ಬ್ರೇಕಿಂಗ್ ನ್ಯೂಸ್
18-10-21 09:21 pm Headline Karnataka News Network ಕ್ರೈಂ
ಲಕ್ನೋ, ಅ.18: ಕೋರ್ಟ್ ಕಾಂಪ್ಲೆಕ್ಸ್ ಒಳಗಡೆಯೇ ಹಾಡಹಗಲೇ ವಕೀಲರೊಬ್ಬರನ್ನು ಗುಂಡಿಟ್ಟು ಸಾಯಿಸಿದ ಘಟನೆ ಉತ್ತರ ಪ್ರದೇಶದ ಶಹಜಾನ್ ಪುರ್ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಮೃತ ವಕೀಲರನ್ನು ಭೂಪೇಂದ್ರ ಪ್ರತಾಪ್ ಸಿಂಗ್ ಎಂದು ಗುರುತಿಸಲಾಗಿದೆ.
ಕೋರ್ಟ್ ಕಾಂಪ್ಲೆಕ್ಸ್ ನ ಮೂರನೇ ಮಹಡಿಯಲ್ಲಿ ಘಟನೆ ನಡೆದಿದೆ. ಜಲಾಲಬಾದ್ ನಿವಾಸಿಯಾಗಿರುವ ಭೂಪೇಂದ್ರ ಸಿಂಗ್ ಇಂದು ಮಧ್ಯಾಹ್ನ ಕೋರ್ಟ್ ಮಹಡಿಗೆ ಬಂದಿದ್ದು, ಮೂರನೇ ಮಹಡಿಯಲ್ಲಿರುವ ಎಸಿಜೆಎಂಎಫ್ ಕೋರ್ಟ್ ಕಚೇರಿಗೆ ತೆರಳಿದ್ದರು. ಪ್ರಕರಣ ಒಂದಕ್ಕೆ ಸಂಬಂಧಿಸಿ ಕೋರ್ಟ್ ಕ್ಲರ್ಕ್ ಅನ್ನು ಭೇಟಿಯಾಗಲೆಂದು ತೆರಳಿದ್ದರು. ಇದೇ ವೇಳೆ, ಗುಂಡಿನ ಸದ್ದು ಕೇಳಿಬಂದಿದ್ದು , ಭೂಪೇಂದ್ರ ಸಿಂಗ್ ಮೃತರಾಗಿದ್ದರು.
ಶವದ ಬಳಿಯಿಂದ ದೇಸೀ ಪಿಸ್ತೂಲ್ ಒಂದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರಂಭದಲ್ಲಿ ಆತ್ಮಹತ್ಯೆಯೇ ಅನ್ನುವ ಅನುಮಾನ ಕೇಳಿಬಂದಿತ್ತು. ಆದರೆ, ಕೆಲವರು ಕೊಲೆ ಎನ್ನುತ್ತಲೇ ವಕೀಲರು ಕೋರ್ಟ್ ಆವರಣದಲ್ಲಿಯೇ ಪ್ರತಿಭಟನೆ ಆರಂಭಿಸಿದ್ದಾರೆ. ಕೂಡಲೇ ಪೊಲೀಸರು ಅಲ್ಲಿನ ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಹಂತಕ ವಕೀಲನನ್ನು ಬಂಧಿಸಿದ್ದಾರೆ. ವಿಚಾರಣೆ ನಡೆಸಿದಾಗ ಆರೋಪಿ ತನ್ನ ಕೃತ್ಯ ಬಾಯಿಬಿಟ್ಟಿದ್ದಾನೆ. ಪೂರ್ವ ದ್ವೇಷದಲ್ಲಿ ಭೂಪೇಂದ್ರ ಸಿಂಗ್ ನನ್ನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬಗ್ಗೆ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಾರ್ಟಿ ಮತ್ತು ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಪದೇ ಪದೇ ಈ ರೀತಿಯ ಕೃತ್ಯ ಮರುಕಳಿಸುತ್ತಿರುವುದು ಯೋಗಿ ಆದಿತ್ಯನಾಥ್ ಸರಕಾರದ ಕಾನೂನು ಸುವ್ಯವಸ್ಥೆ ಹೇಗಿದೆ ಅನ್ನುವುದನ್ನು ತೋರಿಸುತ್ತಿದೆ ಎಂದು ನಾಯಕರು ದೂರಿದ್ದಾರೆ.
A lawyer was allegedly shot dead inside a district court complex in Uttar Pradesh’s Shahjahanpur on Monday. The deceased lawyer has been identified as Bhupendra Pratap Singh. The body of the lawyer was found on the third floor of the court. A country-made pistol has been recovered from near the body of the deceased lawyer.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm