ಬ್ರೇಕಿಂಗ್ ನ್ಯೂಸ್
01-11-21 02:28 pm Mangaluru Correspondent ಕ್ರೈಂ
ಮಂಗಳೂರು, ನ.1: ಎರಡು ವರ್ಷದ ಹೆಣ್ಣು ಮಗುವನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ನೀರಿನ ಹೊಂಡಕ್ಕೆ ಎಸೆದು ಹೋದ ದುಷ್ಕೃತ್ಯ ನಗರದಲ್ಲಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಬಿಹಾರ ಮೂಲದ ಚಂದನ್(33) ಎಂದು ಗುರುತಿಸಲಾಗಿದೆ. ಬಂದರಿನಲ್ಲಿ ಫಿಶ್ ಮಿಲ್ ಒಂದರಲ್ಲಿ ಬಿಹಾರ, ಉತ್ತರ ಪ್ರದೇಶ ಮೂಲದ 40ಕ್ಕೂ ಹೆಚ್ಚು ಕುಟುಂಬಗಳು ಕೆಲಸಕ್ಕಿದ್ದು, ಹೊಯ್ಗೆಬಜಾರ್ ನಲ್ಲಿ ಗುಡಿಸಲು ಕಟ್ಟಿಕೊಂಡು ವಾಸವಿದ್ದಾರೆ. ಅಲ್ಲಿನ ಕುಟುಂಬಗಳ ಮಕ್ಕಳು ಒಂದೇ ಕಡೆ ಆಟವಾಡಿಕೊಂಡು ಇದ್ದರು. ಈ ವೇಳೆ, ನಿನ್ನೆ ಸಂಜೆ ಹೆಣ್ಣು ಮಗುವೊಂದನ್ನು ಅಪಹರಿಸಿದ್ದ ಬಿಹಾರ ಮೂಲದ ಕಾರ್ಮಿಕ ಯುವಕ, ಲೈಂಗಿಕ ದೌರ್ಜನ್ಯಕ್ಕೆ ಬಳಸಿದ್ದಾನೆ.
ಆನಂತರ, ಮಗುವನ್ನು ಉಪ್ಪು ನೀರು ಶೇಖರಿಸುವ ಹೊಂಡಕ್ಕೆ ಎಸೆದಿದ್ದ. ಸಂಜೆ ವೇಳೆಗೆ ಘಟನೆ ನಡೆದಿದ್ದು, ಹೆತ್ತವರು ಬಂದು ನೋಡಿದಾಗ ಮಗು ಇರಲಿಲ್ಲ. ಬಳಿಕ ಸಾಕಷ್ಟು ಹುಡುಕಾಡಿದ್ದು ಎರಡು ಗಂಟೆಯ ಬಳಿಕ ಮಗು ನೀರಿನಲ್ಲಿ ಪತ್ತೆಯಾಗಿದೆ. ನೀರು ಕಡಿಮೆ ಇದ್ದುದರಿಂದ ಮೃತ ಆಗಿರಲಿಲ್ಲ. ಆದರೆ ಪ್ರಜ್ಞೆ ಕಳಕೊಂಡ ಸ್ಥಿತಿಯಲ್ಲಿತ್ತು. ರಾತ್ರಿಯೇ ಮಗುವನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇಂದು ಬೆಳಗ್ಗಿನ ಹೊತ್ತಿಗೆ ಚಿಕಿತ್ಸೆಗೆ ಸ್ಪಂದಿಸಿದ್ದು, ಹುಷಾರಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಮಗುವನ್ನು ಮೊದಲಿಗೆ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಆಗೋದಿಲ್ಲ ಎಂದು ಹೇಳಿದ್ದಕ್ಕೆ ವೆನ್ಲಾಕ್ ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ದಾಖಲು ಮಾಡಲಾಗಿತ್ತು. ಅಲ್ಲಿ ಮಗುವಿಗೆ ದೈಹಿಕ ಹಲ್ಲೆ ಮತ್ತು ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ವೈದ್ಯರು ತಿಳಿಸಿದ್ದು, ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ. ನಿನ್ನೆ ಸಂಜೆಯೇ ಬಿಹಾರ ಮೂಲದ ಇತರ ಕಾರ್ಮಿಕರು ಸೇರಿ ಆರೋಪಿಯನ್ನು ಹಿಡಿದಿದ್ದು, ಆತನ ತಲೆ ಬೋಳಿಸಿ ಹಲ್ಲೆ ನಡೆಸಿದ್ದರು.
A shocking incident, a two-year-old was sexually harassed at Hoigebazar under city South police station limits. The incident came to light on Monday November 1. Chandan, hailing from Bihar stands arrested regarding the case. The victim and parents hails from Bihar. It is said that nearly 70 to 80 people with their families from Bihar are working for a company dealing with fish cutting and salting process. There are a few children between the age group of 6 months to 7 years who are being taken care of in a room.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm