ಬ್ರೇಕಿಂಗ್ ನ್ಯೂಸ್
09-11-21 08:53 pm Mangaluru Correspondent ಕ್ರೈಂ
ಮಂಗಳೂರು, ನ.9: ತಾನು ಪ್ರೀತಿಸುತ್ತಿದ್ದ ಹುಡುಗಿಯನ್ನು ಮನೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಸಿಟ್ಟಿನಲ್ಲಿ ಆಕೆಯ ಚಿಕ್ಕಮ್ಮನಿಗೆ ತನ್ನದೇ ಅಶ್ಲೀಲ ವಿಡಿಯೋ ಕಳುಹಿಸಿ, ಅಶ್ಲೀಲವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದ ನಿವಾಸಿ ಸಂತೋಷ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಹುಡುಗಿಯ ಚಿಕ್ಕಮ್ಮ ಪೊಲೀಸ್ ದೂರು ನೀಡಿದ್ದಾರೆ. ಮಹಿಳೆಯ ಅಕ್ಕನ ಮಗಳನ್ನು ಮೂಡಿಗೆರೆ ಮೂಲದ, ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಸಂತೋಷ್ ಎಂಬಾತ ಪ್ರೀತಿಸುತ್ತಿದ್ದ. ಈ ವಿಚಾರ ಹುಡುಗಿಯ ಮನೆಯವರಿಗೆ ಗೊತ್ತಾಗಿ ವಿರೋಧ ವ್ಯಕ್ತಪಡಿಸಿದ್ದರು.
ಬಳಿಕ ಆಕೆಯನ್ನು ಮಂಗಳೂರಿನಲ್ಲಿರುವ ಚಿಕ್ಕಮ್ಮ ತನ್ನ ಮನೆಗೆ ಕರೆದುಕೊಂಡು ಬಂದು ಇರಿಸಿದ್ದರು. ಆದರೆ, ಅಲ್ಲಿಯೂ ಹುಡುಗಿಯ ನಂಬರ್ ಪಡೆದು ವಾಟ್ಸಪ್ ಸಂದೇಶ ಕಳುಹಿಸುವುದು ಮತ್ತು ಕರೆ ಮಾಡಿ ಮಾತನಾಡುವುದನ್ನು ಮುಂದುವರಿಸಿದ್ದ. ಇದನ್ನು ತಿಳಿದ ಚಿಕ್ಕಮ್ಮ, ಹುಡುಗಿಯ ಮೊಬೈಲಿನ ಸಿಮ್ ಕಾರ್ಡನ್ನು ತೆಗೆದಿಟ್ಟಿದ್ದರು. ಆನಂತರ ಆರೋಪಿ ಸಂತೋಷ್, ಹುಡುಗಿಯ ಚಿಕ್ಕಮ್ಮನ ಮೊಬೈಲ್ ನಂಬರ್ ಪಡೆದು ಬೇರೆ ಬೇರೆ ನಂಬರ್ ಗಳಿಂದ ಕರೆ ಮಾಡತೊಡಗಿದ್ದ. ಇದರಿಂದ ಬೇಸತ್ತ ಮಹಿಳೆ ಸಂತೋಷ್ ಕರೆ ಮಾಡುತ್ತಿದ್ದ ಎಲ್ಲ ನಂಬರ್ ಗಳನ್ನು ಬ್ಲಾಕ್ ಮಾಡಿದ್ದರು.
ಈ ನಡುವೆ, ಸಂತೋಷ್ ಬೇರೊಂದು ನಂಬರಿನಿಂದ ಚಿಕ್ಕಮ್ಮನ ಮೊಬೈಲಿಗೆ ಗಂಡಸಿನ ಗುಪ್ತಾಂಗದ ನಗ್ನ ಚಿತ್ರವನ್ನು ಕಳುಹಿಸಿದ್ದಾನೆ. ಅಲ್ಲದೆ, ತನ್ನದೇ ಅಶ್ಲೀಲ ವಿಡಿಯೋ ಒಂದನ್ನು ಕಳುಹಿಸಿದ್ದಲ್ಲದೆ, ಮಹಿಳೆಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾನೆ. ಇದರಿಂದ ಮಾನಸಿಕ ಹಿಂಸೆಗೊಳಗಾದ ಮಹಿಳೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Man arrested for Sending his Nude video and obscene text messages to Women in Mangalore. The arrested has been identified as Santosh from Mudigere.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm