ಬ್ರೇಕಿಂಗ್ ನ್ಯೂಸ್
17-10-21 03:53 pm Headline Karnataka News Network ಕ್ರೈಂ
ರಾಮನಗರ, ಅ.17: ನಗರ ವಾಸದ ಗೀಳಿಗೆ ಬಿದ್ದ ಪತ್ನಿ ಹಾಗೂ ಪತಿಯ ನಡುವಿನ ಜಗಳಕ್ಕೆ ಎರಡು ಜೀವಗಳು ಬಲಿಯಾಗಿವೆ. ಪಟ್ಟಣ ವಾಸದ ಆಸೆಗೆ ಬಿದ್ದ ಪತ್ನಿಯನ್ನು ಕೊಂದು ಪತಿ ತಾನೂ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾದ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ.
ಕೋಡಿಹಳ್ಳಿ ಹೋಬಳಿ, ಗುಡ್ಡೆ ವೀರನ ಹೊಸಹಳ್ಳಿ ನಿವಾಸಿ ದೇಸೀಗೌಡ (38), ಪತ್ನಿ ಇಂದಿರಮ್ಮ (31) ಳನ್ನು ಹತ್ಯೆಗೈದು ಬಳಿಕ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಊರಿನಲ್ಲಿ ಅಂಗಡಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ದಂಪತಿ ನಡುವೆ ಬೆಂಗಳೂರಿಗೆ ಹೋಗುವ ಕುರಿತು ಜಗಳ ನಡೆಯುತ್ತಿತ್ತು.
ಇಂದಿರಮ್ಮ ಮತ್ತು ದೇಸೀಗೌಡ ಮಗನೊಂದಿಗೆ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಕೋವಿಡ್ನಿಂದಾಗಿ ದಂಪತಿ ಬೆಂಗಳೂರು ಬಿಟ್ಟು ಸ್ವಗ್ರಾಮ ಗುಡ್ಡೆವೀರನಹೊಸಹಳ್ಳಿ ಗ್ರಾಮಕ್ಕೆ ಬಂದು ನೆಲೆಸಿದ್ದರು.
ಇತ್ತೀಚೆಗೆ ಕೋವಿಡ್ ಪರಿಸ್ಥಿತಿ ಹತೋಟಿಗೆ ಬಂದಿದ್ದು, ನಗರ ವಾಸದ ಗೀಳಿಗೆ ಬಿದ್ದ ಪತ್ನಿ ಇಂದಿರಾ ಪದೇ ಪದೇ ಗಂಡನನ್ನು ಮತ್ತೆ ಬೆಂಗಳೂರಿಗೆ ಹೋಗುವಂತೆ ಪೀಡಿಸುತ್ತಿದ್ದಳು. ಗ್ರಾಮದಲ್ಲಿ ಚಿಲ್ಲರೆ ಹಾಗೂ ಕೋಳಿ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ಇತ್ತೀಚೆಗೆ ಗಂಡನನ್ನು ಮೂಲೆಗುಂಪು ಮಾಡಿ ಇಂದಿರಾ ತಾನೇ ಸ್ವತಃ ಅಂಗಡಿಯ ಜವಾಬ್ದಾರಿ ನೋಡಿಕೊಳ್ಳುತ್ತಿದ್ದಳು.
ಕೆಲವು ದಿನಗಳ ಹಿಂದೆ ಮತ್ತೆ ಬೆಂಗಳೂರಿಗೆ ಹೋಗೋಣ ಎಂದು ಕ್ಯಾತೆ ತೆಗೆದಿದ್ದ ಪತ್ನಿಯೊಂದಿಗೆ ದೇಸೀಗೌಡ ಜಗಳ ಮಾಡಿಕೊಂಡಿದ್ದ. ಗ್ರಾಮದ ಹಿರಿಯರು ರಾಜಿ ಪಂಚಾಯಿತಿ ಮಾಡಿಸಿದ್ದರು. ಇದರ ಮಧ್ಯೆ ಹೆಂಡತಿಯ ಉಪಟಳದಿಂದ ಬೇಸತ್ತಿದ್ದ ದೇಸೀಗೌಡ ಇಬ್ಬರೂ ಜೀವಂತ ಇರಬಾರದು ಎಂಬ ನಿಧಾರಕ್ಕೆ ಬಂದು ತನ್ನ ಪತ್ನಿಯನ್ನು ಚೂರಿಯಿಂದ ಕತ್ತು ಕೊಯ್ದು ಕೊಲೆಗೈದು, ತಾನು ಊರ ಹೊರಗಿನ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿದ್ದಾನೆ.
ಕ್ಷುಲ್ಲಕ ವಿಚಾರ ವಿಕೋಪಕ್ಕೆ ತಿರುಗಿ ದಂಪತಿ ಜೀವ ಕಳೆದುಕೊಂಡ ದೃಶ್ಯ ಗ್ರಾಮಸ್ಥರ ಮನಕಲಕುವಂತಿತ್ತು. ಕೋಡಿಹಳ್ಳಿ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.
Ramanagara Husband Kills Wife and Commits Suicide in a matter of going to Bangalore.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am