ಬ್ರೇಕಿಂಗ್ ನ್ಯೂಸ್
22-10-21 02:43 pm Mangalore Reporter ಕ್ರೈಂ
ಉಡುಪಿ, ಅ.22 : ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಸ್ನೇಹಿತರ ಜೊತೆ ಸೇರಿ ಪತ್ನಿಯೇ ಕೊಲೆಗೈದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಎಂದು ಬಿಂಬಿಸಲಾಗಿದ್ದ ಪ್ರಕರಣದಲ್ಲಿ ರೋಚಕ ಟ್ವಿಸ್ಟ್ ಸಿಕ್ಕಿದ್ದು, ಪತ್ನಿ ಹಾಗೂ ಸ್ನೇಹಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಂಪಾರಿನ ವಿವೇಕನಗರದ ನಾಗರಾಜ(36) ಅ.19 ರಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಪತ್ನಿ ಮಮತಾ ತನ್ನ ಗಂಡ ವಿಪರೀತ ಕುಡಿತದ ಚಟ ಹೊಂದಿದ್ದು ಅದೇ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿದ್ದರು ಎಂದು ದೂರು ನೀಡಿದ್ದಳು. ಇದೀಗ ಮಮತಾ ಮತ್ತು ಆಕೆಯ ಸ್ನೇಹಿತರಾದ ಕುಮಾರ್ ಮತ್ತು ದಿನಕರ್ ಅವರನ್ನು ಪೊಲೀಸರು ಬಂಧಿಸಿದ್ದು ಕೊಲೆ ನಡೆಸಿರುವುದನ್ನು ಪತ್ತೆ ಮಾಡಿದ್ದಾರೆ.

ವಿಪರೀತ ಮದ್ಯ ವ್ಯಸನಿಯಾಗಿದ್ದ ನಾಗರಾಜ್ ತನ್ನ ಜೀವನದ ಬಗ್ಗೆ ಜಿಗುಪ್ಸೆಗೊಂಡಿದ್ದು ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಆದರೆ ಮೃತರ ಸಹೋದರಿ ಶಿವಮೊಗ್ಗದ ಸಾಗರ ತಾಲೂಕಿನ ಮಾಲ್ವೆಯ ನಿವಾಸಿ ನಾಗರತ್ನ ಮತ್ತು ಇತರ ಕೆಲವು ಸಂಬಂಧಿಕರು ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು.
ಶಂಕರನಾರಾಯಣ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದ್ದ ಮೃತದೇಹದಲ್ಲಿ ಕತ್ತಿನ ಭಾಗದಲ್ಲಿ ಗಾಯದ ಗುರುತು ಇರುವುದನ್ನು ಕುಟುಂಬ ಸದಸ್ಯರು ಗಮನಿಸಿದ್ದು ಕೊಲೆ ಬಗ್ಗೆ ಶಂಕಿಸಿ ನಾಗರತ್ನ ಪೊಲೀಸರಿಗೆ ದೂರು ನೀಡಿದ್ದರು.
ಇದಕ್ಕೂ ಮುನ್ನ ನಾಗರಾಜ್ ತನ್ನ ಪತ್ನಿ ಮತ್ತು ಇತರರು ಸೇರಿ ತನಗೆ ಹಲ್ಲೆ ನಡೆಸಿದ್ದಾಗಿ ಸಹೋದರಿಗೆ ಕರೆ ಮಾಡಿ ನೋವು ತೋಡಿಕೊಂಡಿದ್ದರು. ಇದೇ ಶಂಕೆಯಲ್ಲಿ ನಾಗರತ್ನ ದೂರಿನಲ್ಲಿ ತಿಳಿಸಿದ್ದರು. ನಾಗರಾಜ್ ಶಿವಮೊಗ್ಗ ಜಿಲ್ಲೆಯವರಾಗಿದ್ದು, ಮಮತಾಳನ್ನು ಪ್ರೀತಿಸಿ ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದ. ದಂಪತಿಗೆ ಮೂವರು ಮಕ್ಕಳಿದ್ದಾರೆ. ಆದರೆ ನಾಗರಾಜ್ ನಿತ್ಯ ಕುಡುಕನಾಗಿದ್ದು, ಮನೆಯಲ್ಲಿ ದಿನವೂ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ.
ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳಿದ್ದು ಇಬ್ಬರು ಅಪ್ರಾಪ್ತರಾಗಿದ್ದು ರಿಮಾಂಡ್ ಹೋಮ್ ಗೆ ಕಳಿಸಲಾಗಿದೆ. ಮಮತಾಗೆ ಆರೋಪಿಗಳ ಜೊತೆ ಅಕ್ರಮ ಸಂಬಂಧ ಇತ್ತೆನ್ನುವ ಅನುಮಾನ ಉಂಟಾಗಿದ್ದು ಶಂಕರನಾರಾಯಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
What was believed to be a case of suicide, reported four days ago, has taken a new twist with the arrest of five accused including wife and two minors under the Shankernarayana Police station limits of Byndoor Taluk.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm