ಬ್ರೇಕಿಂಗ್ ನ್ಯೂಸ್
01-11-21 02:28 pm Mangaluru Correspondent ಕ್ರೈಂ
ಮಂಗಳೂರು, ನ.1: ಎರಡು ವರ್ಷದ ಹೆಣ್ಣು ಮಗುವನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ನೀರಿನ ಹೊಂಡಕ್ಕೆ ಎಸೆದು ಹೋದ ದುಷ್ಕೃತ್ಯ ನಗರದಲ್ಲಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಬಿಹಾರ ಮೂಲದ ಚಂದನ್(33) ಎಂದು ಗುರುತಿಸಲಾಗಿದೆ. ಬಂದರಿನಲ್ಲಿ ಫಿಶ್ ಮಿಲ್ ಒಂದರಲ್ಲಿ ಬಿಹಾರ, ಉತ್ತರ ಪ್ರದೇಶ ಮೂಲದ 40ಕ್ಕೂ ಹೆಚ್ಚು ಕುಟುಂಬಗಳು ಕೆಲಸಕ್ಕಿದ್ದು, ಹೊಯ್ಗೆಬಜಾರ್ ನಲ್ಲಿ ಗುಡಿಸಲು ಕಟ್ಟಿಕೊಂಡು ವಾಸವಿದ್ದಾರೆ. ಅಲ್ಲಿನ ಕುಟುಂಬಗಳ ಮಕ್ಕಳು ಒಂದೇ ಕಡೆ ಆಟವಾಡಿಕೊಂಡು ಇದ್ದರು. ಈ ವೇಳೆ, ನಿನ್ನೆ ಸಂಜೆ ಹೆಣ್ಣು ಮಗುವೊಂದನ್ನು ಅಪಹರಿಸಿದ್ದ ಬಿಹಾರ ಮೂಲದ ಕಾರ್ಮಿಕ ಯುವಕ, ಲೈಂಗಿಕ ದೌರ್ಜನ್ಯಕ್ಕೆ ಬಳಸಿದ್ದಾನೆ.
ಆನಂತರ, ಮಗುವನ್ನು ಉಪ್ಪು ನೀರು ಶೇಖರಿಸುವ ಹೊಂಡಕ್ಕೆ ಎಸೆದಿದ್ದ. ಸಂಜೆ ವೇಳೆಗೆ ಘಟನೆ ನಡೆದಿದ್ದು, ಹೆತ್ತವರು ಬಂದು ನೋಡಿದಾಗ ಮಗು ಇರಲಿಲ್ಲ. ಬಳಿಕ ಸಾಕಷ್ಟು ಹುಡುಕಾಡಿದ್ದು ಎರಡು ಗಂಟೆಯ ಬಳಿಕ ಮಗು ನೀರಿನಲ್ಲಿ ಪತ್ತೆಯಾಗಿದೆ. ನೀರು ಕಡಿಮೆ ಇದ್ದುದರಿಂದ ಮೃತ ಆಗಿರಲಿಲ್ಲ. ಆದರೆ ಪ್ರಜ್ಞೆ ಕಳಕೊಂಡ ಸ್ಥಿತಿಯಲ್ಲಿತ್ತು. ರಾತ್ರಿಯೇ ಮಗುವನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇಂದು ಬೆಳಗ್ಗಿನ ಹೊತ್ತಿಗೆ ಚಿಕಿತ್ಸೆಗೆ ಸ್ಪಂದಿಸಿದ್ದು, ಹುಷಾರಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಮಗುವನ್ನು ಮೊದಲಿಗೆ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಆಗೋದಿಲ್ಲ ಎಂದು ಹೇಳಿದ್ದಕ್ಕೆ ವೆನ್ಲಾಕ್ ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ದಾಖಲು ಮಾಡಲಾಗಿತ್ತು. ಅಲ್ಲಿ ಮಗುವಿಗೆ ದೈಹಿಕ ಹಲ್ಲೆ ಮತ್ತು ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ವೈದ್ಯರು ತಿಳಿಸಿದ್ದು, ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ. ನಿನ್ನೆ ಸಂಜೆಯೇ ಬಿಹಾರ ಮೂಲದ ಇತರ ಕಾರ್ಮಿಕರು ಸೇರಿ ಆರೋಪಿಯನ್ನು ಹಿಡಿದಿದ್ದು, ಆತನ ತಲೆ ಬೋಳಿಸಿ ಹಲ್ಲೆ ನಡೆಸಿದ್ದರು.
A shocking incident, a two-year-old was sexually harassed at Hoigebazar under city South police station limits. The incident came to light on Monday November 1. Chandan, hailing from Bihar stands arrested regarding the case. The victim and parents hails from Bihar. It is said that nearly 70 to 80 people with their families from Bihar are working for a company dealing with fish cutting and salting process. There are a few children between the age group of 6 months to 7 years who are being taken care of in a room.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 11:56 am
HK News Staffer
Yakshagana, Govinda Bhat Death: ತೆಂಕುತಿಟ್ಟು ಯ...
20-03-26 11:26 pm
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm