ಬ್ರೇಕಿಂಗ್ ನ್ಯೂಸ್
21-10-21 12:34 pm Mangalore Reporter ಕ್ರೈಂ
ಮಂಗಳೂರು, ಅ.21 : ವಾರಂಟ್ ಪ್ರಕರಣದಲ್ಲಿ ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸರ ಮೇಲೆ ನಟೋರಿಯಸ್ ರೌಡಿಯೊಬ್ಬ ತಲವಾರು ಬೀಸಿ ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲದಲ್ಲಿ ನಡೆದಿದ್ದು ಬಳಿಕ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದಾನೆ. ಆತನಿಗೆ ಪರಾರಿಯಾಗಲು ಸಹಕರಿಸಿದ ಆರೋಪಿಯನ್ನು ಅಡ್ಡಗಟ್ಟಿ ಪೊಲೀಸರು ಬಂಧಿಸಿದ್ದಾರೆ.
ಮುಕ್ಕಚ್ಚೇರಿ ಬಳಿಯ ಧರ್ಮನಗರ ನಿವಾಸಿ ನಟೋರಿಯಸ್ ಕ್ರಿಮಿನಲ್ ಮುಕ್ತಾರ್ ಅಹ್ಮದ್ ಎಂಬಾತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಈತನ ಮೇಲೆ ಹತ್ತಕ್ಕೂ ಹೆಚ್ಚು ಕೇಸುಗಳಿದ್ದು, ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಉಳ್ಳಾಲ ಪೊಲೀಸರು ಕೋರ್ಟಿನಿಂದ ವಾರಂಟ್ ಪಡೆದು ಇಂದು ಬೆಳಗ್ಗೆ ಬಂಧಿಸಲು ತೆರಳಿದ್ದರು. ಧರ್ಮನಗರದ ಮನೆಗೆ ತೆರಳಿದ್ದಾಗ ತಲವಾರು ಹಿಡಿದೇ ಹೊರಬಂದ ಮುಕ್ತಾರ್, ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಅಲ್ಲಿಂದ ತಲವಾರು ತೋರಿಸುತ್ತಲೇ ಹತ್ತಿರದ ನವಾಝ್ ಎಂಬವನ ಬೈಕಿನಲ್ಲಿ ಪರಾರಿಯಾಗಿದ್ದಾನೆ.

ಪೊಲೀಸರು ಬೆನ್ನಟ್ಟಿದ್ದು ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ರಸ್ತೆಯಲ್ಲಿ ಅಡ್ಡಹಾಕಿ ಬೈಕನ್ನು ಹಿಡಿದಿದ್ದಾರೆ. ಆದರೆ, ಇದರ ನಡುವಲ್ಲೇ ಮುಕ್ತಾರ್ ಅಹ್ಮದ್ ಬೈಕಿನಿಂದ ಇಳಿದು ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ. ಬೈಕಿನಲ್ಲಿದ್ದ ನವಾಝ್ ನನ್ನು ಪೊಲೀಸರು ಹಿಂಬಾಲಿಸಿ ಬಂದಿದ್ದನ್ನು ತಿಳಿದು ಎಸ್ಕೇಪ್ ಆಗುವ ಯತ್ನದಲ್ಲಿ ಮುಂದಿನಿಂದ ಬಂದ ವ್ಯಾಗನರ್ ಕಾರಿಗೆ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದಾನೆ. ಈ ವೇಳೆ, ಸಿನಿಮಾ ಮಾದರಿಯಲ್ಲಿ ನವಾಝ್ ನನ್ನು ಬಂಧಿಸಿದ್ದಾರೆ. ಈತ ಈ ಹಿಂದೆ ಟಾರ್ಗೆಟ್ ಗ್ಯಾಂಗ್ ಲೀಡರ್ ಇಲ್ಯಾಸ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ದಾವೂದ್ ಎಂಬಾತನ ತಮ್ಮನಾಗಿದ್ದು ಆತನ ಕ್ರಿಮಿನಲ್ ಹಿನ್ನೆಲೆಯ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಮುಕ್ತಾರ್ ವಿರುದ್ಧ ಉಳ್ಳಾಲ ಠಾಣೆ ಒಂದರಲ್ಲೇ ಏಳು ಪ್ರಕರಣಗಳಿದ್ದು ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Ullal Notorious criminal tries to attack Police staffs with Talwar when they went to arrest him at his residence after Warrant was issued against him. The police somehow managed to arrest him at Thokottu. The arrested has Ben identified as Mukthar a resident of Mukacheri.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm