ಬ್ರೇಕಿಂಗ್ ನ್ಯೂಸ್
25-10-21 11:27 am Bengaluru correspondent ಕ್ರೈಂ
ಬೆಂಗಳೂರು, ಅ.25: ಐಸಿಸ್ ಉಗ್ರರ ಸಂಪರ್ಕದ ಆರೋಪದಲ್ಲಿ ಎನ್ಐಎ ಅಧಿಕಾರಿಗಳು ವೃತ್ತಿಯಲ್ಲಿ ಡೆಂಟಿಸ್ಟ್ ಆಗಿರುವ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಗುರಪ್ಪನಪಾಳ್ಯದ ಬಿಸ್ಮಿಲ್ಲಾ ಕಾಲನಿ ನಿವಾಸಿ ಮಹಮೂದ್ ತಾಕಿರ್ (33) ಬಂಧಿತ ಆರೋಪಿ.
2013-14ರಲ್ಲಿ ಆರು ಮಂದಿ ಯುವಕರನ್ನು ಬ್ರೇನ್ ವಾಷ್ ಮಾಡಿ ಸಿರಿಯಾಕ್ಕೆ ಕಳಿಸಿ, ಐಸಿಸ್ ಸಂಘಟನೆಗೆ ಸೇರ್ಪಡೆ ಮಾಡಿರುವ ಪ್ರಕರಣದಲ್ಲಿ ಮಹಮೂದ್ ತಾಕಿರ್ ಆರೋಪಿಯಾಗಿದ್ದಾನೆ. ಮಹಮೂದ್ ಸೇರಿದಂತೆ ನಾಲ್ಕು ಮಂದಿಯ ವಿರುದ್ಧ 2020ರ ಸೆ.19ರಂದು ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಝುಹೈಬ್ ಹಮೀದ್ ಅಲಿಯಾಸ್ ಶಕೀಲ್ ಮುನ್ನ, ಶಿಹಾಬ್ ಮತ್ತು ಇರ್ಫಾನ್ ನಾಸಿರ್ ಎಂಬವರನ್ನೂ ಆರೋಪಿಗಳೆಂದು ಹೆಸರಿಸಲಾಗಿತ್ತು. ಝುಹೈಬ್ ಹಮೀದ್ ತಿಲಕ್ ನಗರ ನಿವಾಸಿಯಾಗಿದ್ದು, ಕಂಪ್ಯೂಟರ್ ಎಪ್ಲಿಕೇಶನ್ ಸ್ಪೆಷಲಿಸ್ಟ್ ಆಗಿದ್ದ. ಫ್ರೇಸರ್ ಟೌನ್ ನಿವಾಸಿಯಾಗಿದ್ದ ಇರ್ಫಾನ್ ನಾಸಿರ್ ಅಕ್ಕಿ ವ್ಯಾಪಾರಿಯಾಗಿದ್ದ. ಶಿಹಾಬ್ ಗುರಪ್ಪನಪಾಳ್ಯ ನಿವಾಸಿಯಾಗಿದ್ದ.
ಅಹ್ಮದ್ ಅಬ್ದುಲ್ ಖಾದರ್ ಮತ್ತು ಇರ್ಫಾನ್ ನಾಸಿರ್ ಎಂಬವರನ್ನು ಎನ್ಐಎ ಅಧಿಕಾರಿಗಳು ಈ ಹಿಂದೆಯೇ ಬಂಧಿಸಿದ್ದರು. ಪ್ರಕರಣದಲ್ಲಿ ಮಹಮ್ಮೂದ್ ತಾಕಿರ್ ಮೂರನೇ ಆರೋಪಿಯಾಗಿದ್ದ ಬಂಧಿಸಲ್ಪಟ್ಟಿದ್ದಾನೆ. ಮಹಮ್ಮೂದ್ ತಾಕಿರ್ ಮತ್ತು ಇತರರು ಸೇರಿಕೊಂಡು ಖುರಾನ್ ಸರ್ಕಲ್ ಎಂಬ ವಾಟ್ಸಪ್ ಗ್ರೂಪ್ ರಚಿಸಿಕೊಂಡು ಯುವಕರನ್ನು ಪ್ರಚೋದಿಸುತ್ತಿದ್ದರು. ಐಸಿಸ್ ಬಗ್ಗೆ ಪ್ರಚೋದಿಸಿ, ಸಂಘಟನೆಗೆ ಸೇರುವಂತೆ ಮಾಡುತ್ತಿದ್ದರು. 2013ರಲ್ಲಿ ಇದೇ ರೀತಿ ಅಕ್ರಮವಾಗಿ ಬೆಂಗಳೂರಿನ ಆರು ಮಂದಿ ಯುವಕರನ್ನು ಸಿರಿಯಾಕ್ಕೆ ಕಳಿಸಿದ್ದರು. ಅದೇ ಸಂದರ್ಭದಲ್ಲಿ ತಾಕಿರ್ ಮತ್ತು ಇನ್ನಿತರ ಸಹವರ್ತಿಗಳು ಸಿರಿಯಾಕ್ಕೆ ಭೇಟಿ ನೀಡಿದ್ದು, ಭಾರತೀಯ ಮುಸ್ಲಿಮರು ಐಸಿಸ್ ಉಗ್ರರ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುವುದಾಗಿ ವಾಗ್ದಾನ ನೀಡಿ ಬಂದಿದ್ದರು.
ವರ್ಷದ ಹಿಂದೆ ಬೆಂಗಳೂರಿನಲ್ಲಿ ಕಣ್ಣಿನ ವೈದ್ಯ ಅಬ್ದುರ್ ರಹಿಮಾನ್ ಮತ್ತು ಆತನ ಸಹವರ್ತಿಗಳನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಅವರನ್ನು ವಿಚಾರಣೆ ನಡೆಸಿದಾಗ, ಮಹಮೂದ್ ತಾಕಿರ್ ಮತ್ತು ಇತರರ ಬಗ್ಗೆ ಸುಳಿವು ದೊರೆತಿತ್ತು. ಅಬ್ದುರ್ ರಹಿಮಾನ್ ಕೂಡ 2013-14ರಲ್ಲಿ ಮಹಮೂದ್ ಮತ್ತು ಮುನ್ನ ಎಂಬವರ ನೆರವಿನಲ್ಲಿ ಸಿರಿಯಾಕ್ಕೆ ಹೋಗಿ ಬಂದಿದ್ದಾಗಿ ತಿಳಿಸಿದ್ದ. ಇದರ ಆಧಾರದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ಮುಂದುವರಿಸಿದ್ದರು.
The National Investigation Agency (NIA) has arrested Muhammad Tauqir Mahmood, an accused in NIA Case RC-33/2020/NIA/DLI. NIA officials said on Sunday that Mahmood, 33, is a resident of Bengaluru. Saturday's arrest is a follow up to a case that NIA had registered under section 120B, 125 of IPC & Section 17, 18 & 18B of UA(P) Act against Muhammad Tauqir Mahmood, Zuhab Hameed alias Shakeel Manna
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 11:56 am
HK News Staffer
Yakshagana, Govinda Bhat Death: ತೆಂಕುತಿಟ್ಟು ಯ...
20-03-26 11:26 pm
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm