ಬ್ರೇಕಿಂಗ್ ನ್ಯೂಸ್
24-10-21 02:24 pm Headline Karnataka News Network ಕ್ರೈಂ
ಹಾವೇರಿ, ಅ.24 : ನಿಧಿ ಆಸೆಗಾಗಿ ವೈದ್ಯನೊಬ್ಬ ಪತ್ನಿಯನ್ನೇ ಕೊಲೆ ಮಾಡಿದ್ದ ಪ್ರಕರಣವನ್ನು 9 ತಿಂಗಳ ಬಳಿಕ ಹೊನ್ನಾಳಿ ಪೊಲೀಸರು ಭೇದಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ತಾಲೂಕಿನ ಬೆಳಗುತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯ ಚನ್ನೇಶಪ್ಪನಿಗೆ 18 ವರ್ಷಗಳ ಹಿಂದೆ ಹಾವೇರಿ ಜಿಲ್ಲೆ ಹಿರೇಕೆರೂರಿನ ಚಂದ್ರಪ್ಪ ಎಂಬುವರ ಮಗಳು ಶಿಲ್ಪಾ ಅವರನ್ನು ಮದುವೆ ಮಾಡಲಾಗಿತ್ತು. ಮದುವೆ ವೇಳೆ 700 ಗ್ರಾಂ ಬಂಗಾರ, 1 ಕೆ.ಜಿ. ಬೆಳ್ಳಿ, 7 ಲಕ್ಷ ನಗದು ವರದಕ್ಷಿಣೆ ಕೊಟ್ಟು ಮದುವೆ ಮಾಡಿದ್ದರು.

ವೃತ್ತಿಯಲ್ಲಿ ವೈದ್ಯನಾಗಿದ್ದರೂ ಚನ್ನೇಶಪ್ಪನಿಗೆ ವಾಮಾಚಾರ, ಮಾಟ, ಮಂತ್ರದಲ್ಲಿ ನಂಬಿಕೆ ಇತ್ತು. ಮನೆಗೆ ಪೂಜಾರಿಗಳನ್ನು ಕರೆಸಿ ಪೂಜೆ ಮಾಡಿಸುತ್ತಿದ್ದ. ನಿಧಿ ಆಸೆಗಾಗಿ ಕೆಲ ಪೂಜಾರಿಗಳ ಮಾತು ಕೇಳಿ, ಫೆ.11ರಂದು ಪತ್ನಿಗೆ ಹೈಡೋಸ್ ಚುಚ್ಚುಮದ್ದು ನೀಡಿ ಕೊಲೆ ಮಾಡಿದ್ದ. ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಆರೋಪ ಸಾಬೀತಾದ ಹಿನ್ನೆಲೆ ನ್ಯಾಮತಿ ಪೊಲೀಸರು ಆರೋಪಿಯನ್ನು ಬಂಧಿಸಿ ದಾವಣಗೆರೆ ಕಾರಾಗೃಹದಲ್ಲಿರಿಸಿ ಕಾನೂನು ಪ್ರಕ್ರಿಯೆ ಕೈಗೊಂಡಿದ್ದಾರೆ.
ಬಂಧಿತ ಆರೋಪಿ ವೈದ್ಯ ಡಾ.ಚನ್ನೇಶಪ್ಪ 38 ಎಕರೆ ಜಮೀನು ಹೊಂದಿದ್ದ. ಶ್ರೀಮಂತನಾಗಿದ್ದ ಆತ ಕುಡಿತ, ಕ್ಯಾಸಿನೋ, ಜೂಜಾಟದ ಚಟಕ್ಕೆ ಬಿದ್ದು ಹಣ ಕಳಕೊಂಡಿದ್ದ. ಪದೇ ಪದೆ ಪತ್ನಿ ಶಿಲ್ಪಾಗೆ ತವರು ಮನೆಯಿಂದ ಹಣ ತರುವಂತೆ ಪೀಡಿಸುತ್ತಿದ್ದ. ನಿಧಿ ಸಿಗುತ್ತದೆಂಬ ಆಸೆಯಲ್ಲಿ ರಾತ್ರೋರಾತ್ರಿ ತನ್ನ ಮನೆಯಲ್ಲೇ ಪೂಜೆ ಮಾಡಿಸುತ್ತಿದ್ದ. ಕೆಲ ಪೂಜಾರಿಗಳು ನಿಧಿಗಾಗಿ ಬಲಿ ಬೇಕಾಗಿರುವುದಾಗಿ ಹೇಳಿದ್ದರಿಂದ, ಪತ್ನಿ ಶಿಲ್ಪಾಳನ್ನೇ ಬಲಿ ನೀಡಿದ್ದಾನೆಂದು ಮೃತಳ ಪೋಷಕರು ಆರೋಪಿಸಿದ್ದಾರೆ.
Haveri Husband desires for Tressure and wealth kills his wife witchcraft suspected. Cops of arrested the accused husband after nine month of crime.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm