ಬ್ರೇಕಿಂಗ್ ನ್ಯೂಸ್
11-11-21 10:11 am HK News Desk ಕ್ರೈಂ
ಶಿವಮೊಗ್ಗ, ನ 11: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕೆಎಸ್ಆರ್ಟಿಸಿ ಚಾಲಕರೊಬ್ಬರಿಗೆ 15 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಎಸ್ಆರ್ಟಿಸಿ ನಿವೃತ್ತ ಚಾಲಕ ಕೆಂಚಪ್ಪ ಮೋಸ ಹೋದವರು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಂಚಪ್ಪ ಅವರಿಂದ 15 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.
2106ರಲ್ಲಿ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಕೆಂಚಪ್ಪ ಅವರಿಗೆ ಪರಿಚಯವಾಗಿದ್ದಾನೆ. ತಾನು ವಿಶ್ವಾಸ್ ಚಂದ್ರಶೇಖರ್ ಮತ್ತು ಜೊತೆಗಿದ್ದ ಮಹಿಳೆಯನ್ನು ಸಂಧ್ಯಾ ಎಂದು ಪರಿಚಿಯಿಸಿಕೊಂಡಿದ್ದಾರೆ.
"ನಾನು ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ. ಸರ್ಕಾರಿ ಕೆಲಸ ಕೊಡಿಸುತ್ತೇನೆ" ಎಂದು ನಂಬಿಸಿದ್ದಾನೆ. ವಿಶ್ವಾಸ್ ಚಂದ್ರಶೇಖರ್ ಮಾತು ನಂಬಿದ ಕೆಂಚಪ್ಪ ತಮ್ಮ ಪರಿಚಯದವರೊಬ್ಬರಿಗೆ ಸರ್ಕಾರಿ ಕೆಲಸ ಕೊಡಿಸಲು ಹಣ ನೀಡಿದ್ದಾರೆ. ಸ್ವಲ್ಪ ಹಣವನ್ನು ನೇರವಾಗಿ ಕೊಟ್ಟಿದ್ದಾರೆ. ಉಳಿದ ಹಣವನ್ನು ಬ್ಯಾಂಕ್ ಮೂಲಕ ವರ್ಗಾಯಿಸಿದ್ದಾರೆ.
ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿದ್ದ ವಿಶ್ವಾಸ್ ಚಂದ್ರಶೇಖರ್ ಬಳಿಕ ಸರಿಯಾಗಿ ಸ್ಪಂದಿಸಿಲ್ಲ. ಹಣ ಹಿಂತಿರುಗಿಸುವಂತೆ ಕೆಂಚಪ್ಪ ಒತ್ತಡ ಹೇರಿದ್ದಾರೆ. ವಿಶ್ವಾಸ್ ಚಂದ್ರಶೇಖರ್ ಊರಿಗೆ ಹೋಗಿ ಹಣ ಕೇಳಿದಾಗ 1 ಲಕ್ಷ ರೂ. ನ ಚೆಕ್ ನೀಡಿದ್ದಾನೆ. ಆದರೆ ಆ ಚೆಕ್ ಬೌನ್ಸ್ ಆಗಿದೆ. ಕೊನೆಗೆ ನಿವೃತ್ತ ಚಾಲಕ ಕೆಂಚಪ್ಪ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಚಿಕ್ಕಮಗಳೂರಿನ ವಿಶ್ವಾಸ್ ಚಂದ್ರಶೇಖರ್ ಮತ್ತು ಮೈಸೂರಿನ ಸಂಧ್ಯಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Shivamogga KSRTC Driver has been cheated of 15 Lakhs by Man stating himself as DK Shivakumar PA. A case has been registered against him, police are now on the search for the accused.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am