ಬ್ರೇಕಿಂಗ್ ನ್ಯೂಸ್
12-09-20 05:11 pm Headline Karnataka News Network ಕ್ರೈಂ
ಮುಂಬೈ, ಸೆ.12: ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ವ್ಯಂಗ್ಯಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ಆರೋಪದಲ್ಲಿ ಆಡಳಿತಾರೂಢ ಶಿವಸೇನೆ ಕಾರ್ಯಕರ್ತರು ನಿವೃತ್ತ ನೌಕಾಪಡೆ ಅಧಿಕಾರಿಯೊಬ್ಬರನ್ನು ಹಿಗ್ಗಾ ಮುಗ್ಗಾ ಥಳಿಸಿದ ಅಮಾನವೀಯ ಕೃತ್ಯದ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗಾಯಗೊಂಡ ಮುಖ ಮತ್ತು ರಕ್ತಸಿಕ್ತ ಕಣ್ಣಿನ ಚಿತ್ರಗಳನ್ನು ಮದನ್ ಶರ್ಮಾ ಆನ್ಲೈನ್ನಲ್ಲಿ ಪೋಸ್ಟ್ ಮಾಡಿದ್ದಾರೆ. 65 ವರ್ಷ ವಯಸ್ಸಿನ ಶರ್ಮಾ ಅವರ ಮೇಲೆ ಮುಂಬೈನ ಕೊಂಡಿವಲ್ಲಿ ಪೂರ್ವ ಪ್ರದೇಶದಲ್ಲಿರುವ ಅವರ ನಿವಾಸದ ಸಮೀಪ ಹಲ್ಲೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ತಮ್ಮ ನಿವಾಸಿಗಳ ಸಂಘದ ವಾಟ್ಸ್ ಆ್ಯಪ್ ಗ್ರೂಪ್ಗೆ ಒಂದು ಕಾರ್ಟೂನ್ ಫಾರ್ವರ್ಡ್ ಮಾಡಿದ್ದಾಗಿ ಶರ್ಮಾ ದೂರಿನಲ್ಲಿ ವಿವರಿಸಿದ್ದಾರೆ. ಬಳಿಕ ಕಮಲೇಶ್ ಕದಂ ಎಂಬಾತ ಕರೆ ಮಾಡಿ ಹೆಸರು ಮತ್ತು ವಿಳಾಸ ಕೇಳಿದ್ದಾನೆ. ಮಧ್ಯಾಹ್ನ ಮನೆಯಿಂದ ಹೊರಗೆ ಕರೆದು ಗುಂಪು ಹಲ್ಲೆ ನಡೆಸಿದೆ ಎಂದು ಹೇಳಿದ್ದಾರೆ. ಭದ್ರತಾ ವ್ಯವಸ್ಥೆಯ ಸಿಸಿಟಿವಿ ದೃಶ್ಯಾವಳಿಯನ್ನು ವ್ಯಾಪಕವಾಗಿ ಷೇರ್ ಮಾಡಲಾಗಿದ್ದು, ಇದರ ಪ್ರಕಾರ ಮಾಸ್ಕ್ಗಳನ್ನು ಧರಿಸಿದ್ದ ಮಂದಿಯ ಗುಂಪು ಹಲ್ಲೆ ನಡೆಸಿದೆ.
ಶರ್ಮಾ ತಮ್ಮ ಅಪಾರ್ಟ್ಮೆಂಟ್ನ ಮುಖ್ಯದ್ವಾರದಿಂದ ಹೊರ ಬರುತ್ತಿರುವುದು ಹಾಗೂ ಸ್ವಲ್ಪ ಹೊತ್ತಿನಲ್ಲಿ ಗೇಟಿನ ಒಳಗೆ ಓಡಿ ಬರುತ್ತಿರುವ ಅವರನ್ನು ಗುಂಪು ಅಟ್ಟಿಸಿಕೊಂಡು ಬರುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಅವರ ಅಂಗಿ ಹಿಡಿದು ಎಳೆದು ಗುದ್ದುತ್ತಿರುವುದು ಕೂಡಾ ಕಂಡುಬರುತ್ತಿದೆ. ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಗಾಯಾಳು ಮದನ್ ಶರ್ಮಾ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
Join our WhatsApp group for latest news updates
video:
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm