ಬ್ರೇಕಿಂಗ್ ನ್ಯೂಸ್
12-09-20 05:11 pm Headline Karnataka News Network ಕ್ರೈಂ
ಮುಂಬೈ, ಸೆ.12: ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ವ್ಯಂಗ್ಯಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ಆರೋಪದಲ್ಲಿ ಆಡಳಿತಾರೂಢ ಶಿವಸೇನೆ ಕಾರ್ಯಕರ್ತರು ನಿವೃತ್ತ ನೌಕಾಪಡೆ ಅಧಿಕಾರಿಯೊಬ್ಬರನ್ನು ಹಿಗ್ಗಾ ಮುಗ್ಗಾ ಥಳಿಸಿದ ಅಮಾನವೀಯ ಕೃತ್ಯದ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗಾಯಗೊಂಡ ಮುಖ ಮತ್ತು ರಕ್ತಸಿಕ್ತ ಕಣ್ಣಿನ ಚಿತ್ರಗಳನ್ನು ಮದನ್ ಶರ್ಮಾ ಆನ್ಲೈನ್ನಲ್ಲಿ ಪೋಸ್ಟ್ ಮಾಡಿದ್ದಾರೆ. 65 ವರ್ಷ ವಯಸ್ಸಿನ ಶರ್ಮಾ ಅವರ ಮೇಲೆ ಮುಂಬೈನ ಕೊಂಡಿವಲ್ಲಿ ಪೂರ್ವ ಪ್ರದೇಶದಲ್ಲಿರುವ ಅವರ ನಿವಾಸದ ಸಮೀಪ ಹಲ್ಲೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ತಮ್ಮ ನಿವಾಸಿಗಳ ಸಂಘದ ವಾಟ್ಸ್ ಆ್ಯಪ್ ಗ್ರೂಪ್ಗೆ ಒಂದು ಕಾರ್ಟೂನ್ ಫಾರ್ವರ್ಡ್ ಮಾಡಿದ್ದಾಗಿ ಶರ್ಮಾ ದೂರಿನಲ್ಲಿ ವಿವರಿಸಿದ್ದಾರೆ. ಬಳಿಕ ಕಮಲೇಶ್ ಕದಂ ಎಂಬಾತ ಕರೆ ಮಾಡಿ ಹೆಸರು ಮತ್ತು ವಿಳಾಸ ಕೇಳಿದ್ದಾನೆ. ಮಧ್ಯಾಹ್ನ ಮನೆಯಿಂದ ಹೊರಗೆ ಕರೆದು ಗುಂಪು ಹಲ್ಲೆ ನಡೆಸಿದೆ ಎಂದು ಹೇಳಿದ್ದಾರೆ. ಭದ್ರತಾ ವ್ಯವಸ್ಥೆಯ ಸಿಸಿಟಿವಿ ದೃಶ್ಯಾವಳಿಯನ್ನು ವ್ಯಾಪಕವಾಗಿ ಷೇರ್ ಮಾಡಲಾಗಿದ್ದು, ಇದರ ಪ್ರಕಾರ ಮಾಸ್ಕ್ಗಳನ್ನು ಧರಿಸಿದ್ದ ಮಂದಿಯ ಗುಂಪು ಹಲ್ಲೆ ನಡೆಸಿದೆ.
ಶರ್ಮಾ ತಮ್ಮ ಅಪಾರ್ಟ್ಮೆಂಟ್ನ ಮುಖ್ಯದ್ವಾರದಿಂದ ಹೊರ ಬರುತ್ತಿರುವುದು ಹಾಗೂ ಸ್ವಲ್ಪ ಹೊತ್ತಿನಲ್ಲಿ ಗೇಟಿನ ಒಳಗೆ ಓಡಿ ಬರುತ್ತಿರುವ ಅವರನ್ನು ಗುಂಪು ಅಟ್ಟಿಸಿಕೊಂಡು ಬರುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಅವರ ಅಂಗಿ ಹಿಡಿದು ಎಳೆದು ಗುದ್ದುತ್ತಿರುವುದು ಕೂಡಾ ಕಂಡುಬರುತ್ತಿದೆ. ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಗಾಯಾಳು ಮದನ್ ಶರ್ಮಾ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
Join our WhatsApp group for latest news updates
video:
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm