ಬ್ರೇಕಿಂಗ್ ನ್ಯೂಸ್
18-10-21 08:47 pm Headline Karnataka News Network ಕ್ರೈಂ
ನವದೆಹಲಿ, ಅ.18: ದೇರಾ ಸಚ್ಚಾ ಸೌದಾ ಸಂಘಟನೆಯ ಮುಖ್ಯಸ್ಥ, ಸ್ವಯಂಘೋಷಿತ ಬಾಬಾ ಗುರ್ಮೀತ್ ಸಿಂಗ್ ರಾಮ್ ರಹೀಮ್ ಗೆ ಸಿಬಿಐ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2002ರಲ್ಲಿ ತನ್ನ ಆಶ್ರಮದ ಮ್ಯಾನೇಜರ್ ನನ್ನು ಕೊಲ್ಲಿಸಿದ ಪ್ರಕರಣದಲ್ಲಿ ಇತ್ತೀಚೆಗೆ ಕೋರ್ಟ್ ಗುರ್ಮೀತ್ ಸೇರಿ ನಾಲ್ಕು ಮಂದಿಯನ್ನು ತಪ್ಪಿತಸ್ಥರು ಎಂದು ಘೋಷಿಸಿತ್ತು. ಇಂದು ಅಪರಾಧಿಗಳಿಗೆ ಶಿಕ್ಷೆ ಪ್ರಕಟಿಸಿ ಕೋರ್ಟ್ ತೀರ್ಪು ನೀಡಿದೆ.
ಶಿಕ್ಷೆಯ ಜೊತೆಗೆ ಗುರ್ಮಿತ್ ಬಾಬಾನಿಗೆ 31 ಲಕ್ಷ ರೂಪಾಯಿ ದಂಡ ಮತ್ತು ಇತರ ನಾಲ್ವರಿಗೆ ತಲಾ 50 ಸಾವಿರ ರೂ. ದಂಡವನ್ನೂ ವಿಧಿಸಿದೆ. ಗುರ್ಮಿತ್ ಆಶ್ರಮದಲ್ಲಿ ಮ್ಯಾನೇಜರ್ ಆಗಿದ್ದ ರಂಜಿತ್ ಸಿಂಗ್ ಎಂಬಾತನನ್ನು 2002ರಲ್ಲಿ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಆಶ್ರಮದಲ್ಲಿ ಬಾಬಾನೇ ಮಹಿಳೆಯರನ್ನು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದಾನೆಂದು ಅನಾಮಧೇಯ ಪತ್ರವೊಂದು ವೈರಲ್ ಆಗಿತ್ತು. ಅದನ್ನು ರಂಜಿತ್ ಸಿಂಗ್ ಮಾಡಿದ್ದಾನೆಂದು ಗುರ್ಮಿತ್ ಆತನನ್ನು ಕೊಲ್ಲಿಸಿದ್ದ.


ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದ ಸಿಬಿಐ ಅಧಿಕಾರಿಗಳು, ಗುರ್ಮಿತ್ ರಾಮ್ ರಹೀಂ ಸ್ವತಃ ತನ್ನ ಮ್ಯಾನೇಜರನ್ನು ಕೊಲ್ಲಿಸಿದ್ದ. ತನ್ನ ವಿರುದ್ಧ ಬರೆಯಲಾಗಿದ್ದ ಅನಾಮಧೇಯ ಪತ್ರವನ್ನು ಹೊರಬಿಟ್ಟು ಸುದ್ದಿಯಾಗಲು ಕಾರಣವಾಗಿದ್ದ ಅನ್ನುವ ನೆಲೆಯಲ್ಲಿ ಆತನೇ ಸಹಚರರ ಮೂಲಕ ಕೊಲ್ಲಿಸಿದ್ದ ಎಂದು ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಬೇರೆ ಪ್ರಕರಣದಲ್ಲಿ ಸದ್ಯ ಜೈಲಿನಲ್ಲಿರುವ ಗುರ್ಮೀತ್ ಬಾಬಾನ ಜೊತೆಗೆ ಆತನ ಸಹಚರರು ಕೂಡ ಈಗ ಜೈಲು ಪಾಲಾಗಿದ್ದಾರೆ.
ಗುರ್ಮೀತ್ ಜೊತೆಗೆ ಜಸ್ಬೀರ್ ಸಿಂಗ್, ಸಾಬ್ದಿಲ್, ಅವತಾರ್ ಸಿಂಗ್, ಕಿಶನ್ ಲಾಲ್ ಮತ್ತು ಈಗಾಗಲೇ ಮೃತಪಟ್ಟಿರುವ ಇಂದರ್ ಸೇನ್ ತಪ್ಪಿತಸ್ಥರು ಎಂದು ಅ.8ರಂದು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿತ್ತು. ಆರು ಮಂದಿಯ ವಿರುದ್ಧ ಕೊಲೆ (302) ಮತ್ತು 120 ಬಿ ಅಡಿ ಪ್ರಕರಣ ದಾಖಲಾಗಿತ್ತು. ಆರೋಪಿಗಳಾಗಿದ್ದ ಜಸ್ಬೀರ್ ಮತ್ತು ಸಾಬ್ದಿಲ್ ಸೇರಿಕೊಂಡು, ರಂಜಿತ್ ಸಿಂಗ್ ನನ್ನು ಹರ್ಯಾಣದ ಕುರುಕ್ಷೇತ್ರ ಎಂಬಲ್ಲಿಗೆ ಕರೆದೊಯ್ದು ಗುಂಡು ಹಾರಿಸಿ ಕೊಲೆ ನಡೆಸಿದ್ದು ಸಾಬೀತಾಗಿದ್ದರಿಂದ ಅವರ ವಿರುದ್ಧ ಆರ್ಮ್ಸ್ ಏಕ್ಟ್ ಪ್ರಕಾರ ಕೇಸು ದಾಖಲಾಗಿತ್ತು.

ಅತ್ಯಾಚಾರ ಪ್ರಕರಣದಲ್ಲಿ 20 ವರ್ಷ ಶಿಕ್ಷೆ
ಗುರ್ಮೀತ್ ರಾಮ್ ರಹೀಂ ತನ್ನ ಆಶ್ರಮದಲ್ಲಿ ಇಬ್ಬರು ಅನುಯಾಯಿ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ್ದ ಪ್ರಕರಣದಲ್ಲಿ ಸದ್ಯ 20 ವರ್ಷಗಳ ಜೈಲು ವಾಸದಲ್ಲಿದ್ದಾನೆ. 2017ರಲ್ಲಿ ಪಂಚ್ ಕುಲಾದ ಸಿಬಿಐ ವಿಶೇಷ ಕೋರ್ಟ್ ಈ ಪ್ರಕರಣದಲ್ಲಿ ತೀರ್ಪು ನೀಡಿತ್ತು. 2019ರಲ್ಲಿ ಪತ್ರಕರ್ತ ರಾಮಚಂದ್ರ ಛತ್ರಪತಿ ಕೊಲೆ ಪ್ರಕರಣದಲ್ಲಿಯೂ ಗುರ್ಮೀತ್ ಮತ್ತು ಇತರ ಮೂವರನ್ನು ಕೋರ್ಟ್ ಅಪರಾಧಿಗಳೆಂದು ಘೋಷಣೆ ಮಾಡಿತ್ತು. 2002ರಲ್ಲಿ ಗುರ್ಮೀತ್ ಬಾಬಾ ವಿರುದ್ಧ ಬಂದಿದ್ದ ಅನಾಮಧೇಯ ಪತ್ರಗಳನ್ನು ಆಧರಿಸಿ, ಬಾಬಾ ಮಹಿಳೆಯರನ್ನು ಲೈಂಗಿಕ ಶೋಷಣೆಗೆ ಗುರಿಪಡಿಸಿದ್ದ ಎಂದು ರಾಮಚಂದ್ರ ಛತ್ರಪತಿ ವರದಿ ಬರೆದಿದ್ದರು.
A special Central Bureau of Investigation (CBI) court at Panchkula on Monday sentenced former head of Dera Sacha Sauda Gurmeet Ram Rahim Singh to life imprisonment for the murder of one Ranjeet Singh
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm