ಬ್ರೇಕಿಂಗ್ ನ್ಯೂಸ್
04-11-21 09:42 am Mangaluru Correspondent ಕ್ರೈಂ
ಮಂಗಳೂರು, ನ.4: ಕ್ಷುಲ್ಲಕ ವಿಚಾರದಲ್ಲಿ ಜಗಳ ನಡೆದು ತಂದೆ, ಮಗ ಸೇರಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ನಗರದ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ.
ರಥಬೀದಿಯ ಮಹಮ್ಮಾಯಿ ದೇವಸ್ಥಾನದ ಬಳಿಯ ವೀರ ವೆಂಕಟೇಶ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದೆ. ಅಪಾರ್ಟ್ಮೆಂಟ್ ನಿವಾಸಿ, ವಿಕ್ರಮ್ ಟ್ರಾವೆಲ್ಸ್ ಕಂಪನಿಯ ಟೂರ್ ಮ್ಯಾನೇಜರ್ ಆಗಿದ್ದ ವಿನಾಯಕ ಕಾಮತ್ (46) ಕೊಲೆಯಾದವರು.
ಅದೇ ಅಪಾರ್ಟ್ಮೆಂಟ್ ನಿವಾಸಿಗಳಾದ ಕೃಷ್ಣಾನಂದ ಕಿಣಿ (68) ಮತ್ತು ಅವರ ಮಗ ಅವಿನಾಶ್ (32) ಸೇರಿಕೊಂಡು ನಿನ್ನೆ ರಾತ್ರಿ ಚೂರಿಯಿಂದ ತಿವಿದು ಕೊಲೆ ಮಾಡಿದ್ದಾರೆ. 4-5 ದಿನಗಳ ಹಿಂದೆ, ಅಪಾರ್ಟ್ಮೆಂಟ್ ಮುಂದುಗಡೆ ಮಹಾನಗರ ಪಾಲಿಕೆ ವತಿಯಿಂದ ಕಾಂಕ್ರೀಟ್ ಹಾಕಲಾಗಿತ್ತು. ಅದರ ಮೇಲಿಂದ ಕಾರು ಒಯ್ಯುವ ವಿಚಾರದಲ್ಲಿ ಜಗಳ ನಡೆದಿದ್ದು ಇವರೊಳಗೆ ಮಾತಿಗೆ ಮಾತಾಗಿ ಜಗಳ ಆಗಿತ್ತು. ಈ ಹಿಂದೆಯೂ ಕೃಷ್ಣಾನಂದ ಕಿಣಿ ಹಳೆ ದ್ವೇಷ ಇಟ್ಟುಕೊಂಡಿದ್ದು ವಿನಾಯಕ ಕಾಮತ್ ವಿರುದ್ಧ ಜಗಳವಾಡುತ್ತಿದ್ದರು.
ನಿನ್ನೆ ರಾತ್ರಿ ಅಪಾರ್ಟ್ಮೆಂಟ್ ನಿವಾಸಿಗಳು ಕೆಳಗಡೆ ದೀಪಾವಳಿ ಪ್ರಯುಕ್ತ ಪಟಾಕಿ ಸಿಡಿಸುತ್ತಿದ್ದು ವಿನಾಯಕ ಕಾಮತ್ ಕೂಡ ಅಲ್ಲಿಗೆ ತೆರಳಿದ್ದರು. ಈ ವೇಳೆ, ಇಬ್ಬರ ಮಧ್ಯೆ ಮತ್ತೆ ಜಗಳ ತೆಗೆದಿದ್ದು ಮಾತಿಗೆ ಮಾತಾಗಿತ್ತು. ಇತರೇ ನಿವಾಸಿಗಳು ನೋಡುತ್ತಿದ್ದಂತೆಯೇ ವಿನಾಯಕ ಕಾಮತ್ ಮೇಲೆ, ಕೃಷ್ಣಾನಂದ ಕಿಣಿ ಮತ್ತು ಅವರ ಮಗ ಅವಿನಾಶ್ ಕಾಮತ್ ಚೂರಿಯಿಂದ ದಾಳಿ ನಡೆಸಿದ್ದಾರೆ. ಇದನ್ನು ವಿನಾಯಕ ಕಾಮತ್ ಮತ್ತು ಪತ್ನಿ ಬಂದು ನೋಡಿದ್ದು ಕುಸಿದು ಬಿದ್ದ ವಿನಾಯಕ ಅವರನ್ನು ಕೂಡಲೇ ಇತರ ನಿವಾಸಿಗಳ ಸಹಾಯ ಪಡೆದು ಆಸ್ಪತ್ರೆಗೆ ದಾಖಲು ಮಾಡಿದ್ದರು. ರಾತ್ರಿ ಸುಮಾರು 1.40 ಕ್ಕೆ ವಿನಾಯಕ ಕಾಮತ್ ಚಿಕಿತ್ಸೆ ಫಲಕಾರಿಯಾಗದೆ ಸಾವು ಕಂಡಿದ್ದಾರೆ.
ಈ ಬಗ್ಗೆ ವಿನಾಯಕ ಕಾಮತ್ ಪತ್ನಿ ಬಂದರು ಠಾಣೆಯಲ್ಲಿ ದೂರು ನೀಡಿದ್ದು ಕೊಲೆ ಪ್ರಕರಣ ದಾಖಲಾಗಿದೆ. ಆರೋಪಿಗಳಾದ ತಂದೆ - ಮಗನನ್ನು ಪೊಲೀಸರು ಬಂಧಿಸಿದ್ದಾರೆ.
Amani Kamath (35), resident of Veera Venkatesh Apartment on Mahamayi temple road, in the city, has alleged that her husband Vinayak Kamath, was murdered by Krishnananda Kini and his son Avinash Kini, residing in the same complex. Amani stated in her complaint made to the city (north) police station that she has been a resident of flat No 108 of the said complex for the last five years. Her husband, son and mother-in-law are the other residents of this flat. She does tailoring jobs and her husband was a tour manager of Vikram Travels here.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am