ಬ್ರೇಕಿಂಗ್ ನ್ಯೂಸ್
24-10-21 02:24 pm Headline Karnataka News Network ಕ್ರೈಂ
ಹಾವೇರಿ, ಅ.24 : ನಿಧಿ ಆಸೆಗಾಗಿ ವೈದ್ಯನೊಬ್ಬ ಪತ್ನಿಯನ್ನೇ ಕೊಲೆ ಮಾಡಿದ್ದ ಪ್ರಕರಣವನ್ನು 9 ತಿಂಗಳ ಬಳಿಕ ಹೊನ್ನಾಳಿ ಪೊಲೀಸರು ಭೇದಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ತಾಲೂಕಿನ ಬೆಳಗುತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯ ಚನ್ನೇಶಪ್ಪನಿಗೆ 18 ವರ್ಷಗಳ ಹಿಂದೆ ಹಾವೇರಿ ಜಿಲ್ಲೆ ಹಿರೇಕೆರೂರಿನ ಚಂದ್ರಪ್ಪ ಎಂಬುವರ ಮಗಳು ಶಿಲ್ಪಾ ಅವರನ್ನು ಮದುವೆ ಮಾಡಲಾಗಿತ್ತು. ಮದುವೆ ವೇಳೆ 700 ಗ್ರಾಂ ಬಂಗಾರ, 1 ಕೆ.ಜಿ. ಬೆಳ್ಳಿ, 7 ಲಕ್ಷ ನಗದು ವರದಕ್ಷಿಣೆ ಕೊಟ್ಟು ಮದುವೆ ಮಾಡಿದ್ದರು.

ವೃತ್ತಿಯಲ್ಲಿ ವೈದ್ಯನಾಗಿದ್ದರೂ ಚನ್ನೇಶಪ್ಪನಿಗೆ ವಾಮಾಚಾರ, ಮಾಟ, ಮಂತ್ರದಲ್ಲಿ ನಂಬಿಕೆ ಇತ್ತು. ಮನೆಗೆ ಪೂಜಾರಿಗಳನ್ನು ಕರೆಸಿ ಪೂಜೆ ಮಾಡಿಸುತ್ತಿದ್ದ. ನಿಧಿ ಆಸೆಗಾಗಿ ಕೆಲ ಪೂಜಾರಿಗಳ ಮಾತು ಕೇಳಿ, ಫೆ.11ರಂದು ಪತ್ನಿಗೆ ಹೈಡೋಸ್ ಚುಚ್ಚುಮದ್ದು ನೀಡಿ ಕೊಲೆ ಮಾಡಿದ್ದ. ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಆರೋಪ ಸಾಬೀತಾದ ಹಿನ್ನೆಲೆ ನ್ಯಾಮತಿ ಪೊಲೀಸರು ಆರೋಪಿಯನ್ನು ಬಂಧಿಸಿ ದಾವಣಗೆರೆ ಕಾರಾಗೃಹದಲ್ಲಿರಿಸಿ ಕಾನೂನು ಪ್ರಕ್ರಿಯೆ ಕೈಗೊಂಡಿದ್ದಾರೆ.
ಬಂಧಿತ ಆರೋಪಿ ವೈದ್ಯ ಡಾ.ಚನ್ನೇಶಪ್ಪ 38 ಎಕರೆ ಜಮೀನು ಹೊಂದಿದ್ದ. ಶ್ರೀಮಂತನಾಗಿದ್ದ ಆತ ಕುಡಿತ, ಕ್ಯಾಸಿನೋ, ಜೂಜಾಟದ ಚಟಕ್ಕೆ ಬಿದ್ದು ಹಣ ಕಳಕೊಂಡಿದ್ದ. ಪದೇ ಪದೆ ಪತ್ನಿ ಶಿಲ್ಪಾಗೆ ತವರು ಮನೆಯಿಂದ ಹಣ ತರುವಂತೆ ಪೀಡಿಸುತ್ತಿದ್ದ. ನಿಧಿ ಸಿಗುತ್ತದೆಂಬ ಆಸೆಯಲ್ಲಿ ರಾತ್ರೋರಾತ್ರಿ ತನ್ನ ಮನೆಯಲ್ಲೇ ಪೂಜೆ ಮಾಡಿಸುತ್ತಿದ್ದ. ಕೆಲ ಪೂಜಾರಿಗಳು ನಿಧಿಗಾಗಿ ಬಲಿ ಬೇಕಾಗಿರುವುದಾಗಿ ಹೇಳಿದ್ದರಿಂದ, ಪತ್ನಿ ಶಿಲ್ಪಾಳನ್ನೇ ಬಲಿ ನೀಡಿದ್ದಾನೆಂದು ಮೃತಳ ಪೋಷಕರು ಆರೋಪಿಸಿದ್ದಾರೆ.
Haveri Husband desires for Tressure and wealth kills his wife witchcraft suspected. Cops of arrested the accused husband after nine month of crime.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am