ಬ್ರೇಕಿಂಗ್ ನ್ಯೂಸ್
04-11-21 07:36 pm Headline Karnataka News Desk ಕ್ರೈಂ
ಮೈಸೂರು, ನ.4: ಇಡೀ ದೇಶ ದೀಪಾವಳಿ ಸಂಭ್ರಮದಲ್ಲಿದ್ದರೆ, ಆ ಮಗು ಕೂಡ ಹಬ್ಬಕ್ಕೆ ಪಟಾಕಿ ತರೋದಿಕ್ಕೆ ಹೋಗಿತ್ತು. ಆದರೆ ಪಟಾಕಿ ತರಲು ಹೊರಟಿದ್ದ ಮಗು ಮನೆಗೆ ಬಂದಿರಲಿಲ್ಲ. ಪಟಾಕಿಗೆಂದು ತೆರಳಿದ್ದ ಬಾಲಕನನ್ನು ಕಿಡ್ನಾಪ್ ಮಾಡಿದ್ದ ದುಷ್ಕರ್ಮಿಗಳು ಸಿನಿಮಾ ರೀತಿಯಲ್ಲಿ ಹಣಕ್ಕೆ ಬೇಡಿಕೆಯಿಟ್ಟು ಕೊನೆಗೆ ಕೊಂದು ಬಿಸಾಡಿದ್ದಾರೆ.
ದೀಪಾವಳಿ ಗುಂಗಿನಲ್ಲಿದ್ದ ಹುಣಸೂರು ತಾಲೂಕಿನ ಹನಗೋಡಿನಲ್ಲಿ ದುರಂತವೇ ನಡೆದುಹೋಗಿದೆ. ಹನಗೋಡು ನಿವಾಸಿ, ತರಕಾರಿ ಉದ್ಯಮಿ ನಾಗರಾಜ್ ಅವರ ಹತ್ತು ವರ್ಷದ ಪುತ್ರ ಕಾರ್ತಿಕ್ ದುಷ್ಕರ್ಮಿಗಳ ಕೈಗೆ ಸಿಕ್ಕಿ ದುರಂತ ಸಾವು ಕಂಡಿದ್ದಾನೆ. ನಿನ್ನೆ ರಾತ್ರಿ 7.30ರ ಸುಮಾರಿಗೆ ಪೋಷಕರಿಂದ 10-15 ರೂ. ಪಡೆದುಕೊಂಡು ಪಟಾಕಿ ತರಲು ಹೊರಟಿದ್ದ. ಈ ವೇಳೆ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿದ್ದರು.



ರಾತ್ರಿಯೇ ಕಾರ್ತಿಕ್ ತಂದೆ ನಾಗರಾಜ್ಗೆ ಕರೆ ಮಾಡಿದ್ದ ಕಿಡ್ನಾಪರ್ಗಳು, ನಿನ್ನ ಮಗ ನಮ್ಮೊಟ್ಟಿಗೆ ಇದ್ದಾನೆ. ಮಗ ಜೀವಂತವಾಗಿ ಬೇಕಿದ್ದರೆ 4 ಲಕ್ಷ ರೂ. ತೆಗೆದುಕೊಂಡು ಹುಣಸೂರಿಗೆ ಬಾ ಎಂದು ಬೆದರಿಕೆ ಹಾಕಿದ್ದಾರೆ. ಆದರೆ ಮತ್ತೆ ಕರೆ ಮಾಡಿದಾಗ ಕಿಡ್ನಾಪರ್ ಫೋನ್ ಸ್ವಿಚ್ ಆಫ್ ಆಗಿತ್ತು. ಕೂಡಲೇ ಬಾಲಕನ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ಎಎಸ್ಪಿ ಶಿವಕುಮಾರ್ ಮತ್ತು ತಂಡ ರಾತ್ರಿಯೇ ಹುಣಸೂರಿಗೆ ತೆರಳಿ ತಲಾಷ್ ಶುರು ಮಾಡಿತ್ತು. ಮೂರು ತಂಡ ರಚಿಸಿ ತನಿಖೆ ಆರಂಭಿಸಿದ್ದರು. ಆದರೆ, ಇಂದು ಮಧ್ಯಾಹ್ನದ ಹೊತ್ತಿಗೆ ಆರೋಪಿ ಸಿಕ್ಕಿದ್ದು ಮಗು ಜೀವಂತ ಇರಲಿಲ್ಲ.
ಪಕ್ಕದ ಊರಿನ ನಿವಾಸಿಯೇ ಆರೋಪಿಯಾಗಿದ್ದು ಹನಗೋಡು ಹೋಬಳಿಯ ದಾಸನಪುರ ನಿವಾಸಿ ಜವರಯ್ಯ ಬಂಧಿತ. ಈತನ ಜೊತೆ ಐದಕ್ಕೂ ಹೆಚ್ಚು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಜವರಯ್ಯ ಹಣದಾಸೆಗಾಗಿ ಮಗುವನ್ನು ಕಿಡ್ನಾಪ್ ಮಾಡಿದ್ದಾನೆ ಎನ್ನಲಾಗುತ್ತಿದ್ದು, ಪೊಲೀಸರ ಭಯದಿಂದ ಕೊಲೆ ಮಾಡಿದ್ದಾನೆ ಎಂದು ಗೊತ್ತಾಗಿದೆ. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Kidnap for ransom 9 year boy murdered in Mysuru. Kidnappers who had demanded a ransom of Rs 4 lakh from his father. Later his body was found near Kunterikere in Hunsur on Thursday. He was found murdered and the body was thrown inside a bush.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm