ಬ್ರೇಕಿಂಗ್ ನ್ಯೂಸ್
18-10-21 02:07 pm Headline Karnataka News Network ಕ್ರೈಂ
ಕೋಲ್ಕತ್ತಾ, ಅ 18: ಪಶ್ಚಿಮ ಬಂಗಾಳದ ಬಿಜೆಪಿ ಯುವ ಮೋರ್ಚಾದ ನಾಯಕನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಪಶ್ಚಿಮಬಂಗಾಳದ ಉತ್ತರ ದಿನಾಜ್ಪುರ ಜಿಲ್ಲೆಯ ಇಟಾಹಾರ್ನ ಬಿಜೆಪಿ ಯುವ ನಾಯಕ ಮಿಥುನ್ ಘೋಷ್ ಮೃತ ದುರ್ದೈವಿ.
ರಾಜ್ಗ್ರಾಮ ಹಳ್ಳಿಯಲ್ಲಿರುವ ತಮ್ಮ ಮನೆ ಎದುರು ಭಾನುವಾರ ರಾತ್ರಿ 11 ಗಂಟೆಗೆ ಘೋಷ್ ಹೊರಗೆ ನಿಂತಿದ್ದರು. ಬೈಕ್ನಲ್ಲಿ ಬಂದ ಆಗಂತುಕರು ಮಿಥುನ್ ಹೊಟ್ಟೆಗೆ ಗುಂಡು ಹೊಡೆದಿದ್ದಾರೆ, ಕೂಡಲೇ ಸ್ಥಳೀಯರು ಸಮೀಪದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದರೂ ಪ್ರಯೋಜನವಾಗಲಿಲ್ಲ.
ಈ ಕೃತ್ಯ ಟಿಎಂಸಿ ಕಾರ್ಯಕರ್ತರದ್ದೇ ಎಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ಬಿಜೆಪಿ ನಾಯಕ ಸುವೇಂದು ಟ್ವೀಟ್ ಮಾಡಿ, ಮಿಥುನ್ ಘೋಷ್ ಅವರು ಬಿಜೆಪಿ ಯುವ ಮೋರ್ಚಾದ ಉತ್ತರ ದಿನಾಜ್ಪುರ ಜಿಲ್ಲೆಯ ಉಪಾಧ್ಯಕ್ಷರಾಗಿದ್ದರು. ಇಟಾಹಾರ್ನಲ್ಲಿ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇದರಲ್ಲಿ ಖಂಡಿತ ಟಿಎಂಸಿ ಕೈವಾಡವಿದೆ. ಅವರು ತಮ್ಮ ಯಜಮಾನನ ಅಣತಿಗೆ ಅನುಸಾರವಾಗಿ ಇಂಥ ಕೃತ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಟಿಎಂಸಿ ಇಟಾಹಾರ್ ಶಾಸಕ ಮೊಹಾರಾಫ್ ಹುಸ್ಸೇನ್, ನಮ್ಮ ತೃಣಮೂಲ ಕಾಂಗ್ರೆಸ್ಗೂ, ಮಿಥುನ್ ಘೋಷ್ ಹತ್ಯೆಗೂ ಯಾವುದೇ ಸಂಬಂಧವಿಲ್ಲ. ಬೇರೆ ಯಾರಾದರೂ, ಇನ್ಯಾವುದೇ ದ್ವೇಷದ ಕಾರಣಕ್ಕೆ ಈ ಹತ್ಯೆ ಮಾಡಿಬಹುದು. ಪೊಲೀಸರ ತನಿಖೆಯಿಂದ ಸತ್ಯ ಹೊರಬರುತ್ತದೆ ಎಂದಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
ಹಲವು ಬಾರಿ ಮಿಥುನ್ ಅವರ ಮೇಲೆ ಹಲ್ಲೆ ಪ್ರಯತ್ನವೂ ಆಗಿತ್ತು. ಪೊಲೀಸರಿಗೆ ಈ ಬಗ್ಗೆ ದೂರು ಕೂಡ ನೀಡಿದ್ದೇವೆ ಆದರೂ ಪೊಲಿಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಉತ್ತರ ದಿನಾಜ್ಪುರ ಬಿಜೆಪಿ ಅಧ್ಯಕ್ಷ ವಸುದೇವ್ ಸರ್ಕಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Mithun Ghosh, a youth BJP leader from Itahar in the North Dinajpur district of West Bengal, was killed by unknown miscreants outside his home in the Rajgram village on Sunday. According to the BJP, Trinamool Congress anti-socials are responsible for the murder. However, the Trinamool Congress has dismissed the allegation.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm