ಬ್ರೇಕಿಂಗ್ ನ್ಯೂಸ್
09-11-21 08:53 pm Mangaluru Correspondent ಕ್ರೈಂ
ಮಂಗಳೂರು, ನ.9: ತಾನು ಪ್ರೀತಿಸುತ್ತಿದ್ದ ಹುಡುಗಿಯನ್ನು ಮನೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಸಿಟ್ಟಿನಲ್ಲಿ ಆಕೆಯ ಚಿಕ್ಕಮ್ಮನಿಗೆ ತನ್ನದೇ ಅಶ್ಲೀಲ ವಿಡಿಯೋ ಕಳುಹಿಸಿ, ಅಶ್ಲೀಲವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದ ನಿವಾಸಿ ಸಂತೋಷ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಹುಡುಗಿಯ ಚಿಕ್ಕಮ್ಮ ಪೊಲೀಸ್ ದೂರು ನೀಡಿದ್ದಾರೆ. ಮಹಿಳೆಯ ಅಕ್ಕನ ಮಗಳನ್ನು ಮೂಡಿಗೆರೆ ಮೂಲದ, ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಸಂತೋಷ್ ಎಂಬಾತ ಪ್ರೀತಿಸುತ್ತಿದ್ದ. ಈ ವಿಚಾರ ಹುಡುಗಿಯ ಮನೆಯವರಿಗೆ ಗೊತ್ತಾಗಿ ವಿರೋಧ ವ್ಯಕ್ತಪಡಿಸಿದ್ದರು.
ಬಳಿಕ ಆಕೆಯನ್ನು ಮಂಗಳೂರಿನಲ್ಲಿರುವ ಚಿಕ್ಕಮ್ಮ ತನ್ನ ಮನೆಗೆ ಕರೆದುಕೊಂಡು ಬಂದು ಇರಿಸಿದ್ದರು. ಆದರೆ, ಅಲ್ಲಿಯೂ ಹುಡುಗಿಯ ನಂಬರ್ ಪಡೆದು ವಾಟ್ಸಪ್ ಸಂದೇಶ ಕಳುಹಿಸುವುದು ಮತ್ತು ಕರೆ ಮಾಡಿ ಮಾತನಾಡುವುದನ್ನು ಮುಂದುವರಿಸಿದ್ದ. ಇದನ್ನು ತಿಳಿದ ಚಿಕ್ಕಮ್ಮ, ಹುಡುಗಿಯ ಮೊಬೈಲಿನ ಸಿಮ್ ಕಾರ್ಡನ್ನು ತೆಗೆದಿಟ್ಟಿದ್ದರು. ಆನಂತರ ಆರೋಪಿ ಸಂತೋಷ್, ಹುಡುಗಿಯ ಚಿಕ್ಕಮ್ಮನ ಮೊಬೈಲ್ ನಂಬರ್ ಪಡೆದು ಬೇರೆ ಬೇರೆ ನಂಬರ್ ಗಳಿಂದ ಕರೆ ಮಾಡತೊಡಗಿದ್ದ. ಇದರಿಂದ ಬೇಸತ್ತ ಮಹಿಳೆ ಸಂತೋಷ್ ಕರೆ ಮಾಡುತ್ತಿದ್ದ ಎಲ್ಲ ನಂಬರ್ ಗಳನ್ನು ಬ್ಲಾಕ್ ಮಾಡಿದ್ದರು.
ಈ ನಡುವೆ, ಸಂತೋಷ್ ಬೇರೊಂದು ನಂಬರಿನಿಂದ ಚಿಕ್ಕಮ್ಮನ ಮೊಬೈಲಿಗೆ ಗಂಡಸಿನ ಗುಪ್ತಾಂಗದ ನಗ್ನ ಚಿತ್ರವನ್ನು ಕಳುಹಿಸಿದ್ದಾನೆ. ಅಲ್ಲದೆ, ತನ್ನದೇ ಅಶ್ಲೀಲ ವಿಡಿಯೋ ಒಂದನ್ನು ಕಳುಹಿಸಿದ್ದಲ್ಲದೆ, ಮಹಿಳೆಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾನೆ. ಇದರಿಂದ ಮಾನಸಿಕ ಹಿಂಸೆಗೊಳಗಾದ ಮಹಿಳೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Man arrested for Sending his Nude video and obscene text messages to Women in Mangalore. The arrested has been identified as Santosh from Mudigere.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm