ಬ್ರೇಕಿಂಗ್ ನ್ಯೂಸ್
22-10-21 02:43 pm Mangalore Reporter ಕ್ರೈಂ
ಉಡುಪಿ, ಅ.22 : ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಸ್ನೇಹಿತರ ಜೊತೆ ಸೇರಿ ಪತ್ನಿಯೇ ಕೊಲೆಗೈದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಎಂದು ಬಿಂಬಿಸಲಾಗಿದ್ದ ಪ್ರಕರಣದಲ್ಲಿ ರೋಚಕ ಟ್ವಿಸ್ಟ್ ಸಿಕ್ಕಿದ್ದು, ಪತ್ನಿ ಹಾಗೂ ಸ್ನೇಹಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಂಪಾರಿನ ವಿವೇಕನಗರದ ನಾಗರಾಜ(36) ಅ.19 ರಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಪತ್ನಿ ಮಮತಾ ತನ್ನ ಗಂಡ ವಿಪರೀತ ಕುಡಿತದ ಚಟ ಹೊಂದಿದ್ದು ಅದೇ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿದ್ದರು ಎಂದು ದೂರು ನೀಡಿದ್ದಳು. ಇದೀಗ ಮಮತಾ ಮತ್ತು ಆಕೆಯ ಸ್ನೇಹಿತರಾದ ಕುಮಾರ್ ಮತ್ತು ದಿನಕರ್ ಅವರನ್ನು ಪೊಲೀಸರು ಬಂಧಿಸಿದ್ದು ಕೊಲೆ ನಡೆಸಿರುವುದನ್ನು ಪತ್ತೆ ಮಾಡಿದ್ದಾರೆ.

ವಿಪರೀತ ಮದ್ಯ ವ್ಯಸನಿಯಾಗಿದ್ದ ನಾಗರಾಜ್ ತನ್ನ ಜೀವನದ ಬಗ್ಗೆ ಜಿಗುಪ್ಸೆಗೊಂಡಿದ್ದು ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಆದರೆ ಮೃತರ ಸಹೋದರಿ ಶಿವಮೊಗ್ಗದ ಸಾಗರ ತಾಲೂಕಿನ ಮಾಲ್ವೆಯ ನಿವಾಸಿ ನಾಗರತ್ನ ಮತ್ತು ಇತರ ಕೆಲವು ಸಂಬಂಧಿಕರು ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು.
ಶಂಕರನಾರಾಯಣ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದ್ದ ಮೃತದೇಹದಲ್ಲಿ ಕತ್ತಿನ ಭಾಗದಲ್ಲಿ ಗಾಯದ ಗುರುತು ಇರುವುದನ್ನು ಕುಟುಂಬ ಸದಸ್ಯರು ಗಮನಿಸಿದ್ದು ಕೊಲೆ ಬಗ್ಗೆ ಶಂಕಿಸಿ ನಾಗರತ್ನ ಪೊಲೀಸರಿಗೆ ದೂರು ನೀಡಿದ್ದರು.
ಇದಕ್ಕೂ ಮುನ್ನ ನಾಗರಾಜ್ ತನ್ನ ಪತ್ನಿ ಮತ್ತು ಇತರರು ಸೇರಿ ತನಗೆ ಹಲ್ಲೆ ನಡೆಸಿದ್ದಾಗಿ ಸಹೋದರಿಗೆ ಕರೆ ಮಾಡಿ ನೋವು ತೋಡಿಕೊಂಡಿದ್ದರು. ಇದೇ ಶಂಕೆಯಲ್ಲಿ ನಾಗರತ್ನ ದೂರಿನಲ್ಲಿ ತಿಳಿಸಿದ್ದರು. ನಾಗರಾಜ್ ಶಿವಮೊಗ್ಗ ಜಿಲ್ಲೆಯವರಾಗಿದ್ದು, ಮಮತಾಳನ್ನು ಪ್ರೀತಿಸಿ ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದ. ದಂಪತಿಗೆ ಮೂವರು ಮಕ್ಕಳಿದ್ದಾರೆ. ಆದರೆ ನಾಗರಾಜ್ ನಿತ್ಯ ಕುಡುಕನಾಗಿದ್ದು, ಮನೆಯಲ್ಲಿ ದಿನವೂ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ.
ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳಿದ್ದು ಇಬ್ಬರು ಅಪ್ರಾಪ್ತರಾಗಿದ್ದು ರಿಮಾಂಡ್ ಹೋಮ್ ಗೆ ಕಳಿಸಲಾಗಿದೆ. ಮಮತಾಗೆ ಆರೋಪಿಗಳ ಜೊತೆ ಅಕ್ರಮ ಸಂಬಂಧ ಇತ್ತೆನ್ನುವ ಅನುಮಾನ ಉಂಟಾಗಿದ್ದು ಶಂಕರನಾರಾಯಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
What was believed to be a case of suicide, reported four days ago, has taken a new twist with the arrest of five accused including wife and two minors under the Shankernarayana Police station limits of Byndoor Taluk.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm