ಬ್ರೇಕಿಂಗ್ ನ್ಯೂಸ್
04-11-21 07:36 pm Headline Karnataka News Desk ಕ್ರೈಂ
ಮೈಸೂರು, ನ.4: ಇಡೀ ದೇಶ ದೀಪಾವಳಿ ಸಂಭ್ರಮದಲ್ಲಿದ್ದರೆ, ಆ ಮಗು ಕೂಡ ಹಬ್ಬಕ್ಕೆ ಪಟಾಕಿ ತರೋದಿಕ್ಕೆ ಹೋಗಿತ್ತು. ಆದರೆ ಪಟಾಕಿ ತರಲು ಹೊರಟಿದ್ದ ಮಗು ಮನೆಗೆ ಬಂದಿರಲಿಲ್ಲ. ಪಟಾಕಿಗೆಂದು ತೆರಳಿದ್ದ ಬಾಲಕನನ್ನು ಕಿಡ್ನಾಪ್ ಮಾಡಿದ್ದ ದುಷ್ಕರ್ಮಿಗಳು ಸಿನಿಮಾ ರೀತಿಯಲ್ಲಿ ಹಣಕ್ಕೆ ಬೇಡಿಕೆಯಿಟ್ಟು ಕೊನೆಗೆ ಕೊಂದು ಬಿಸಾಡಿದ್ದಾರೆ.
ದೀಪಾವಳಿ ಗುಂಗಿನಲ್ಲಿದ್ದ ಹುಣಸೂರು ತಾಲೂಕಿನ ಹನಗೋಡಿನಲ್ಲಿ ದುರಂತವೇ ನಡೆದುಹೋಗಿದೆ. ಹನಗೋಡು ನಿವಾಸಿ, ತರಕಾರಿ ಉದ್ಯಮಿ ನಾಗರಾಜ್ ಅವರ ಹತ್ತು ವರ್ಷದ ಪುತ್ರ ಕಾರ್ತಿಕ್ ದುಷ್ಕರ್ಮಿಗಳ ಕೈಗೆ ಸಿಕ್ಕಿ ದುರಂತ ಸಾವು ಕಂಡಿದ್ದಾನೆ. ನಿನ್ನೆ ರಾತ್ರಿ 7.30ರ ಸುಮಾರಿಗೆ ಪೋಷಕರಿಂದ 10-15 ರೂ. ಪಡೆದುಕೊಂಡು ಪಟಾಕಿ ತರಲು ಹೊರಟಿದ್ದ. ಈ ವೇಳೆ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿದ್ದರು.



ರಾತ್ರಿಯೇ ಕಾರ್ತಿಕ್ ತಂದೆ ನಾಗರಾಜ್ಗೆ ಕರೆ ಮಾಡಿದ್ದ ಕಿಡ್ನಾಪರ್ಗಳು, ನಿನ್ನ ಮಗ ನಮ್ಮೊಟ್ಟಿಗೆ ಇದ್ದಾನೆ. ಮಗ ಜೀವಂತವಾಗಿ ಬೇಕಿದ್ದರೆ 4 ಲಕ್ಷ ರೂ. ತೆಗೆದುಕೊಂಡು ಹುಣಸೂರಿಗೆ ಬಾ ಎಂದು ಬೆದರಿಕೆ ಹಾಕಿದ್ದಾರೆ. ಆದರೆ ಮತ್ತೆ ಕರೆ ಮಾಡಿದಾಗ ಕಿಡ್ನಾಪರ್ ಫೋನ್ ಸ್ವಿಚ್ ಆಫ್ ಆಗಿತ್ತು. ಕೂಡಲೇ ಬಾಲಕನ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ಎಎಸ್ಪಿ ಶಿವಕುಮಾರ್ ಮತ್ತು ತಂಡ ರಾತ್ರಿಯೇ ಹುಣಸೂರಿಗೆ ತೆರಳಿ ತಲಾಷ್ ಶುರು ಮಾಡಿತ್ತು. ಮೂರು ತಂಡ ರಚಿಸಿ ತನಿಖೆ ಆರಂಭಿಸಿದ್ದರು. ಆದರೆ, ಇಂದು ಮಧ್ಯಾಹ್ನದ ಹೊತ್ತಿಗೆ ಆರೋಪಿ ಸಿಕ್ಕಿದ್ದು ಮಗು ಜೀವಂತ ಇರಲಿಲ್ಲ.
ಪಕ್ಕದ ಊರಿನ ನಿವಾಸಿಯೇ ಆರೋಪಿಯಾಗಿದ್ದು ಹನಗೋಡು ಹೋಬಳಿಯ ದಾಸನಪುರ ನಿವಾಸಿ ಜವರಯ್ಯ ಬಂಧಿತ. ಈತನ ಜೊತೆ ಐದಕ್ಕೂ ಹೆಚ್ಚು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಜವರಯ್ಯ ಹಣದಾಸೆಗಾಗಿ ಮಗುವನ್ನು ಕಿಡ್ನಾಪ್ ಮಾಡಿದ್ದಾನೆ ಎನ್ನಲಾಗುತ್ತಿದ್ದು, ಪೊಲೀಸರ ಭಯದಿಂದ ಕೊಲೆ ಮಾಡಿದ್ದಾನೆ ಎಂದು ಗೊತ್ತಾಗಿದೆ. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Kidnap for ransom 9 year boy murdered in Mysuru. Kidnappers who had demanded a ransom of Rs 4 lakh from his father. Later his body was found near Kunterikere in Hunsur on Thursday. He was found murdered and the body was thrown inside a bush.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm