ಬ್ರೇಕಿಂಗ್ ನ್ಯೂಸ್
19-10-21 09:24 am Mangaluru Correspondent ಕ್ರೈಂ
ಮಂಗಳೂರು, ಅ.19: ಮಂಗಳೂರಿನ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ವಿರುದ್ಧ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿ ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ವಕೀಲರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಕಳೆದ ಆಗಸ್ಟ್ 8 ರಂದು ವಕೀಲ ಕೆ.ಎಸ್.ಎನ್ ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದಳು. ಈ ನಡುವೆ, ರಾಜೇಶ್ ಯುವತಿಯನ್ನು ಪುಸಲಾಯಿಸಿ ಸೆಕ್ಸ್ ನಡೆಸಲು ಒತ್ತಾಯಿಸುತ್ತಿದ್ದ. ಕಳೆದ ಸೆ.25 ರಂದು ತನ್ನ ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿದ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಆರೋಪಿ ವಿರುದ್ಧ ಸೆಕ್ಷನ್ 376, 376-2, 376(2)-ಕೆ, 376 ಸಿ, 511, 354(ಎ), 354(ಬಿ), 354 (ಸಿ), 354 (ಡಿ), 506, 34, 384, 388, 389 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೆ.ಎಸ್.ಎನ್ ರಾಜೇಶ್ ಲೋಕಾಯುಕ್ತದಲ್ಲಿ ದಾಖಲಾಗುವ ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿಶೇಷ ಸರಕಾರಿ ಅಭಿಯೋಜಕರಾಗಿ ಕಳೆದ ಕೆಲವು ವರ್ಷಗಳಿಂದ ಸೇವೆ ನಡೆಸುತ್ತಿದ್ದರು. ಲೋಕಾಯುಕ್ತ ಪ್ರಕರಣಗಳಲ್ಲಿ ಸಂತ್ರಸ್ತರ ಪರವಾಗಿ ವಾದಿಸಲು ಸರಕಾರದಿಂದ ನೇಮಕಗೊಂಡ ವಕೀಲರಾಗಿದ್ದರು. ಹೀಗಾಗಿ ರಾಜೇಶ್ ಮಂಗಳೂರಿನಲ್ಲಿ ಒಳ್ಳೆಯ ಹೆಸರು ಗಳಿಸಿದ್ದರು. ಎರಡು ದಿನಗಳ ಹಿಂದೆ ರಾಜೇಶ್ ಮತ್ತು ವಿದ್ಯಾರ್ಥಿನಿ ಮಾತನಾಡಿದ್ದು ಎನ್ನಲಾದ ಫೋನ್ ಕರೆ ಆಡಿಯೋ ಹರಿದಾಡಿತ್ತು. ಆಕೆಯನ್ನು ಕಚೇರಿಗೆ ಬರುವಂತೆ ಮತ್ತು ಮುಂದೆಂದೂ ಈ ರೀತಿ ನಡೆದುಕೊಳ್ಳಲ್ಲ. ಇಲ್ಲಿಗೇ ಬಿಟ್ಟು ಬಿಡು ಎಂದು ವಕೀಲ ಗೋಗರೆಯುವ ಆಡಿಯೋ ಇತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಾಜೇಶ್, ಇದು ನನ್ನ ಇಮೇಜ್ ಹಾಳು ಮಾಡಲು ಯತ್ನಿಸುವ ಪ್ರಯತ್ನ. ನನ್ನನ್ನು ಲೋಕಾಯುಕ್ತ ಹುದ್ದೆಯಿಂದ ತೆರವುಗೊಳಿಸಲು ಕೆಲವು ವಕೀಲರೇ ಸೇರಿಕೊಂಡು ಈ ಕೆಲಸ ಮಾಡಿದ್ದಾರೆ. ಆಡಿಯೋ ತನ್ನದಲ್ಲ. ಯಾರೋ ಕ್ರಿಯೇಟ್ ಮಾಡಿದ್ದಾರೆ ಎಂದು ಹೇಳಿದ್ದರು. ಈ ನಡುವೆ, ಸೋಮವಾರ ಸಂಜೆ ಮಂಗಳೂರು ಪೊಲೀಸ್ ಕಮಿಷನರ್ ಭೇಟಿಯಾಗಿದ್ದ ಎಬಿವಿಪಿ ನಿಯೋಗ, ವಕೀಲನನ್ನು ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿತ್ತು.

ಇದರ ಬೆನ್ನಲ್ಲೇ ಎಫ್ಐಆರ್ ದಾಖಲಾಗಿದ್ದು ರಾಜೇಶ್ ಕಚೇರಿಯಲ್ಲಿ ಸಹೋದ್ಯೋಗಿ ಆಗಿದ್ದಾರೆ ಎನ್ನಲಾದ ಮಹಾಲಕ್ಷ್ಮಿ ಹೆಗ್ಡೆ ಮತ್ತು ಧ್ರುವ ಎಂಬವರ ವಿರುದ್ಧವೂ ಪ್ರಕರಣದಲ್ಲಿ ಆರೋಪಿಗಳಾಗಿ ಹೆಸರಿಸಲಾಗಿದೆ
Mangalore Police file FIR against Advocate KSN Rajesh of KSN Associates over rape attempt of staff at his office. The girl has filed a complaint stating that she was sexually harassed by the Advocate. Rajesh is said to be absconding
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm