೊಬೈಲ್ ಫೋನ್ಗಳನ್ನು ಲೂಟಿ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ದುಷ್ಕರ್ಮಿಗಳು ಚಾಲಕನನ್ನು ಥಳಿಸಿ ವಾಹನದಿಂದ ಹೊರಕ್ಕೆ ಎಸೆದು ಮೊಬೈಲ್ ಲೂಟಿ ಮಾಡಿದ್ದಾರೆ.
ಒಪ್ಪೋ ಮೊಬೈಲ್ ಕಂಪನಿಯ ಮ್ಯಾನೇಜರ್ ಸಚಿನ್ ಮಾನವ್ ಈ ಬಗ್ಗೆ ದೂರು ಸಲ್ಲಿಸಿದ್ದಾರೆ. ಫರೂಖಾಬಾದ್ ಜಿಲ್ಲೆಯ ಚಾಲಕ ಮುನೀಶ್ ಯಾದವ್ ಅವರು ಅಕ್ಟೋಬರ್ 5 ರಂದು ಬೆಳಗ್ಗೆ ಗ್ರೇಟರ್ ನೋಯ್ಡಾದಿಂದ ಮೊಬೈಲ್ಗಳನ್ನು ತುಂಬಿದ್ದ ಟ್ರಕ್ ಅನ್ನು ತೆಗೆದುಕೊಂಡು ಬೆಂಗಳೂರಿಗೆ ಹೊರಟಿದ್ದರು. ಗ್ವಾಲಿಯರ್ ಬೈಪಾಸ್ನಲ್ಲಿ ಇಬ್ಬರು ಪ್ರಯಾಣಿಕರ ಸೋಗಿನಲ್ಲಿ ವಾಹನವನ್ನು ಹತ್ತಿದ್ದಾರೆ.
ಟ್ರಕ್ ಝಾನ್ಸಿಯ ಬಬಿನಾ ಟೋಲ್ ಅನ್ನು ದಾಟಿದ ತಕ್ಷಣ, ದುಷ್ಕರ್ಮಿಗಳು ಚಾಲಕನನ್ನು ಥಳಿಸಿ ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯಲ್ಲಿ ವಾಹನದಿಂದ ಹೊರಗೆ ಎಸೆದು ಟ್ರಕ್ನೊಂದಿಗೆ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಬಳಿಕ ಶಿಯೋಪುರ್ ಜಿಲ್ಲೆಯ ಮಾನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ಖಾಲಿ ಟ್ರಕ್ ಅನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ದೂರು ನೀಡಲು ಮಧ್ಯಪ್ರದೇಶ ಪೊಲೀಸರನ್ನು ಸಂಪರ್ಕಿಸಿದ್ದು, ದೂರು ದಾಖಲಿಸಿಕೊಳ್ಳಲು ಅವರು ನಿರಾಕರಿಸಿದರು ಎಂದು ದೂರುದಾರರು ಆರೋಪಿಸಿದ್ದಾರೆ. ಬಳಿಕ, ಆಗ್ರಾದಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಲಾಗಿದ್ದು, ನಂತರ ಪ್ರಕರಣ ದಾಖಲಿಸಲಾಗಿದೆ ಎಂದವರು ಹೇಳಿದ್ದಾರೆ.
ಸದ್ಯ, ಮಧ್ಯಪ್ರದೇಶದ ಮಾನ್ಪುರ್ ಪೊಲೀಸರ ವಶದಲ್ಲಿ ಟ್ರಕ್ ಇದೆ. ಟ್ರಕ್ನಲ್ಲಿ ರಿಯಾಲಿಟಿ ಮತ್ತು ಒಪ್ಪೊ ಕಂಪನಿಯ 8,990 ಮೊಬೈಲ್ ಫೋನ್ಗಳಿದ್ದವು. ಅವುಗಳ ಮೌಲ್ಯ ಸುಮಾರು ₹7 ಕೋಟಿ ಎಂದು ಎಸ್ಪಿ ತಿಳಿಸಿದ್ದಾರೆ.
Unidentified people looted nearly 9,000 mobile phones worth ₹ 7 crore from a Bengaluru-bound truck and allegedly attacked the driver by beating him up and throwing him out of the vehicle, police in Uttar Pradesh's Mathura said on Saturday. The incident took place on October 5 in Madhya Pradesh's Sheopur district but a case was registered in Uttar Pradesh's Mathura.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm