ಬ್ರೇಕಿಂಗ್ ನ್ಯೂಸ್
19-10-21 12:15 pm Mangaluru Correspondent ಕ್ರೈಂ
ಉಳ್ಳಾಲ, ಅ.19: ಬೈಕಲ್ಲಿ ಹೊಂಚು ಹಾಕಿ ಕುಳಿತಿದ್ದ ಮೂವರು ಅಪರಿಚಿತರು ಬಿಜೆಪಿ ಪ್ರಮುಖನ ಮೇಲೆ ತಲವಾರು ದಾಳಿ ನಡೆಸಿ, ಕೊಲೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ಕೊಣಾಜೆ ವಿ.ವಿ ಕ್ಯಾಂಪಸ್ ಹಾಸ್ಟೆಲ್ ಬಳಿ ನಡೆದಿದೆ.
ಕೊಣಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಬಿಜೆಪಿ ಪ್ರಮುಖರಾದ ಪ್ರಕಾಶ್ ಶೆಟ್ಟಿ(41) ಎಂಬವರ ಮೇಲೆ ತಲವಾರು ದಾಳಿ ನಡೆದಿದೆ. ಸಮಯ ಪ್ರಜ್ಞೆ ಮೆರೆದ ಪ್ರಕಾಶ್ ಅವರು ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ.
ಕೊಣಾಜೆ ವಿವಿ ಆವರಣದ ಹಾಸ್ಟೆಲ್ ಬಳಿಯ ದುರ್ಗಾ ಫ್ಯಾನ್ಸಿ & ಜನರಲ್ ಸ್ಟೋರ್ ನ ಮಾಲಕರಾದ ಪ್ರಕಾಶ್ ಅವರು ನಿನ್ನೆ ರಾತ್ರಿ 9.30 ಗಂಟೆಗೆ ಅಂಗಡಿ ಬಂದ್ ಮಾಡಿ ಮನೆ ಕಡೆಗೆ ಹೊರಟಿದ್ದರು. ಅಂಗಡಿಯ ಅನತಿ ದೂರದಲ್ಲಿ ಕಪ್ಪು ಪಲ್ಸರ್ ಬೈಕಿನಲ್ಲಿ ಕಾದು ಕುಳಿತಿದ್ದ ಮೂವರು ಯುವಕರನ್ನು ಪ್ರಕಾಶ್ ಮೊದಲೇ ಗಮನಿಸಿದ್ದರು ಎನ್ನಲಾಗಿದೆ. ಹೀಗಾಗಿ ಪ್ರಕಾಶ್ ಅವರು ಅಂಗಡಿ ಬಂದ್ ಮಾಡಿ ಪರಿಚಯಸ್ಥ ಮಂಜುನಾಥ್ ಎಂಬವರ ಬೈಕ್ ಏರಿ ಹೊರಟಾಗ ಹಿಂದಿನಿಂದ ಬೈಕ್ ನಲ್ಲಿ ಹಿಂಬಾಲಿಸಿದ ದುಷ್ಕರ್ಮಿಗಳು ಪ್ರಕಾಶ ಅವರನ್ನು ಗುರಿಯಾಗಿಸಿ ತಲವಾರು ಬೀಸಿದ್ದಾರೆ. ಅಪಾಯದ ಮುನ್ಸೂಚನೆ ಅರಿತಿದ್ದ ಪ್ರಕಾಶ್ ಶೆಟ್ಟಿ ತಲವಾರು ಏಟನ್ನು ತಪ್ಪಿಸಲು ಯತ್ನಿಸಿದಾಗ ಇವರ ಬೈಕ್ ಉರುಳಿ ಬಿದ್ದಿದೆ. ಕೂಡಲೇ ಬೈಕ್ ಚಾಲಕ ಮತ್ತು ಪ್ರಕಾಶ್ ಹತ್ತಿರದ ಜನ ವಸತಿ ಸ್ಥಳಕ್ಕೆ ಓಡಿ ಬಚಾವಾಗಿದ್ದಾರೆ. ಪ್ರಕಾಶ್ ಬಲ ಕೈಗೆ ತಲವಾರಿನ ಏಟು ತಗಲಿದ್ದು ಈ ಬಗ್ಗೆ ಅವರು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರತೀಕಾರಕ್ಕೆ ದಾಳಿ ನಡೆದಿರುವ ಶಂಕೆ
ಕಳೆದ ವಾರ ಕೊಣಾಜೆ ಜಂಕ್ಷನ್ ನ ಕೊಣಾಜೆ ಸ್ಟೋರ್ಸ್ & ಸ್ವೀಟ್ಸ್ ಮಳಿಗೆಯ ಮಾಲಕ ಉಸ್ಮಾನ್ ಎಂಬಾತ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು ಆರೋಪಿಯ ಬಂಧನಕ್ಕೆ ಪ್ರಕಾಶ್ ಶೆಟ್ಟಿ ಒತ್ತಡ ಹೇರಿದ್ದರು ಎನ್ನಲಾಗಿದೆ. ಇದಲ್ಲದೆ ಸಮಾಜ ಘಾತುಕ ದುಷ್ಕೃತ್ಯಗಳ ವಿರುದ್ಧ ಪ್ರಕಾಶ್ ಶೆಟ್ಟಿ ಹೋರಾಟ ನಡೆಸುತ್ತಾ ಬಂದಿದ್ದರು. ಇದೇ ನೆಲೆಯಲ್ಲಿ ಪ್ರತೀಕಾರ ತೀರಿಸಲು ತಲವಾರು ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ.
ಸ್ವೀಟ್ ಖರೀದಿಗೆ ಬಂದಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ; ಕೊಣಾಜೆ ಸ್ಟೋರ್ಸ್ ಮಾಲಕನ ಪುತ್ರನ ಬಂಧನ
Mangalore Konaje Bike Borne Miscreants attack BJP member Prakash Shetty in talwar last night, escapes from death. Konaje police are now investigating the case.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm