ಬ್ರೇಕಿಂಗ್ ನ್ಯೂಸ್
07-11-21 10:40 am Mangaluru Correspondent ಕ್ರೈಂ
ಪುತ್ತೂರು, ನ.7: ಉಪ್ಪಿನಂಗಡಿ ಬಳಿಯ ಇಳಂತಿಲ ಗ್ರಾಮದ ಗುಡ್ಡದಲ್ಲಿ ಹ್ಯಾಂಡ್ ಗ್ರೆನೇಡ್ ಮಾದರಿಯ ಬಾಂಬ್ ಪತ್ತೆಯಾಗಿದ್ದು ಇದನ್ನು ಗಮನಿಸಿದ ನಿವೃತ್ತ ಸೈನಿಕರೊಬ್ಬರು ಪೊಲೀಸರ ಗಮನಕ್ಕೆ ತಂದಿದ್ದಾರೆ.
ಇಳಂತಿಲ ಗ್ರಾಮದ ನಿವಾಸಿ ಜಯಕುಮಾರ್ ನಿವೃತ್ತ ಯೋಧರಾಗಿದ್ದು ಶನಿವಾರ ಸಂಜೆ 6 ಗಂಟೆ ವೇಳೆಗೆ ಉಪ್ಪಿನಂಗಡಿಯಿಂದ ತನ್ನ ಮನೆಗೆ ನಡೆದುಕೊಂಡು ತೆರಳುತ್ತಿದ್ದಾಗ ಗುಡ್ಡದ ಇಳಿಜಾರಿನಲ್ಲಿ ಗ್ರೆನೇಡ್ ಮಾದರಿಯ ಸ್ಫೋಟಕ ವಸ್ತು ಕಂಡುಬಂದಿದೆ. ಅದರಲ್ಲಿ ಹಳದಿ ಬಣ್ಣದ ಪ್ಲಾಸ್ಟಿಕ್ ಕವರಿನಲ್ಲಿ ಒಂದು ಗ್ರೆನೇಡ್ ಇದ್ದು ಇತರ ನಾಲ್ಕು ಗ್ರೆನೇಡ್ ಗಳು ಪರಿಸರದಲ್ಲಿ ಹರಡಿಕೊಂಡ ರೀತಿ ಬಿದ್ದಿತ್ತು.
ಜಯಕುಮಾರ್ ಭಾರತೀಯ ಸೇನೆಯ ಭೂಸೇನಾ ರೆಜಿಮೆಂಟಿನಲ್ಲಿ ಎಸ್ ಸಿ ಓ ಆಗಿ ನಿವೃತ್ತಿ ಹೊಂದಿದ್ದು ಆ ವಸ್ತುಗಳನ್ನು ನೋಡಿ ಗ್ರೆನೇಡ್ ಎಂಬುದನ್ನು ಕಂಡುಕೊಂಡಿದ್ದಾರೆ. ಸ್ಪೋಟಕ ವಸ್ತುಗಳನ್ನು ಕಾಡು ಪ್ರಾಣಿಗಳು ಬೇರೆಡೆಗೆ ಕಚ್ಚಿಕೊಂಡು ಹೋಗಿ ಸಾರ್ವಜನಿಕರಿಗೆ ಅಪಾಯ ಆಗುವುದನ್ನು ಅರಿತ ಜಯಕುಮಾರ್, ಅವುಗಳನ್ನು ತನ್ನ ಮನೆಯ ಅಂಗಳದ ಮೂಲೆಯಲ್ಲಿಟ್ಟು ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಗ್ರೆನೇಡ್ ಸ್ಫೋಟಗಳನ್ನು ಯಾರೋ ದುಷ್ಕರ್ಮಿಗಳು ಜನರು ಸಂಚರಿಸುವ ದಾರಿಯ ಬದಿಯಲ್ಲಿ ಹಾಕಿದ್ದು ಈ ಕೃತ್ಯ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಯಕುಮಾರ್ ದೂರು ನೀಡಿದ್ದಾರೆ.
ಈ ಬಗ್ಗೆ ಎಸ್ಪಿ ಋಷಿಕುಮಾರ್ ಸೋನವಾಣೆ ಬಳಿ ಮಾಹಿತಿ ಕೇಳಿದಾಗ, ಅವು ಹ್ಯಾಂಡ್ ಗ್ರೆನೇಡ್ ಎಂಬುದಾಗಿ ಹೇಳಿದ್ದಾರೆ. ತುಕ್ಕು ಹಿಡಿದಿದ್ದು ಹಲವಾರು ವರ್ಷಗಳ ಹಿಂದಿನದ್ದಾಗಿರುವ ಸಾಧ್ಯತೆಯಿದೆ. ಯುದ್ಧ ಸಂದರ್ಭದಲ್ಲಿ ಇದನ್ನು ಬಳಸಲಾಗುತ್ತದೆ. ಕಾಶ್ಮೀರದಲ್ಲಿ ಉಗ್ರರು ಕೂಡ ಇದನ್ನು ಯೋಧರ ವಿರುದ್ಧ ಬಳಕೆ ಮಾಡುತ್ತಾರೆ. ಗ್ರೆನೇಡ್ ಉಪ್ಪಿನಂಗಡಿಗೆ ಹೇಗೆ ಬಂತೆಂಬುದನ್ನು ತನಿಖೆ ನಡೆಸುತ್ತೇವೆ ಎಂದಿದ್ದಾರೆ.
In a curious incident, five grenades were found placed near a wire fence at Ilanthila of the taluk. A case is filed in this regard by Jayakumar Poojary (66), who noticed the grenades. According to the details, the complainant Jayakumar was walking towards his house from Uppinangady at around 6 pm on Saturday, November 6, when he noticed five things resembling grenades kept near the left hand side of the wire fence that is located on a downward slope area.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm