ಬ್ರೇಕಿಂಗ್ ನ್ಯೂಸ್
09-11-21 08:53 pm Mangaluru Correspondent ಕ್ರೈಂ
ಮಂಗಳೂರು, ನ.9: ತಾನು ಪ್ರೀತಿಸುತ್ತಿದ್ದ ಹುಡುಗಿಯನ್ನು ಮನೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಸಿಟ್ಟಿನಲ್ಲಿ ಆಕೆಯ ಚಿಕ್ಕಮ್ಮನಿಗೆ ತನ್ನದೇ ಅಶ್ಲೀಲ ವಿಡಿಯೋ ಕಳುಹಿಸಿ, ಅಶ್ಲೀಲವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದ ನಿವಾಸಿ ಸಂತೋಷ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಹುಡುಗಿಯ ಚಿಕ್ಕಮ್ಮ ಪೊಲೀಸ್ ದೂರು ನೀಡಿದ್ದಾರೆ. ಮಹಿಳೆಯ ಅಕ್ಕನ ಮಗಳನ್ನು ಮೂಡಿಗೆರೆ ಮೂಲದ, ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಸಂತೋಷ್ ಎಂಬಾತ ಪ್ರೀತಿಸುತ್ತಿದ್ದ. ಈ ವಿಚಾರ ಹುಡುಗಿಯ ಮನೆಯವರಿಗೆ ಗೊತ್ತಾಗಿ ವಿರೋಧ ವ್ಯಕ್ತಪಡಿಸಿದ್ದರು.
ಬಳಿಕ ಆಕೆಯನ್ನು ಮಂಗಳೂರಿನಲ್ಲಿರುವ ಚಿಕ್ಕಮ್ಮ ತನ್ನ ಮನೆಗೆ ಕರೆದುಕೊಂಡು ಬಂದು ಇರಿಸಿದ್ದರು. ಆದರೆ, ಅಲ್ಲಿಯೂ ಹುಡುಗಿಯ ನಂಬರ್ ಪಡೆದು ವಾಟ್ಸಪ್ ಸಂದೇಶ ಕಳುಹಿಸುವುದು ಮತ್ತು ಕರೆ ಮಾಡಿ ಮಾತನಾಡುವುದನ್ನು ಮುಂದುವರಿಸಿದ್ದ. ಇದನ್ನು ತಿಳಿದ ಚಿಕ್ಕಮ್ಮ, ಹುಡುಗಿಯ ಮೊಬೈಲಿನ ಸಿಮ್ ಕಾರ್ಡನ್ನು ತೆಗೆದಿಟ್ಟಿದ್ದರು. ಆನಂತರ ಆರೋಪಿ ಸಂತೋಷ್, ಹುಡುಗಿಯ ಚಿಕ್ಕಮ್ಮನ ಮೊಬೈಲ್ ನಂಬರ್ ಪಡೆದು ಬೇರೆ ಬೇರೆ ನಂಬರ್ ಗಳಿಂದ ಕರೆ ಮಾಡತೊಡಗಿದ್ದ. ಇದರಿಂದ ಬೇಸತ್ತ ಮಹಿಳೆ ಸಂತೋಷ್ ಕರೆ ಮಾಡುತ್ತಿದ್ದ ಎಲ್ಲ ನಂಬರ್ ಗಳನ್ನು ಬ್ಲಾಕ್ ಮಾಡಿದ್ದರು.
ಈ ನಡುವೆ, ಸಂತೋಷ್ ಬೇರೊಂದು ನಂಬರಿನಿಂದ ಚಿಕ್ಕಮ್ಮನ ಮೊಬೈಲಿಗೆ ಗಂಡಸಿನ ಗುಪ್ತಾಂಗದ ನಗ್ನ ಚಿತ್ರವನ್ನು ಕಳುಹಿಸಿದ್ದಾನೆ. ಅಲ್ಲದೆ, ತನ್ನದೇ ಅಶ್ಲೀಲ ವಿಡಿಯೋ ಒಂದನ್ನು ಕಳುಹಿಸಿದ್ದಲ್ಲದೆ, ಮಹಿಳೆಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾನೆ. ಇದರಿಂದ ಮಾನಸಿಕ ಹಿಂಸೆಗೊಳಗಾದ ಮಹಿಳೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Man arrested for Sending his Nude video and obscene text messages to Women in Mangalore. The arrested has been identified as Santosh from Mudigere.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm