ಬ್ರೇಕಿಂಗ್ ನ್ಯೂಸ್
22-10-21 10:30 pm Mangalore Reporter ಕ್ರೈಂ
ಮಂಗಳೂರು, ಅ.22 : ಮನೆಯೊಂದರಲ್ಲಿ ಪ್ರತಿ ವಾರ ಗೋವುಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಮೂಲ್ಕಿ ಹಾಗೂ ಮೂಡುಬಿದಿರೆ ಪ್ರಖಂಡದ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ್ದು ಕಿನ್ನಿಗೋಳಿಯ ಸಂಕಲಕರಿಯದಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಯನ್ನು ಪತ್ತೆ ಮಾಡಿದ್ದಾರೆ.
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಮಾರುತಿ ಓಮ್ನಿ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 50 ಕೆ.ಜಿ. ಗೋಮಾಂಸವನ್ನು ಪತ್ತೆ ಮಾಡಿದ್ದಾರೆ. ಬಳಿಕ ಅದರಲ್ಲಿದ್ದ ಆರೋಪಿಗಳು ನೀಡಿದ ಮಾಹಿತಿಯಂತೆ ಮೂಲ್ಕಿ ಪೊಲೀಸರಿಗೆ ಬಜರಂಗದಳ ಕಾರ್ಯಕರ್ತರು ಮಾಹಿತಿ ನೀಡಿದ್ದಾರೆ. ಆಬಳಿಕ ಕಸಾಯಿಖಾನೆ ಇದ್ದ ಜಾಗ ಕಾರ್ಕಳ ಠಾಣೆ ವ್ಯಾಪ್ತಿಗೆ ಬರುತ್ತಿದ್ದ ಕಾರಣ ಅಲ್ಲಿನ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ.

ಕಸಾಯಿಖಾನೆಗೆಂದು ಮನೆಯ ಬಳಿಯಲ್ಲೇ ಹಟ್ಟಿಯನ್ನು ರಚಿಸಿದ್ದು ಅಲ್ಲಿ ಪ್ರತಿವಾರ ಗೋವನ್ನು ಖರೀದಿಸಿ ತಂದು ಕಟ್ಟಿ ಹಾಕುತ್ತಿದ್ದರು. ಬಳಿಕ ಅದನ್ನು ಪ್ರತಿ ವಾರ ಅಗತ್ಯ ಇದ್ದಷ್ಟು ಮಾಂಸ ಮಾಡುತ್ತಿದ್ದರು. ಸುತ್ತಲಲ್ಲಿ ಹಿಂದುಗಳ ಮನೆಯೇ ಇದ್ದರೂ, ಗೋವನ್ನು ಮಾಂಸ ಮಾಡಿ ಮೂಲ್ಕಿ ವ್ಯಾಪ್ತಿಯ ಹಲವು ಕಡೆಗಳಿಗೆ ಮಾಂಸವನ್ನು ವ್ಯವಸ್ಥಿತವಾಗಿ ಪೂರೈಕೆ ಮಾಡಲಾಗುತ್ತಿತ್ತು. ಈ ಬಗ್ಗೆ ಸ್ಥಳೀಯರಿಗೆ ಮಾಹಿತಿ ಇದ್ದರೂ, ಪೊಲೀಸ್ ದೂರು ನೀಡಿರಲಿಲ್ಲ.

ದಾಳಿ ನಡೆಸಿದ ವೇಳೆ, ಆರೋಪಿಯ ಮನೆಯ ಒಳಗೇ ಕಸಾಯಿಖಾನೆ ನಡೆಸುತ್ತಿದ್ದುದು ಪತ್ತೆಯಾಗಿದೆ. ಹೊರಗಡೆ ಇದ್ದ ಹಟ್ಟಿಯಲ್ಲಿ ಎಂಟು ಗೋವುಗಳಿದ್ದು ಅವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಮನೆಯ ಒಳಗಡೆಯೂ ಮಾಂಸ ಮತ್ತು ಮಾಂಸ ಮಾಡಲು ಬಳಸಿದ್ದ ಪರಿಕರಗಳನ್ನೂ ವಶಕ್ಕೆ ಪಡೆದಿದ್ದಾರೆ. ಒಟ್ಟು ಒಂದು ಕ್ವಿಂಟಾಲ್ನಷ್ಟು ಗೋಮಾಂಸ ಹಾಗೂ ನಾಲ್ಕು ಆರೋಪಿಗಳನ್ನು ಮೂಲ್ಕಿ ಮತ್ತು ಕಾರ್ಕಳ ಪೋಲೀಸರು ವಶಕ್ಕೆ ಪಡೆದಿದ್ದಾರೆ.

ಮಹಮ್ಮದ್ ಹಸನಬ್ಬ, ರಫೀಕ್, ಇದಿನಬ್ಬ ಹಾಗೂ ಇಬ್ರಾಹಿಂ ಬಂಧಿತರು. ಈ ಪೈಕಿ ಇಬ್ರಾಹಿಂ ಕಸಾಯಿಖಾನೆ ರೂವಾರಿಯಾಗಿದ್ದು ಆತನ ಮನೆಯಲ್ಲೇ ಮಾಂಸ ಮಾಡಿ ರವಾನೆ ಮಾಡಲಾಗುತ್ತಿತ್ತು ಎನ್ನಲಾಗಿದೆ.
Mangalore House converted into slaughter house flesh illegally being traded Bagarang Dal members raid house four arrested near Kinnigoli.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm