ಬ್ರೇಕಿಂಗ್ ನ್ಯೂಸ್
09-11-21 08:53 pm Mangaluru Correspondent ಕ್ರೈಂ
ಮಂಗಳೂರು, ನ.9: ತಾನು ಪ್ರೀತಿಸುತ್ತಿದ್ದ ಹುಡುಗಿಯನ್ನು ಮನೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಸಿಟ್ಟಿನಲ್ಲಿ ಆಕೆಯ ಚಿಕ್ಕಮ್ಮನಿಗೆ ತನ್ನದೇ ಅಶ್ಲೀಲ ವಿಡಿಯೋ ಕಳುಹಿಸಿ, ಅಶ್ಲೀಲವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದ ನಿವಾಸಿ ಸಂತೋಷ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಹುಡುಗಿಯ ಚಿಕ್ಕಮ್ಮ ಪೊಲೀಸ್ ದೂರು ನೀಡಿದ್ದಾರೆ. ಮಹಿಳೆಯ ಅಕ್ಕನ ಮಗಳನ್ನು ಮೂಡಿಗೆರೆ ಮೂಲದ, ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಸಂತೋಷ್ ಎಂಬಾತ ಪ್ರೀತಿಸುತ್ತಿದ್ದ. ಈ ವಿಚಾರ ಹುಡುಗಿಯ ಮನೆಯವರಿಗೆ ಗೊತ್ತಾಗಿ ವಿರೋಧ ವ್ಯಕ್ತಪಡಿಸಿದ್ದರು.
ಬಳಿಕ ಆಕೆಯನ್ನು ಮಂಗಳೂರಿನಲ್ಲಿರುವ ಚಿಕ್ಕಮ್ಮ ತನ್ನ ಮನೆಗೆ ಕರೆದುಕೊಂಡು ಬಂದು ಇರಿಸಿದ್ದರು. ಆದರೆ, ಅಲ್ಲಿಯೂ ಹುಡುಗಿಯ ನಂಬರ್ ಪಡೆದು ವಾಟ್ಸಪ್ ಸಂದೇಶ ಕಳುಹಿಸುವುದು ಮತ್ತು ಕರೆ ಮಾಡಿ ಮಾತನಾಡುವುದನ್ನು ಮುಂದುವರಿಸಿದ್ದ. ಇದನ್ನು ತಿಳಿದ ಚಿಕ್ಕಮ್ಮ, ಹುಡುಗಿಯ ಮೊಬೈಲಿನ ಸಿಮ್ ಕಾರ್ಡನ್ನು ತೆಗೆದಿಟ್ಟಿದ್ದರು. ಆನಂತರ ಆರೋಪಿ ಸಂತೋಷ್, ಹುಡುಗಿಯ ಚಿಕ್ಕಮ್ಮನ ಮೊಬೈಲ್ ನಂಬರ್ ಪಡೆದು ಬೇರೆ ಬೇರೆ ನಂಬರ್ ಗಳಿಂದ ಕರೆ ಮಾಡತೊಡಗಿದ್ದ. ಇದರಿಂದ ಬೇಸತ್ತ ಮಹಿಳೆ ಸಂತೋಷ್ ಕರೆ ಮಾಡುತ್ತಿದ್ದ ಎಲ್ಲ ನಂಬರ್ ಗಳನ್ನು ಬ್ಲಾಕ್ ಮಾಡಿದ್ದರು.
ಈ ನಡುವೆ, ಸಂತೋಷ್ ಬೇರೊಂದು ನಂಬರಿನಿಂದ ಚಿಕ್ಕಮ್ಮನ ಮೊಬೈಲಿಗೆ ಗಂಡಸಿನ ಗುಪ್ತಾಂಗದ ನಗ್ನ ಚಿತ್ರವನ್ನು ಕಳುಹಿಸಿದ್ದಾನೆ. ಅಲ್ಲದೆ, ತನ್ನದೇ ಅಶ್ಲೀಲ ವಿಡಿಯೋ ಒಂದನ್ನು ಕಳುಹಿಸಿದ್ದಲ್ಲದೆ, ಮಹಿಳೆಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾನೆ. ಇದರಿಂದ ಮಾನಸಿಕ ಹಿಂಸೆಗೊಳಗಾದ ಮಹಿಳೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Man arrested for Sending his Nude video and obscene text messages to Women in Mangalore. The arrested has been identified as Santosh from Mudigere.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
24-06-25 11:19 am
Mangalore Correspondent
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm