ಬ್ರೇಕಿಂಗ್ ನ್ಯೂಸ್
11-11-21 11:02 pm Mangaluru Correspondent ಕ್ರೈಂ
ಮಂಗಳೂರು, ನ.11: ಉಪ್ಪಳ ಕೇಂದ್ರೀಕರಿಸಿ ಕಾರ್ಯಾಚರಣೆ ನಡೆಸುತ್ತಿದ್ದ ನಟೋರಿಯಸ್ ಗ್ಯಾಂಗ್ ಲೀಡರ್ ಕಾಲಿಯಾ ರಫೀಕ್ ಮತ್ತು ಡಾನ್ ತಸ್ಲೀಮ್ ಹತ್ಯೆ ಪ್ರಕರಣದಲ್ಲಿ ಮಂಗಳೂರು ಮತ್ತು ಕಾಸರಗೋಡು ಪೊಲೀಸರಿಗೆ ಬೇಕಾಗಿದ್ದ ಆರೋಪಿ, ಅದೇ ಗ್ಯಾಂಗ್ ಸದಸ್ಯ ಜಿಯಾನನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.



ಐದು ವರ್ಷಗಳ ಹಿಂದೆ ಕೋಟೆಕಾರಿನಲ್ಲಿ ನಡೆದಿದ್ದ ಉಪ್ಪಳದ ಗ್ಯಾಂಗ್ ಲೀಡರ್ ಕಾಲಿಯಾ ರಫೀಕ್ ನನ್ನು ಅಟ್ಟಾಡಿಸಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಉಳ್ಳಾಲ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಕೆಲವರನ್ನು ಬಂಧಿಸಿದ್ದರೆ ಪ್ರಮುಖ ಆರೋಪಿಯಾಗಿದ್ದ ಜಿಯಾ ತಪ್ಪಿಸಿಕೊಂಡಿದ್ದ. ಆನಂತರ, ಉಪ್ಪಳ ಮೂಲದ ಡಾನ್ ತಸ್ಲಿಂ ಎಂಬಾತನ್ನೂ ಕೊಲ್ಲಲಾಗಿತ್ತು. ಇದಲ್ಲದೆ, ಬಾಲಿಕಾ ಅಜೀಜ್ ಕೊಲೆ ಪ್ರಕರಣದಲ್ಲಿಯೂ ಮಂಜೇಶ್ವರ ಪೊಲೀಸರಿಗೆ ಜಿಯಾ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಟ್ಲ ಬಳಿಯ ಕೇರಳ ಗಡಿಭಾಗ ಕನ್ಯಾನದಲ್ಲಿ ನಡೆದ ಆಸೀಫ್ ಬಾಯಿಕಟ್ಟೆ ಕೊಲೆ ಪ್ರಕರಣದಲ್ಲಿಯೂ ಜಿಯಾ ಆರೋಪಿಯಾಗಿದ್ದ. ಪೈವಳಿಕೆ ನಿವಾಸಿಯಾಗಿರುವ ಜಿಯಾ, ಪ್ರಕರಣದ ಬಳಿಕ ವಿದೇಶಕ್ಕೆ ತೆರಳಿ ಅಲ್ಲಿಯೇ ತಲೆಮರೆಸಿಕೊಂಡಿದ್ದ.
ಕೆಲವು ದಿನಗಳ ಹಿಂದೆ ರಹಸ್ಯವಾಗಿ ತವರಿಗೆ ಮರಳಿದ್ದ ಜಿಯಾ ಗುರುವಾರ ಬೆಳಗ್ಗೆ ವಿದೇಶಕ್ಕೆ ಮರಳುವುದಕ್ಕಾಗಿ ಮುಂಬೈನ ಸಹಾರಾ ವಿಮಾನ ನಿಲ್ದಾಣಕ್ಕೆ ತೆರಳಿದ್ದ. ಈ ವೇಳೆ, ಕೇರಳದ ಎಟಿಎಸ್ ಪೊಲೀಸ್ ತಂಡ ವಿಷಯ ತಿಳಿದು ಶಸ್ತ್ರ ಸಜ್ಜಿತರಾಗಿ ದಾಳಿ ನಡೆಸಿ ಬಂಧಿಸಿದೆ.
Natorious Rowdy Jiya Murder accused of Kalia Rafiq arrested in Mumbai. Rowdy Sheeter Kalia Rafiq was murdered brutally at Kotekar on February 14 in 2017.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm