ಬ್ರೇಕಿಂಗ್ ನ್ಯೂಸ್
31-10-21 12:57 pm Mangaluru Correspondent ಕ್ರೈಂ
ಮಂಗಳೂರು, ಅ.31: ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಎರಡು ತಂಡಗಳು ಬೀದಿ ಕಾಳಗ ನಡೆಸಿದ್ದು ಅಲ್ಲಿ ನಿಲ್ಲಿಸಿದ್ದ ಐದಾರು ವಾಹನಗಳನ್ನು ಜಖಂಗೊಳಿಸಿದ್ದಲ್ಲದೆ ಕಾನೂನು ಕ್ರಮಕ್ಕೆ ಮುಂದಾದ ಪೊಲೀಸರ ಮೇಲೂ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಬಳ್ಳಾಲ್ ಬಾಗ್ ಫ್ರೆಂಡ್ಸ್ ಮತ್ತು ಬಿರುವೆರ್ ಕುಡ್ಲ ಸಂಘಟನೆಗಳ ಕಾರ್ಯಕರ್ತರು ಹೊಡೆದಾಟ ನಡೆಸಿದ್ದಾರೆ ಎನ್ನಲಾಗುತ್ತಿದೆ. ಮೊದಲಿಗೆ, ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಗಲಾಟೆ ಶುರುವಾಗಿದ್ದು ಗುರಾಯಿಸಿದ ವಿಚಾರದಲ್ಲಿ ಮಾತಿಗೆ ಮಾತು ಬೆಳೆದಿತ್ತು. ಆನಂತರ, ಅಲ್ಲಿಂದ ಮೂರ್ನಾಲ್ಕು ಯುವಕರು ಸೇರಿ ಬಳ್ಳಾಲ್ ಬಾಗ್ ವರೆಗೆ ಬೆನ್ನಟ್ಟಿ ಬಂದಿದ್ದು ಅಲ್ಲಿ ಬೀದಿ ಕಾಳಗ ನಡೆದಿದೆ. ರಾತ್ರಿ 11 ಗಂಟೆ ಸುಮಾರಿಗೆ ಬಳ್ಳಾಲ್ ಬಾಗ್ ಸಾಯಿ ನೆಕ್ಸ್ಟ್ ಸೆಂಟರ್ ಮುಂಭಾಗದಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಪುಡಿಗಟ್ಟಿದ್ದಾರೆ.





ಆರು ದ್ವಿಚಕ್ರ ವಾಹನಗಳು ಮತ್ತು ಒಂದು ಕಾರಿನ ಮೇಲೆ ಹಾನಿ ಮಾಡಿದ್ದು ಬ್ಯಾಟ್, ವಿಕೆಟ್, ದೊಣ್ಣೆಯಿಂದ ಹೊಡೆದು, ಕಲ್ಲು ಎತ್ತಿ ಹಾಕಿ ಪುಡಿಗಟ್ಟಿದ್ದಾರೆ. ಎರಡೂ ತಂಡಗಳ ಯುವಕರು ಪರಸ್ಪರ ಹೊಡೆದಾಟ ನಡೆಸಿದ್ದಾರೆ. ಈ ವೇಳೆ ಮಾಹಿತಿ ತಿಳಿದ ಬರ್ಕೆ ಪೊಲೀಸರು ಬಂದಿದ್ದು ಪರಿಚಿತ ಯುವಕರೇ ಆಗಿದ್ದರಿಂದ ಸಮಾಧಾನ ಪಡಿಸಿದ್ದಾರೆ. ಆದರೆ, ಪೊಲೀಸರ ಮಾತು ಕೇಳದ ಅವರ ಮೇಲೇ ಕೈಮಾಡಿದ್ದಾರೆ.
ಬರ್ಕೆ ಮಹಿಳಾ ಎಸ್ಐ ಶೋಭಾ ಮೇಲೆ ಕೈಮಾಡಿದ್ದು ಅವರ ಕೈಯಲ್ಲಿದ್ದ ವಾಕಿ ಟಾಕಿಯನ್ನು ನೆಲಕ್ಕೆ ಬಿಸಾಡಿದ್ದಾರೆ. ಇತರ ಪೊಲೀಸರ ಮೇಲೂ ಕೈಮಾಡಿದ್ದಾರೆ. ಎರಡು ತಂಡಗಳ ವೈಯಕ್ತಿಕ ದ್ವೇಷದಲ್ಲಿ ಪೊಲೀಸರ ಮೇಲೆ ಕೈಮಾಡಿದ್ದು ಆನಂತರ ಹೆಚ್ಚಿನ ಪೊಲೀಸರು ಬಂದು ಆರು ಮಂದಿಯನ್ನು ಸ್ಥಳದಿಂದ ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ಎಸ್ಐ ಮೇಲೆ ಕೈಮಾಡಿದ ಧೀರಜ್ ಶೆಟ್ಟಿ, ರಕ್ಷಿತ್, ರೋಹಿತ್ ಶೆಟ್ಟಿ, ಹರ್ಷಿತ್, ಕೀರ್ತಿರಾಜ್, ವಿವೇಕ್, ರಾಹುಲ್ ಎಂಬವರನ್ನು ಬಂಧಿಸಿದ್ದಾರೆ. ಇತರರು ಅಲ್ಲಿಂದ ಓಡಿ ತಪ್ಪಿಸಿದ್ದಾರೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಎಸ್ಐ ಶೋಭಾ ದೂರು ನೀಡಿದ್ದು ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ವಿವಿಧ ಸೆಕ್ಷನ್ ಗಳಡಿ ಕೇಸು ದಾಖಲಿಸಿದ್ದಾರೆ.
Seven youths have been arrested after two groups clash at ballalbagh late night on Saturday October 30. It is said that late on Saturday night, two groups of youth engaged in fight as a result of which, one Seven vehicles were damaged. Police commissioner N Shashi Kumar informed that police have up take suo moto cognizance of the incident and arrested seven persons.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm