ಬ್ರೇಕಿಂಗ್ ನ್ಯೂಸ್
11-11-21 10:11 am HK News Desk ಕ್ರೈಂ
ಶಿವಮೊಗ್ಗ, ನ 11: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕೆಎಸ್ಆರ್ಟಿಸಿ ಚಾಲಕರೊಬ್ಬರಿಗೆ 15 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಎಸ್ಆರ್ಟಿಸಿ ನಿವೃತ್ತ ಚಾಲಕ ಕೆಂಚಪ್ಪ ಮೋಸ ಹೋದವರು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಂಚಪ್ಪ ಅವರಿಂದ 15 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.
2106ರಲ್ಲಿ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಕೆಂಚಪ್ಪ ಅವರಿಗೆ ಪರಿಚಯವಾಗಿದ್ದಾನೆ. ತಾನು ವಿಶ್ವಾಸ್ ಚಂದ್ರಶೇಖರ್ ಮತ್ತು ಜೊತೆಗಿದ್ದ ಮಹಿಳೆಯನ್ನು ಸಂಧ್ಯಾ ಎಂದು ಪರಿಚಿಯಿಸಿಕೊಂಡಿದ್ದಾರೆ.
"ನಾನು ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ. ಸರ್ಕಾರಿ ಕೆಲಸ ಕೊಡಿಸುತ್ತೇನೆ" ಎಂದು ನಂಬಿಸಿದ್ದಾನೆ. ವಿಶ್ವಾಸ್ ಚಂದ್ರಶೇಖರ್ ಮಾತು ನಂಬಿದ ಕೆಂಚಪ್ಪ ತಮ್ಮ ಪರಿಚಯದವರೊಬ್ಬರಿಗೆ ಸರ್ಕಾರಿ ಕೆಲಸ ಕೊಡಿಸಲು ಹಣ ನೀಡಿದ್ದಾರೆ. ಸ್ವಲ್ಪ ಹಣವನ್ನು ನೇರವಾಗಿ ಕೊಟ್ಟಿದ್ದಾರೆ. ಉಳಿದ ಹಣವನ್ನು ಬ್ಯಾಂಕ್ ಮೂಲಕ ವರ್ಗಾಯಿಸಿದ್ದಾರೆ.
ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿದ್ದ ವಿಶ್ವಾಸ್ ಚಂದ್ರಶೇಖರ್ ಬಳಿಕ ಸರಿಯಾಗಿ ಸ್ಪಂದಿಸಿಲ್ಲ. ಹಣ ಹಿಂತಿರುಗಿಸುವಂತೆ ಕೆಂಚಪ್ಪ ಒತ್ತಡ ಹೇರಿದ್ದಾರೆ. ವಿಶ್ವಾಸ್ ಚಂದ್ರಶೇಖರ್ ಊರಿಗೆ ಹೋಗಿ ಹಣ ಕೇಳಿದಾಗ 1 ಲಕ್ಷ ರೂ. ನ ಚೆಕ್ ನೀಡಿದ್ದಾನೆ. ಆದರೆ ಆ ಚೆಕ್ ಬೌನ್ಸ್ ಆಗಿದೆ. ಕೊನೆಗೆ ನಿವೃತ್ತ ಚಾಲಕ ಕೆಂಚಪ್ಪ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಚಿಕ್ಕಮಗಳೂರಿನ ವಿಶ್ವಾಸ್ ಚಂದ್ರಶೇಖರ್ ಮತ್ತು ಮೈಸೂರಿನ ಸಂಧ್ಯಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Shivamogga KSRTC Driver has been cheated of 15 Lakhs by Man stating himself as DK Shivakumar PA. A case has been registered against him, police are now on the search for the accused.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm