ಬ್ರೇಕಿಂಗ್ ನ್ಯೂಸ್
12-09-20 05:11 pm Headline Karnataka News Network ಕ್ರೈಂ
ಮುಂಬೈ, ಸೆ.12: ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ವ್ಯಂಗ್ಯಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ಆರೋಪದಲ್ಲಿ ಆಡಳಿತಾರೂಢ ಶಿವಸೇನೆ ಕಾರ್ಯಕರ್ತರು ನಿವೃತ್ತ ನೌಕಾಪಡೆ ಅಧಿಕಾರಿಯೊಬ್ಬರನ್ನು ಹಿಗ್ಗಾ ಮುಗ್ಗಾ ಥಳಿಸಿದ ಅಮಾನವೀಯ ಕೃತ್ಯದ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗಾಯಗೊಂಡ ಮುಖ ಮತ್ತು ರಕ್ತಸಿಕ್ತ ಕಣ್ಣಿನ ಚಿತ್ರಗಳನ್ನು ಮದನ್ ಶರ್ಮಾ ಆನ್ಲೈನ್ನಲ್ಲಿ ಪೋಸ್ಟ್ ಮಾಡಿದ್ದಾರೆ. 65 ವರ್ಷ ವಯಸ್ಸಿನ ಶರ್ಮಾ ಅವರ ಮೇಲೆ ಮುಂಬೈನ ಕೊಂಡಿವಲ್ಲಿ ಪೂರ್ವ ಪ್ರದೇಶದಲ್ಲಿರುವ ಅವರ ನಿವಾಸದ ಸಮೀಪ ಹಲ್ಲೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ತಮ್ಮ ನಿವಾಸಿಗಳ ಸಂಘದ ವಾಟ್ಸ್ ಆ್ಯಪ್ ಗ್ರೂಪ್ಗೆ ಒಂದು ಕಾರ್ಟೂನ್ ಫಾರ್ವರ್ಡ್ ಮಾಡಿದ್ದಾಗಿ ಶರ್ಮಾ ದೂರಿನಲ್ಲಿ ವಿವರಿಸಿದ್ದಾರೆ. ಬಳಿಕ ಕಮಲೇಶ್ ಕದಂ ಎಂಬಾತ ಕರೆ ಮಾಡಿ ಹೆಸರು ಮತ್ತು ವಿಳಾಸ ಕೇಳಿದ್ದಾನೆ. ಮಧ್ಯಾಹ್ನ ಮನೆಯಿಂದ ಹೊರಗೆ ಕರೆದು ಗುಂಪು ಹಲ್ಲೆ ನಡೆಸಿದೆ ಎಂದು ಹೇಳಿದ್ದಾರೆ. ಭದ್ರತಾ ವ್ಯವಸ್ಥೆಯ ಸಿಸಿಟಿವಿ ದೃಶ್ಯಾವಳಿಯನ್ನು ವ್ಯಾಪಕವಾಗಿ ಷೇರ್ ಮಾಡಲಾಗಿದ್ದು, ಇದರ ಪ್ರಕಾರ ಮಾಸ್ಕ್ಗಳನ್ನು ಧರಿಸಿದ್ದ ಮಂದಿಯ ಗುಂಪು ಹಲ್ಲೆ ನಡೆಸಿದೆ.
ಶರ್ಮಾ ತಮ್ಮ ಅಪಾರ್ಟ್ಮೆಂಟ್ನ ಮುಖ್ಯದ್ವಾರದಿಂದ ಹೊರ ಬರುತ್ತಿರುವುದು ಹಾಗೂ ಸ್ವಲ್ಪ ಹೊತ್ತಿನಲ್ಲಿ ಗೇಟಿನ ಒಳಗೆ ಓಡಿ ಬರುತ್ತಿರುವ ಅವರನ್ನು ಗುಂಪು ಅಟ್ಟಿಸಿಕೊಂಡು ಬರುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಅವರ ಅಂಗಿ ಹಿಡಿದು ಎಳೆದು ಗುದ್ದುತ್ತಿರುವುದು ಕೂಡಾ ಕಂಡುಬರುತ್ತಿದೆ. ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಗಾಯಾಳು ಮದನ್ ಶರ್ಮಾ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
Join our WhatsApp group for latest news updates
video:
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm