ಬ್ರೇಕಿಂಗ್ ನ್ಯೂಸ್
09-11-21 11:08 pm Mangaluru Correspondent ಕ್ರೈಂ
ಉಳ್ಳಾಲ, ನ.9: ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ ಹೆಚ್ಚುತ್ತಿದ್ದು ನಿನ್ನೆ ರಾತ್ರಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ಝುಪಿಟರ್ ಸ್ಕೂಟರನ್ನ ಯಾರೋ ಕಳವುಗೈದ ಪ್ರಕರಣ ತೊಕ್ಕೊಟ್ಟಿನಲ್ಲಿ ನಡೆದಿದೆ.
ತೊಕ್ಕೊಟ್ಟು ಓವರ್ ಬ್ರಿಡ್ಜ್ ನ ರಕ್ಷಾ ಕ್ಲಿನಿಕ್ ಬಳಿಯ ಪ್ರಿಯಾ ಫ್ಯಾನ್ಸಿ ಅಂಗಡಿ ಹೊಂದಿರುವ ಚೇತನ್ ಅವರ ಮನೆಯಂಗಳದಿಂದ ಸ್ಕೂಟರನ್ನ ಕಳವುಗೈಯಲಾಗಿದೆ. KA 19 ER 0584 ನೋಂದಣಿ ಸಂಖ್ಯೆಯ ಬೂದು (ಗ್ರೇ) ಬಣ್ಣದ ಝುಫಿಟರ್ ಸ್ಕೂಟರನ್ನ ಕಳ್ಳರು ರಾತ್ರೋ ರಾತ್ರಿ ಎಗರಿಸಿದ್ದಾರೆ. ಚೇತನ್ ಅವರ ಮನೆ ಮತ್ತು ವಾಣಿಜ್ಯ ಸಂಕೀರ್ಣ ರಸ್ತೆ ಬದಿಯಲ್ಲೇ ಇದ್ದು, ಅವರದ್ದೇ ವಾಣಿಜ್ಯ ಕಟ್ಟಡದಲ್ಲಿ ಫ್ಯಾನ್ಸಿ ಹೊಂದಿದ್ದಾರೆ. ಚೇತನ್ ನಿನ್ನೆ ರಾತ್ರಿ ಫ್ಯಾನ್ಸಿ ಅಂಗಡಿಯನ್ನು ಬಂದ್ ಮಾಡಿ ಮನೆಯಂಗಳದಲ್ಲಿ ಸ್ಕೂಟರನ್ನ ನಿಲ್ಲಿಸಿದ್ದು ಬೆಳಗ್ಗೆ ಸ್ಕೂಟರ್ ಕಳವಾದ ಬಗ್ಗೆ ತಿಳಿದಿದೆ.
ಮನೆಯ ಮೇಲ್ಬಾಗದಲ್ಲಿರುವ ಸಹಕಾರಿ ಬ್ಯಾಂಕ್ ಶಾಖೆಯ ಸಿಸಿಟಿವಿಯನ್ನು ಪೊಲೀಸರು ಪರಿಶೀಲಿಸುತ್ತಿದ್ದು ಕಳ್ಳರ ಬಗ್ಗೆ ಸುಳಿವು ಲಭಿಸಿಲ್ಲ. ಕಳೆದ ಅಕ್ಟೋಬರ್ 28 ರ ರಾತ್ರಿ ಓವರ್ ಬ್ರಿಡ್ಜ್ ನಲ್ಲಿರುವ ಮಾರುತಿ ಸೆಂಟರ್ ವಾಣಿಜ್ಯ ಕಟ್ಟಡದ ಮುಂಭಾಗದಲ್ಲೂ ಬೈಕ್ ಕಳವು ಯತ್ನ ನಡೆದಿತ್ತು. ಮಾರುತಿ ಸೆಂಟರ್ ನ ಮುತ್ತೂಟ್ ಫೈನಾನ್ಸ್ ಸೆಕ್ಯುರಿಟಿ ಗಾರ್ಡ್ ನ ಬೈಕನ್ನೇ ಕಳವಿಗೆ ಯತ್ನಿಸಿದ್ದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕು ಅಂಗಡಿಪದವು ಶಾಂತಿನಗರ ನಿವಾಸಿ ನೌಫಾಲ್(23) ಎಂಬಾತನಿಗೆ ಸೆಕ್ಯುರಿಟಿ ಗಾರ್ಡ್ ಸೇರಿ ಸಾರ್ವಜನಿಕರು ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದರು.
ಕಳವಾದ ಸ್ಕೂಟರ್ ಉಳ್ಳಾಲದಲ್ಲಿ ಪತ್ತೆ
ಈ ನಡುವೆ, ನಿನ್ನೆ ರಾತ್ರಿ ಕಳವಾಗಿದ್ದ ಸ್ಕೂಟರ್ ಉಳ್ಳಾಲ ಬೈಲಿನ ಯಮಹಾ ಶೋರೂಂ ಬಳಿ ಮಂಗಳವಾರ ಸಂಜೆ ಪತ್ತೆಯಾಗಿದೆ. ಯಾರೋ ಕಳ್ಳರು ಸ್ಕೂಟರನ್ನು ಕದ್ದೊಯ್ಯಲು ವಿಫಲ ಯತ್ನ ನಡೆಸಿದ್ದಾರೆ. ಆದರೆ, ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯಿಂದ ಸ್ಕೂಟರನ್ನು ದೂಡುತ್ತಾ ಹೋಗಿ ಉಳ್ಳಾಲದಲ್ಲಿ ಇರಿಸಿ ಹೋಗಿದ್ದು ಸಂಶಯಕ್ಕೆ ಕಾರಣವಾಗಿದೆ.
Mangalore Parked Bike Stolen by theives outside the house, found in Ulall
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 11:19 am
Mangalore Correspondent
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm