ಬ್ರೇಕಿಂಗ್ ನ್ಯೂಸ್
18-10-21 09:21 pm Headline Karnataka News Network ಕ್ರೈಂ
ಲಕ್ನೋ, ಅ.18: ಕೋರ್ಟ್ ಕಾಂಪ್ಲೆಕ್ಸ್ ಒಳಗಡೆಯೇ ಹಾಡಹಗಲೇ ವಕೀಲರೊಬ್ಬರನ್ನು ಗುಂಡಿಟ್ಟು ಸಾಯಿಸಿದ ಘಟನೆ ಉತ್ತರ ಪ್ರದೇಶದ ಶಹಜಾನ್ ಪುರ್ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಮೃತ ವಕೀಲರನ್ನು ಭೂಪೇಂದ್ರ ಪ್ರತಾಪ್ ಸಿಂಗ್ ಎಂದು ಗುರುತಿಸಲಾಗಿದೆ.
ಕೋರ್ಟ್ ಕಾಂಪ್ಲೆಕ್ಸ್ ನ ಮೂರನೇ ಮಹಡಿಯಲ್ಲಿ ಘಟನೆ ನಡೆದಿದೆ. ಜಲಾಲಬಾದ್ ನಿವಾಸಿಯಾಗಿರುವ ಭೂಪೇಂದ್ರ ಸಿಂಗ್ ಇಂದು ಮಧ್ಯಾಹ್ನ ಕೋರ್ಟ್ ಮಹಡಿಗೆ ಬಂದಿದ್ದು, ಮೂರನೇ ಮಹಡಿಯಲ್ಲಿರುವ ಎಸಿಜೆಎಂಎಫ್ ಕೋರ್ಟ್ ಕಚೇರಿಗೆ ತೆರಳಿದ್ದರು. ಪ್ರಕರಣ ಒಂದಕ್ಕೆ ಸಂಬಂಧಿಸಿ ಕೋರ್ಟ್ ಕ್ಲರ್ಕ್ ಅನ್ನು ಭೇಟಿಯಾಗಲೆಂದು ತೆರಳಿದ್ದರು. ಇದೇ ವೇಳೆ, ಗುಂಡಿನ ಸದ್ದು ಕೇಳಿಬಂದಿದ್ದು , ಭೂಪೇಂದ್ರ ಸಿಂಗ್ ಮೃತರಾಗಿದ್ದರು.
ಶವದ ಬಳಿಯಿಂದ ದೇಸೀ ಪಿಸ್ತೂಲ್ ಒಂದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರಂಭದಲ್ಲಿ ಆತ್ಮಹತ್ಯೆಯೇ ಅನ್ನುವ ಅನುಮಾನ ಕೇಳಿಬಂದಿತ್ತು. ಆದರೆ, ಕೆಲವರು ಕೊಲೆ ಎನ್ನುತ್ತಲೇ ವಕೀಲರು ಕೋರ್ಟ್ ಆವರಣದಲ್ಲಿಯೇ ಪ್ರತಿಭಟನೆ ಆರಂಭಿಸಿದ್ದಾರೆ. ಕೂಡಲೇ ಪೊಲೀಸರು ಅಲ್ಲಿನ ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಹಂತಕ ವಕೀಲನನ್ನು ಬಂಧಿಸಿದ್ದಾರೆ. ವಿಚಾರಣೆ ನಡೆಸಿದಾಗ ಆರೋಪಿ ತನ್ನ ಕೃತ್ಯ ಬಾಯಿಬಿಟ್ಟಿದ್ದಾನೆ. ಪೂರ್ವ ದ್ವೇಷದಲ್ಲಿ ಭೂಪೇಂದ್ರ ಸಿಂಗ್ ನನ್ನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬಗ್ಗೆ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಾರ್ಟಿ ಮತ್ತು ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಪದೇ ಪದೇ ಈ ರೀತಿಯ ಕೃತ್ಯ ಮರುಕಳಿಸುತ್ತಿರುವುದು ಯೋಗಿ ಆದಿತ್ಯನಾಥ್ ಸರಕಾರದ ಕಾನೂನು ಸುವ್ಯವಸ್ಥೆ ಹೇಗಿದೆ ಅನ್ನುವುದನ್ನು ತೋರಿಸುತ್ತಿದೆ ಎಂದು ನಾಯಕರು ದೂರಿದ್ದಾರೆ.
A lawyer was allegedly shot dead inside a district court complex in Uttar Pradesh’s Shahjahanpur on Monday. The deceased lawyer has been identified as Bhupendra Pratap Singh. The body of the lawyer was found on the third floor of the court. A country-made pistol has been recovered from near the body of the deceased lawyer.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm