ಬ್ರೇಕಿಂಗ್ ನ್ಯೂಸ್
09-11-21 10:52 am Mangaluru Correspondent ಕ್ರೈಂ
ಮಂಗಳೂರು, ನ.9: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ವಕೀಲ ಕೆ.ಎಸ್.ಎನ್ ರಾಜೇಶ್ ಪತ್ತೆಗಾಗಿ ಮಂಗಳೂರು ಪೊಲೀಸರು ದೇಶಾದ್ಯಂತ ಲುಕೌಟ್ ನೋಟೀಸು ಜಾರಿಗೊಳಿಸಲು ಮುಂದಾಗಿದ್ದಾರೆ.
ದೇಶದ ಎಲ್ಲ ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು ಸೇರಿದಂತೆ ದಕ್ಷಿಣ ಭಾರತದ ಎಲ್ಲ ರಾಜ್ಯಗಳ ಪೊಲೀಸ್ ಠಾಣೆಗಳಿಗೆ ಲುಕ್ ಔಟ್ ನೋಟೀಸ್ ಹೋಗಲಿದೆ. ಅಲ್ಲದೆ, ಈತ ಕಂಡುಬಂದರೆ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗಳಿಗೆ ತಿಳಿಸುವಂತೆ ಹೇಳಿ ನೋಟೀಸನ್ನು ಬಸ್ ನಿಲ್ದಾಣ, ಹೊಟೇಲ್, ಪೊಲೀಸ್ ಠಾಣೆ ಆಸುಪಾಸಿನಲ್ಲಿ ಅಂಟಿಸುವ ಪ್ರಕ್ರಿಯೆ ನಡೆಯಲಿದೆ.
ವಿದೇಶಕ್ಕೆ ಪರಾರಿಯಾಗುವುದನ್ನು ತಪ್ಪಿಸಲು ಮತ್ತು ತಲೆಮರೆಸಿಕೊಂಡು ವಿವಿಧ ಕಡೆಗಳಿಗೆ ಸಂಚರಿಸುವುದನ್ನು ತಪ್ಪಿಸುವುದಕ್ಕಾಗಿ ಲುಕ್ ಔಟ್ ನೋಟೀಸ್ ಜಾರಿ ಮಾಡಲಾಗುತ್ತಿದೆ. ವಿಮಾನ ನಿಲ್ದಾಣಗಳಿಗೆ ತೆರಳಿದ ಕೂಡಲೇ ಅಲ್ಲಿನ ಭದ್ರತಾ ಅಧಿಕಾರಿಗಳು ಪತ್ತೆ ಮಾಡಲಿದ್ದಾರೆ. ಈಗಾಗಲೇ ವಕೀಲ ರಾಜೇಶ್ ಅವರಿಗೆ ಸೇರಿದ ಬ್ಯಾಂಕ್ ಖಾತೆಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.
ಇದಲ್ಲದೆ, ವಕೀಲನ ಪತ್ತೆಗಾಗಿ ತಮಿಳುನಾಡು, ಕೇರಳ, ಆಂಧ್ರಪ್ರದೇಶ ಪೊಲೀಸರ ನೆರವನ್ನೂ ಮಂಗಳೂರು ಪೊಲೀಸರು ಕೇಳಿದ್ದಾರೆ. ಮಂಗಳೂರು ಪೊಲೀಸರನ್ನು ಒಳಗೊಂಡ ಆರು ತಂಡವನ್ನು ರಚಿಸಲಾಗಿದ್ದು, ವಿವಿಧ ಕಡೆಗಳಿಗೆ ತೆರಳಿ ಪತ್ತೆ ಕಾರ್ಯ ನಡೆಸುತ್ತಿದ್ದಾರೆ. ಆದರೆ, ವಕೀಲ ರಾಜೇಶ್ ತಿರುಪತಿ, ಚೆನ್ನೈ, ಹೈದರಾಬಾದ್ ಹೀಗೆ ವಿವಿಧ ಕಡೆಗಳಿಗೆ ತೆರಳುತ್ತಿದ್ದು ಪೊಲೀಸರಿಂದ ತಲೆತಪ್ಪಿಸಿಕೊಂಡು ತಿರುಗಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ದಕ್ಷಿಣ ಭಾರತದ ಎಲ್ಲ ಭಾಷೆಗಳಲ್ಲಿ ಲುಕೌಟ್ ನೋಟೀಸನ್ನು ಬರೆಯಲಾಗಿದ್ದು, ಅದನ್ನು ವಿವಿಧ ಠಾಣೆಗಳಿಗೆ ರವಾನಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಅ.18ರಂದು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ವಕೀಲ ಕೆ.ಎಸ್.ಎನ್ ರಾಜೇಶ್ ನಾಪತ್ತೆಯಾಗಿದ್ದರು.
ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ; ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕರ ವಿರುದ್ಧ ಎಫ್ಐಆರ್ !
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ವಕೀಲನ ಅಜ್ಞಾತ ಸ್ಥಳಕ್ಕೆ ಬಿಟ್ಟು ಬಂದಿದ್ದ ವ್ಯಕ್ತಿಯ ಬಂಧನ
Mangalore Police issue lookout notice for Lawyer KSN Rajesh who is absconding in Sexual Harassment case. A second year law student has accused Rajesh, Special Public Prosecutor of the Lokayukta, of sexual assault in his chamber on September 25. The victim’s friend filed a complaint accusing the advocate and his friend, a woman activist, of forcing her in a city police station to sign a document denying sexual harassment of her friend. These two complaints were registered at the Women’s Police Station on October 18.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm